ಆ್ಯಪ್ನಗರ

ಸಹಾಯ ಮಾಡಿದವರಿಗೆ ಕೃತಜ್ಞರಾಗಿ

ಧಾರವಾಡ : ವಿದ್ಯಾರ್ಥಿಗಳು ಆಧುನಿಕ ಜಗತ್ತಿನ ಬಾಹ್ಯ ಆಕರ್ಷಣೆಗೆ ತುತ್ತಾಗದೆ ಮನಸ್ಸನ್ನು ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವದರಿಂದ ವಿದ್ಯಾರ್ಥಿಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಬಳ್ಳಾರಿಯ ನಿವೃತ್ತ ಹೆಚ್ಚುವರಿ ಪೊಲೀಸ್‌ ಅಧೀಕ್ಷ ಕ ವಿಜಯಕುಮಾರ ಜಿ.ಡಂಬಳ ಹೇಳಿದರು.

Vijaya Karnataka 25 Aug 2019, 5:00 am
ಧಾರವಾಡ : ವಿದ್ಯಾರ್ಥಿಗಳು ಆಧುನಿಕ ಜಗತ್ತಿನ ಬಾಹ್ಯ ಆಕರ್ಷಣೆಗೆ ತುತ್ತಾಗದೆ ಮನಸ್ಸನ್ನು ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವದರಿಂದ ವಿದ್ಯಾರ್ಥಿಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಬಳ್ಳಾರಿಯ ನಿವೃತ್ತ ಹೆಚ್ಚುವರಿ ಪೊಲೀಸ್‌ ಅಧೀಕ್ಷ ಕ ವಿಜಯಕುಮಾರ ಜಿ.ಡಂಬಳ ಹೇಳಿದರು.
Vijaya Karnataka Web DRW-24MAILAR05


ನಗರದ ಕೆಎಲ್‌ಇ ಸಂಸ್ಥೆಯ ಶ್ರೀ ಮೃತ್ಯುಂಜಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ವಾಣಿಜ್ಯ ಅಧ್ಯಯನ ಕೇಂದ್ರದಲ್ಲಿ ಹಮ್ಮಿಕೊಂಡ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆ ಮನುಷ್ಯನ ಏಳಿಗೆಗೆ ಕಾರಣ. ವಿದ್ಯಾರ್ಥಿಗಳು ಸಣ್ಣ ಕನಸು, ಗುರಿ ಹೊಂದದೇ ದೊಡ್ಡ ಕನಸು, ಗುರಿ ಹೊಂದಬೇಕು.ಮನುಷ್ಯ ಎಷ್ಟೇ ಎತ್ತರಕ್ಕೆ ಬೆಳೆದರೂ ಮಾನವೀಯತೆ ಮರೆಯಬಾರದು. ಸಹಾಯ ಮಾಡಿದವರಿಗೆ ಕೃತಜ್ಞರಾಗಿರಬೇಕು ಎಂದರು.

ಗೌರವ ಅತಿಥಿ ಎಸಿಪಿ ಎಂ.ಎನ್‌.ರುದ್ರಪ್ಪ ಮಾತನಾಡಿ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಮೂಲಕ ಸದೃಢ ವ್ಯಕ್ತಿಗಳಾಗಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಸರಕಾರಿ ನೌಕರಿ ಪಡೆಯುವುದು ಕಷ್ಟ. ವಿದ್ಯಾರ್ಥಿಗಳು ಶ್ರದ್ಧೆ, ಶ್ರಮ ವಹಿಸಿ ಪ್ರಾಮಾಣಿಕ ಗುರಿಯ ಬೆನ್ನು ಹತ್ತಬೇಕು ಎಂದರು.

ಅಧ್ಯಕ್ಷ ತೆ ವಹಿಸಿದ್ದ ಪ್ರೊ.ವಿ.ವಿ.ಪಾಟೀಲ ಮಾತನಾಡಿ, ವಿದ್ಯಾರ್ಥಿಗಳಿಗೆ ಮಹಾವಿದ್ಯಾಲಯದಲ್ಲಿ ನೀಡುವ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳುವ ಮೂಲಕ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದರು.

ಇದೇ ವೇಳೆ ಪ್ರಧಾನಮಂತ್ರಿಗಳ ಪದಕ ಪಡೆದ ಎಸಿಪಿ ಎಂ.ಎನ್‌.ರುದ್ರಪ್ಪ ಹಾಗೂ 2016ನೇ ಸಾಲಿನ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ವಿಶಿಷ್ಟ ಸೇವಾ ಪದಕ ಪಡೆದ ವಿಜಯಕುಮಾರ ಜಿ.ಡಂಬಳ ಅವರನ್ನು ಸನ್ಮಾನಿಸಲಾಯಿತು.

ಅಶ್ವಿನಿ ಹಾಗೂ ಸುಷ್ಮಾ ಪ್ರಾರ್ಥಿಸಿದರು. ಡಾ.ಎಂ.ಪಿ.ಅನುರಾಧಾ ಸ್ವಾಗತಿಸಿದರು. ಡಾ.ನೀಲಕ್ಕಾ ಸಿ.ಪಾಟೀಲ ಪರಿಚಯಿಸಿದರು. ಪ್ರೊ.ಎಸ್‌.ಎಸ್‌.ಸಂಗೋಳ್ಳಿ ನಿರೂಪಿಸಿದರು. ಡಾ.ತಾರಾ.ಬಿ.ಎನ್‌ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ