ಆ್ಯಪ್ನಗರ

ಬಿಜೆಪಿಗೆ ಅನರ್ಹರ ಚಿಂತೆ, ನೆರೆ ಸಂತ್ರಸ್ತರದಲ್ಲ: ದಿನೇಶ್ ಗುಂಡೂರಾವ್ ವಾಗ್ದಾಳಿ

ನೆರೆ ಪರಿಹಾರ ಒದಗಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ವಿಫಲವಾಗಿವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

Vijaya Karnataka Web 24 Sep 2019, 11:54 am
ಹುಬ್ಬಳ್ಳಿ: ಬಿಜೆಪಿಯವರು ಅನರ್ಹ ಶಾಸಕರ ಸಮಸ್ಯೆಗೆ ಸ್ಪಂದಿಸಲು ವರಿಷ್ಠರ ಬಳಿ ಹೋಗುತ್ತಾರೆ. ಆದರೆ, ರಾಜ್ಯದ ಸಮಸ್ಯೆಗೆ ಮಾತ್ರ ಸ್ಪಂದಿಸಲು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
Vijaya Karnataka Web dinesh gundurao


ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಬಂದಾಗ ಕೇಂದ್ರ ಸರಕಾರ ಸ್ಪಂದಿಸಬೇಕು. ಆದರೆ, ರಾಜ್ಯದಲ್ಲಿ ಪ್ರವಾಹ ಸಂಭವಿಸಿ ಸಾಕಷ್ಟು ಸಮಸ್ಯೆಯಾಗಿದ್ದರೂ, ಕೇಂದ್ರ ಸರಕಾರ ನಿರ್ಲಕ್ಷ್ಯ ಧೋರಣೆ ತೋರುತ್ತಿದೆ ಎಂದು ಕಿಡಿಕಾರಿದರು.

ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡ್ರೆ, ಕುಕ್ಕದೇ ಬಿಡುತ್ತಾ: ಎಚ್ಡಿಕೆಗೆ ಸಿದ್ದು ಗುದ್ದು

ನೆರೆ ಪರಿಹಾರ ಒದಗಿಸಲುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಈ ವಿಷಯದಲ್ಲಿ ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಇಂದು (ಮಂಗಳವಾರ) ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.

ಯಾವುದೇ ಚುನಾವಣೆ ಆಗಲಿ ನಮ್ಮ ಕುಟುಂಬದಿಂದ ಯಾರು ಸ್ಪರ್ಧಿಸಲ್ಲ: ಎಚ್‌ಡಿಕೆ

25 ಜನ ಸಂಸದರಿದ್ದರೂ, ರಾಜ್ಯದ ಸಮಸ್ಯೆಯನ್ನು ಎತ್ತಿ ಹಿಡಿಯುತ್ತಿಲ್ಲ. ನೆರೆ ಸಂಬಂಧ ಇಲ್ಲಿಯವರೆಗೂ ಯಾವುದೇ ಸರ್ವಪಕ್ಷ ಸಭೆ ಕರೆದಿಲ್ಲ. ಹೀಗಾಗಿ ಬಿಜೆಪಿಯ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಕೈಗೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ