ಆ್ಯಪ್ನಗರ

'ಅಲ್ಲಲ್ಲಿ ಬೆಂಕಿ ಹಚ್ಚಿದ್ದು ಗಮನಿಸಿದರೆ ಇದೊಂದು ಅತ್ಯಂತ ಪೂರ್ವಯೋಜಿತ ಘಟನೆಯಾಗಿದೆ' : ಕಟೀಲ್

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ರಾಜ್ಯದಲ್ಲಿ ಗಲಭೆ ನಡೆಸಿ ಅರಾಜಕತೆ ಸೃಷ್ಟಿಸುವ ಹುನ್ನಾರ ನಡೆದಿದೆ. ಈ ಹಿಂದೆ ಮಂಗಳೂರಿನಲ್ಲಿಸಿಎಎ ವಿರೋಧಿಸಿ ಮಾಜಿ ಸಚಿವ, ಹಾಲಿ ಶಾಸಕರು ಪ್ರಚೋದಿತ ಭಾಷಣ ಮಾಡಿದ ಮರುದಿನವೇ ದೊಡ್ಡ ಮಟ್ಟದ ಗಲಭೆ ಸೃಷ್ಟಿಯಾಗಿತ್ತು ಎಂಬುದನ್ನು ಅವರು ಈ ಸಂದರ್ಭದಲ್ಲಿ ಹೇಳಿದರು.

Vijaya Karnataka Web 12 Aug 2020, 2:03 pm
ಹುಬ್ಬಳ್ಳಿ : ಬೆಂಗಳೂರಿನ ಕೆಜೆ ಹಳ್ಳಿಯಲ್ಲಿ ಮಂಗಳವಾರ ನಡೆದ ಹಿಂಸಾತ್ಮಕ ಗಲಭೆಯು ರಾಜಕೀಯ ಪ್ರೇರಿತದಿಂದ ಕೂಡಿದೆ. ಇದೊಂದು ಯೋಜಿತ ಗಲಭೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲು ಆರೋಪಿಸಿದರು.
Vijaya Karnataka Web Nalin kumar


ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ರಾಜ್ಯದಲ್ಲಿ ಗಲಭೆ ನಡೆಸಿ ಅರಾಜಕತೆ ಸೃಷ್ಟಿಸುವ ಹುನ್ನಾರ ನಡೆದಿದೆ. ಈ ಹಿಂದೆ ಮಂಗಳೂರಿನಲ್ಲಿಸಿಎಎ ವಿರೋಧಿಸಿ ಮಾಜಿ ಸಚಿವ, ಹಾಲಿ ಶಾಸಕರು ಪ್ರಚೋದಿತ ಭಾಷಣ ಮಾಡಿದ ಮರುದಿನವೇ ದೊಡ್ಡ ಮಟ್ಟದ ಗಲಭೆ ಸೃಷ್ಟಿಯಾಗಿತ್ತು ಎಂಬುದನ್ನು ಅವರು ಈ ಸಂದರ್ಭದಲ್ಲಿ ಹೇಳಿದರು.

'ಗಲಭೆಕೋರರಿಗೆ ಹಿರಿಯರೇ ಬುದ್ಧಿ ಹೇಳಬೇಕಲ್ವಾ? ನನ್ನ ಹೇಳಿಕೆಯಲ್ಲಿ ತಪ್ಪೇನಿದೆ?: ಸಿದ್ದರಾಮಯ್ಯ

ಏಕಕಾಲಕ್ಕೆ ಮೂರು ಸಾವಿರ ಜನ ಸೇರೋದು, ಅಷ್ಟೊಂದು ಕಲ್ಲು, ಪೆಟ್ರೋಲ್ ಸಂಗ್ರಹಿಸುವುದು, ಪೊಲೀಸರು, ಮಾಧ್ಯಮವರ ಮೇಲೆ ಹಲ್ಲೆ ನಡೆಸಿದ್ದು, ಅಲ್ಲಲ್ಲಿ ಬೆಂಕಿ ಹಚ್ಚಿದ್ದು ಗಮನಿಸಿದರೆ ಇದೊಂದು ಅತ್ಯಂತ ಪೂರ್ವಯೋಜಿತ ಘಟನೆಯಾಗಿದೆ ಎಂದಿರುವ ಕಟೀಲ್, ಇದರ ಹಿಂದೆ ಯಾರದೋ ಕೈವಾಡ ಇದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದು ಸಂಶಯ ವ್ಯಕ್ತಪಡಿಸಿದರು.

'ಗಲಭೆಗೆ ಕಾರಣವಾದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ, ರಾಜ್ಯ ಸರ್ಕಾರಕ್ಕೆ ನಮ್ಮ

ಇನ್ನು ರಾಜ್ಯದಲ್ಲಿ ಬಿಜೆಪಿ ಸರಕಾರ ಇದೇ ಎನ್ನುವ ಕಾರಣಕ್ಕೆ ಅರಾಜಕತೆ ಸೃಷ್ಟಿಸಬೇಕೆನ್ನುವ ವಿಕ್ಷಿಪ್ತ ಮನಸ್ಸುಗಳಿವೆ. ಈ ಘಟನೆಗೆ ಸಂಬಂಧಿಸಿ ಎಸ್‌ಡಿಪಿಐ, ಕೆಎಫ್‌ಡಿ ಸಂಘಟನೆಗಳ ಕೈವಾಡದ ಬಗ್ಗೆ ತನಿಖೆಯಾಗಬೇಕು. ತಪ್ಪಿತಸ್ಥರ ವಿರುದ್ಧ ಸರಕಾರ ಕಠಿಣ ಕ್ರಮಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು. ಅಲ್ಲದೇ ಪ್ರಕರಣದ ತನಿಖೆ ನಡೆಸಲು ರಾಜ್ಯದ ಪೊಲೀಸರು ಸಮರ್ಥರಿದ್ದಾರೆ. ಸಿಬಿಐ, ಸಿಐಡಿ ಅಥವಾ ಇನ್ಯಾವುದೇ ತನಿಖೆ ಬಗ್ಗೆ ಅಂತಿಮವಾಗಿ ಸರಕಾರವೇ ನಿರ್ಧರಿಸಲಿದೆ ಎಂದು ತಿಳಿಸಿದರು.

ಪತ್ರಕರ್ತರ ಪ್ರಶ್ನೆಗೆ ನಳಿನ್ ಕುಮಾರ್ ಕಟೀಲ್ ತಬ್ಬಿಬ್ಬು..!
ಇದೇ ವೇಳೆ ಬಿಎಸ್ಸೆನ್ನೆಲ್ ಸಂಸ್ಥೆಯಲ್ಲಿ ದೇಶದ್ರೋಹಿಗಳೇ ತುಂಬಿದ್ದಾರೆ ಎಂದು ಸಂಸದ ಅನಂತಕುಮಾರ್ ಹೆಗಡೆ ನೀಡಿದ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ತಬ್ಬಿಬ್ಬಾದ ನಳೀನ್ ಕುಮಾರ ಕಟೀಲು, ನಿಮ್ಮೆಲ್ಲ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ. ಇನ್ನೂ ಒಂದು ಗಂಟೆ ಕುಳಿತುಕೊಳ್ಳುತ್ತೇನೆ ಎಂದು ಸಮಜಾಯಿಷಿ ನೀಡುತ್ತಾ, ಹೆಗಡೆಯವರು ಏನು ಹೇಳಿಕೆ ನೀಡಿದ್ದಾರೆ ಎಂಬುದನ್ನು ನಾನು ಗಮನಿಸಿಲ್ಲ, ಅವರಿಂದ ವಿವರಣೆ ಪಡೆಯುತ್ತೇನೆ ಎಂದು ಹೇಳುತ್ತಲೇ ಸುದ್ದಿಗೋಷ್ಠಿಯನ್ನು ಮೊಟಕುಗೊಳಿಸಿದರು. ಇದಕ್ಕೂ ಮೊದಲು ಕಟೀಲು ಅವರು, ನಷ್ಟದಲ್ಲಿರುವ ಸಂಸ್ಥೆಗಳಿಗೆ ಕೇಂದ್ರ ಸರಕಾರ ಪುನಶ್ಚೇತನ ನೀಡಿದೆ. ಇದು ಪ್ರಧಾನಿಯವರ ಸಂಕಲ್ಪ. ಅದರಂತೆ ಎಲ್ಲವೂ ನಡೆಯುತ್ತಿದೆ ಎಂದು ಹೇಳಿದ್ದರು.

'ಯಾವುದೇ ಧರ್ಮದ ಸಮುದಾಯ ಕಾನೂನಿಗೆ ಅತೀತರಲ್ಲ. ನೆಲದ ಕಾನೂನನ್ನು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ