ಆ್ಯಪ್ನಗರ

ಬಿಜೆಪಿ ಸಂಸ್ಥಾಪನಾ ದಿನಾಚರಣೆ

ಹುಬ್ಬಳ್ಳಿ: ಇಲ್ಲಿನ ದೇಶಪಾಂಡೆ ನಗರದ ಪಕ್ಷದ ಕಚೇರಿಯಲ್ಲಿಪಕ್ಷದ ಸಂಸ್ಥಾಪಕ ಪಂಡಿತ ದೀನದಯಾಳ ಉಪಾಧ್ಯಾಯರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಭಾರತೀಯ ಜನತಾ ಪಕ್ಷದ 40ನೇ ಸಂಸ್ಥಾಪನಾ ದಿನ ಆಚರಿಸಲಾಯಿತು.

Vijaya Karnataka 7 Apr 2020, 5:00 am
ಹುಬ್ಬಳ್ಳಿ: ಇಲ್ಲಿನ ದೇಶಪಾಂಡೆ ನಗರದ ಪಕ್ಷದ ಕಚೇರಿಯಲ್ಲಿಪಕ್ಷದ ಸಂಸ್ಥಾಪಕ ಪಂಡಿತ ದೀನದಯಾಳ ಉಪಾಧ್ಯಾಯರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಭಾರತೀಯ ಜನತಾ ಪಕ್ಷದ 40ನೇ ಸಂಸ್ಥಾಪನಾ ದಿನ ಆಚರಿಸಲಾಯಿತು.
Vijaya Karnataka Web bjps founding day
ಬಿಜೆಪಿ ಸಂಸ್ಥಾಪನಾ ದಿನಾಚರಣೆ


ಈ ಸಂದರ್ಭದಲ್ಲಿಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಮಾತನಾಡಿ, ಪಕ್ಷದ ಸಂಸ್ಥಾಪಕರ ತ್ಯಾಗದ ಪರಿಣಾಮವಾಗಿ ಇಂದು ಪಕ್ಷ ದೊಡ್ಡ ಮಟ್ಟದಲ್ಲಿಬೆಳೆದಿದೆ. ಸುಮಾರು 14 ಕೋಟಿ ಸದಸ್ಯರನ್ನು ಹೊಂದಿದ ಜಗತ್ತಿನ ಏಕೈಕ ದೊಡ್ಡ ಪಕ್ಷವಾಗಿ ಬಿಜೆಪಿ ಹೊರ ಹೊಮ್ಮಿದೆ. ಇದಕ್ಕೆ ಶ್ರಮಿಸಿದ ಎಲ್ಲನಾಯಕರು, ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಹೇಳಿದರು.

ಕಾರ್ಯಕ್ರಮದಲ್ಲಿಧಾರವಾಡ ಭಾಗದ ಪ್ರಭಾರಿ ಲಿಂಗರಾಜ ಪಾಟೀಲ, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಕಲಬುರ್ಗಿ, ಧಾರವಾಡ ಗ್ರಾಮಾಂತರ ಅಧ್ಯಕ್ಷ ಬಸವರಾಜ ಕುಂದಗೋಳಮಠ, ಮುಖಂಡರಾದ ಜಯತೀರ್ಥ ಕಟ್ಟಿ, ನಾರಾಯಣ ಜರತಾರಘರ, ಸಂತೋಷ ಚವ್ಹಾಣ, ದತ್ತಮೂರ್ತಿ ಕುಲಕರ್ಣಿ ಹಾಗೂ ಪಕ್ಷದ ಸೆಂಟ್ರಲ್‌ ವಕ್ತಾರ ರವಿ ನಾಯ್ಕ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ