ಹುಬ್ಬಳ್ಳಿ : ದೇಶದಲ್ಲಿ ಬಿಜೆಪಿ ಜನಾದೇಶಕೆæ್ಕ ವಿರುದ್ಧವಾಗಿ ಅನ್ಯ ಪಕ್ಷ ಗಳ ಶಾಸಕರಿಗೆ ಹಣ, ಅಧಿಕಾರದ ಆಸೆ ತೋರಿಸಿ ತನ್ನತ್ತ ಸೆಳೆಯುತ್ತಿದೆ ಎಂದು ರಾಜ್ಯ ಕಾಂಗೆæ್ರಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಆರೋಪಿಸಿದ್ದಾರೆ.
ಕುಂದಗೋಳದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ''ಕೇಂದ್ರದಲ್ಲಿ ಪ್ರಧಾನಿ ಮೋದಿ ಹಾಗೂ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಏನು ಮಾಡುತ್ತಿದ್ದಾರೆ ಎಂಬುದನ್ನು ಇಡೀ ದೇಶದ ಜನ ನೋಡುತ್ತಿದ್ದಾರೆ'' ಎಂದರು.
''ಪ್ರಧಾನಿ ಮೋದಿ ಪಶ್ಚಿಮ ಬಂಗಾಳದಲ್ಲಿ 40 ಜನ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ 20 ಜನ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆæ ಎಂಬ ಹೇಳಿಕೆ ನೀಡುತ್ತಿದ್ದಾರೆæ. ಮೋದಿ ಹಾಗೂ ಯಡಿಯೂರಪ್ಪ ಪ್ರಜಾಪ್ರಭುತ್ವಕೆæ್ಕ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ'' ಎಂದು ಆಕ್ರೋಶ ವ್ಯಕ್ತಪಡಿಸಿದರು.
''ಪ್ರಧಾನಿ ಮೋದಿ ಐದು ವರ್ಷದ ಅಧಿಕಾರಾವಧಿಯಲ್ಲಿ ದೇಶದ ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡಿಲ್ಲ. ದುಡಿಯುವ ಕೈಗಳಿಗೆ ಉದ್ಯೋಗದ ಭರವಸೆ ನೀಡಿ ಅಧಿಕಾರ ಪಡೆದುಕೊಂಡ ಮೋದಿ ಬಳಿಕ ಮೋಸ ಮಾಡಿದ್ದಾರೆ. ಹೀಗಾಗಿ ದೇಶದಲ್ಲಿ ಜನ ಬದಲಾವಣೆ ಬಯಸಿದ್ದಾರೆ. ಮೇ 23ರ ಬಳಿಕ ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ'' ಎಂದರು.
''ಬಿಜೆಪಿ ನಾಯಕರು ರಾಜ್ಯ ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸಿ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ. ಸಮ್ಮಿಶ್ರ ಸರಕಾರ ಭದ್ರವಾಗಿದ್ದು, ಐದು ವರ್ಷ ಪೂರ್ಣಗೊಳಿಸಲಿದೆ'' ಎಂದು ತಿಳಿಸಿದರು.
''ಮಾಜಿ ಸಚಿವ ದಿ. ಸಿ.ಎಸ್. ಶಿವಳ್ಳಿ ಕಾಂಗೆæ್ರಸ್ ಪಕ್ಷ ದ ನಿಷ್ಠಾವಂತ ನಾಯಕ. ಗ್ರಾಮೀಣ ಜನರೊಂದಿಗೆ ಅವರು ಹೊಂದಿದ್ದ ಒಡನಾಟ, ಉತ್ತಮ ಸಂಬಂಧ, ಕಳಕಳಿ ರಾಜಕಾರಣಿಗಳಿಗೆ ಮಾದರಿ. ಇಲ್ಲಿನ ಜನರಿಗೆ ಶಿವಳ್ಳಿ ಏನು ಮಾಡಿದ್ದಾರೆ ಎನ್ನುವುದು ಗೊತ್ತು. ಅದನ್ನು ನೋಡಿ ಮತ ಹಾಕುತ್ತಾರೆ'' ಎಂದರು.
ಸುದ್ದಿಗೋಷ್ಠಿಯಲ್ಲಿ ಆರ್.ವಿ.ದೇಶಪಾಂಡೆ, ಬಸವರಾಜ ಹೊರಟ್ಟಿ, ಯು.ಟಿ.ಖಾದರ, ವಿನಯ ಕುಲಕರ್ಣಿ, ವೀರಣ್ಣ ಮತ್ತಿಕಟ್ಟಿ,, ಎಚ್.ಕೆ.ಪಾಟೀಲ, ಕೆಪಿಸಿಸಿ ಸದಸ್ಯ ಅರವಿಂದ ಕಟಗಿ, ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್ ಖಾನ್, ಶರಣಪ್ಪ ಮತ್ತಿಕಟ್ಟಿ ಇದ್ದರು.
ಕುಂದಗೋಳದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ''ಕೇಂದ್ರದಲ್ಲಿ ಪ್ರಧಾನಿ ಮೋದಿ ಹಾಗೂ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಏನು ಮಾಡುತ್ತಿದ್ದಾರೆ ಎಂಬುದನ್ನು ಇಡೀ ದೇಶದ ಜನ ನೋಡುತ್ತಿದ್ದಾರೆ'' ಎಂದರು.
''ಪ್ರಧಾನಿ ಮೋದಿ ಪಶ್ಚಿಮ ಬಂಗಾಳದಲ್ಲಿ 40 ಜನ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ 20 ಜನ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆæ ಎಂಬ ಹೇಳಿಕೆ ನೀಡುತ್ತಿದ್ದಾರೆæ. ಮೋದಿ ಹಾಗೂ ಯಡಿಯೂರಪ್ಪ ಪ್ರಜಾಪ್ರಭುತ್ವಕೆæ್ಕ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ'' ಎಂದು ಆಕ್ರೋಶ ವ್ಯಕ್ತಪಡಿಸಿದರು.
''ಪ್ರಧಾನಿ ಮೋದಿ ಐದು ವರ್ಷದ ಅಧಿಕಾರಾವಧಿಯಲ್ಲಿ ದೇಶದ ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡಿಲ್ಲ. ದುಡಿಯುವ ಕೈಗಳಿಗೆ ಉದ್ಯೋಗದ ಭರವಸೆ ನೀಡಿ ಅಧಿಕಾರ ಪಡೆದುಕೊಂಡ ಮೋದಿ ಬಳಿಕ ಮೋಸ ಮಾಡಿದ್ದಾರೆ. ಹೀಗಾಗಿ ದೇಶದಲ್ಲಿ ಜನ ಬದಲಾವಣೆ ಬಯಸಿದ್ದಾರೆ. ಮೇ 23ರ ಬಳಿಕ ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ'' ಎಂದರು.
''ಬಿಜೆಪಿ ನಾಯಕರು ರಾಜ್ಯ ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸಿ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ. ಸಮ್ಮಿಶ್ರ ಸರಕಾರ ಭದ್ರವಾಗಿದ್ದು, ಐದು ವರ್ಷ ಪೂರ್ಣಗೊಳಿಸಲಿದೆ'' ಎಂದು ತಿಳಿಸಿದರು.
''ಮಾಜಿ ಸಚಿವ ದಿ. ಸಿ.ಎಸ್. ಶಿವಳ್ಳಿ ಕಾಂಗೆæ್ರಸ್ ಪಕ್ಷ ದ ನಿಷ್ಠಾವಂತ ನಾಯಕ. ಗ್ರಾಮೀಣ ಜನರೊಂದಿಗೆ ಅವರು ಹೊಂದಿದ್ದ ಒಡನಾಟ, ಉತ್ತಮ ಸಂಬಂಧ, ಕಳಕಳಿ ರಾಜಕಾರಣಿಗಳಿಗೆ ಮಾದರಿ. ಇಲ್ಲಿನ ಜನರಿಗೆ ಶಿವಳ್ಳಿ ಏನು ಮಾಡಿದ್ದಾರೆ ಎನ್ನುವುದು ಗೊತ್ತು. ಅದನ್ನು ನೋಡಿ ಮತ ಹಾಕುತ್ತಾರೆ'' ಎಂದರು.
ಸುದ್ದಿಗೋಷ್ಠಿಯಲ್ಲಿ ಆರ್.ವಿ.ದೇಶಪಾಂಡೆ, ಬಸವರಾಜ ಹೊರಟ್ಟಿ, ಯು.ಟಿ.ಖಾದರ, ವಿನಯ ಕುಲಕರ್ಣಿ, ವೀರಣ್ಣ ಮತ್ತಿಕಟ್ಟಿ,, ಎಚ್.ಕೆ.ಪಾಟೀಲ, ಕೆಪಿಸಿಸಿ ಸದಸ್ಯ ಅರವಿಂದ ಕಟಗಿ, ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್ ಖಾನ್, ಶರಣಪ್ಪ ಮತ್ತಿಕಟ್ಟಿ ಇದ್ದರು.