ಆ್ಯಪ್ನಗರ

ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ: ಮುನ್ಸೂಚನೆ ನೀಡಿದ ಬೊಂಬೆ ಭವಿಷ್ಯ

Dharwad News: ಧಾರವಾಡದ ಉಪ್ಪಿನ ಬೆಟಗೇರಿ ಗ್ರಾಮದ ಬಳಿಯ ಹನುಮನಕೊಪ್ಪದಲ್ಲಿ ಪ್ರತಿ ವರ್ಷ ಮಣ್ಣಿನ ಬೊಂಬೆಯ ಭವಿಷ್ಯ ಕೇಳಲಾಗುತ್ತದೆ. ಪ್ರತಿ ಬಾರಿಯೂ ಒಂದೊಂದು ರೀತಿಯ ಭವಿಷ್ಯವನ್ನು ಹೇಳುವ ಬೊಂಬೆಯು, ಈ ಬಾರಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗುತ್ತದೆ ಎಂದು ಹೇಳಿದೆ. ಈ ಹಿಂದೆ, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗಲೂ ಇದೇ ರೀತಿಯ ಭವಿಷ್ಯವನ್ನು ನುಡಿದಿತ್ತು. ಅಷ್ಟೇ ಅಲ್ಲ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಆಗುವ ಬದಲಾವಣೆಗಳ ಬಗ್ಗೆಯೂ ಈ ಬೊಂಬೆಯು ಭವಿಷ್ಯ ನುಡಿದಿದ್ದು ಅದು ಸರಿಯಾಗಿದೆ ಎಂದು ಹೇಳಲಾಗಿದೆ.

Edited byಚೇತನ್ ಓ.ಆರ್. | Vijaya Karnataka Web 23 Mar 2023, 11:57 am

ಹೈಲೈಟ್ಸ್‌:

  • ಧಾರವಾಡದ ಉಪ್ಪಿನ ಬೆಟಗೇರಿ ಗ್ರಾಮದ ಬಳಿಯ ಹನುಮನಕೊಪ್ಪದಲ್ಲಿ ಪ್ರತಿ ವರ್ಷವೂ ಕೇಳಲಾಗುತ್ತೆ ಬೊಂಬೆ ಭವಿಷ್ಯ.
  • ಮಣ್ಣಿನ ಬೊಂಬೆಯು ನೀಡುವ ಭವಿಷ್ಯವಾಣಿಯಂತೆಯೇ ರಾಜ್ಯ, ರಾಷ್ಟ್ರಮಟ್ಟದಲ್ಲಿ ನಡೆಯುವ ಘಟನೆಗಳು.
  • ಬೊಂಬೆ ಹೇಳಿರುವ ಭವಿಷ್ಯವಾಣಿಗಳು ನಿಜವಾಗಿರುವುದರಿಂದ ಈ ಬಾರಿಯ ಬೊಂಬೆ ಭವಿಷ್ಯವಾಣಿಗೆ ಇನ್ನಿಲ್ಲದ ಮಹತ್ವ.
  • ಈ ಬಾರಿ, ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾಗುತ್ತೆ ಎಂದಿರುವ ಬೊಂಬೆ; ಈ ಹಿಂದೆ ಯಡಿಯೂರಪ್ಪನವರ ವಿಚಾರದಲ್ಲೂ ಹೀಗೇ ಹೇಳಿದ್ದು ನಿಜವಾಗಿತ್ತು!
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Bombe Bhavishya - Doll Prophecy hits leadership change in Karnataka
ಧಾರವಾಡ ಜಿಲ್ಲೆಯ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮಕ್ಕೆ ಹೊಂದಿಕೊಂಡಿರುವ ಹನುಮನಕೊಪ್ಪ ಗ್ರಾಮಸ್ಥರು ಪ್ರತಿವರ್ಷ ಯುಗಾದಿಯಂದು ಬೊಂಬೆ ಭವಿಷ್ಯ ಕೇಳುತ್ತಾರೆ.
ಧಾರವಾಡ: ರಾಜ್ಯ ರಾಜಕಾರಣದಲ್ಲಿ ನಾಯಕತ್ವದ ಬದಲಾವ ಣೆಯಾಗಲಿದೆ ಎಂಬ ಭವಿಷ್ಯವನ್ನು ಮಣ್ಣಿನ ಬೊಂಬೆ ತೋರಿಸಿಕೊಟ್ಟಿದೆ. ಧಾರವಾಡ ಜಿಲ್ಲೆಯ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮಕ್ಕೆ ಹೊಂದಿಕೊಂಡಿರುವ ಹನುಮನಕೊಪ್ಪ ಗ್ರಾಮಸ್ಥರು ಪ್ರತಿವರ್ಷ ಯುಗಾದಿಯಂದು ಒಂದು ಸಂಪ್ರದಾಯ ನಡೆಸಿಕೊಂಡು ಬಂದಿದ್ದಾರೆ.
ಅಮವಾಸ್ಯೆಯಂದು ತಮ್ಮ ಗ್ರಾಮದ ಹಳ್ಳದ ದಂಡೆಯ ಮೇಲೆ ಒಂದು ಸಮತಟ್ಟಾದ ಕಲಾಕೃತಿ ಮಾಡಿ ಅದರ ನಾಲ್ಕೂ ದಿಕ್ಕಿಗೆ ರಾಜಕಾರಣದ ಬೊಂಬೆಗಳನ್ನು ಮಾಡಿಡುತ್ತಾರೆ. ಒಳಗಡೆ ರೈತರು, ಸೈನಿಕರು, ಕಾಳುಗಳನ್ನು ಇಡುತ್ತಾರೆ. ಅಮವಾಸ್ಯೆ ದಿನ ಈ ಆಕೃತಿ ಮಾಡಿಟ್ಟು, ಮಾರನೆ ದಿನ ಅದನ್ನು ನೋಡಲು ಹೋಗುತ್ತಾರೆ. ಈ ಆಕೃತಿಯ ಯಾವ್ಯಾವ ಭಾಗಕ್ಕೆ ಪೆಟ್ಟಾಗಿದೆ ಎಂಬುದನ್ನು ನೋಡಿ ಅದರ ಮೇಲೆ ಆ ಭಾಗದ ಭವಿಷ್ಯವನ್ನು ಇವರು ನಿರ್ಧರಿಸುತ್ತಾರೆ. ಮಳೆ ಹೇಗಿದೆ ಹಾಗೂ ಯಾವ ಬೆಳೆಗೆ ಬೆಲೆ ಸಿಗುತ್ತದೆ ಎಂಬುದನ್ನೂ ಇವರ ನಿರ್ಧರಿಸುತ್ತಾರೆ.

ಬೊಂಬೆ ನುಡಿದ ಭವಿಷ್ಯವೇನು?

ಪ್ರಸಕ್ತ ವರ್ಷ ಕರ್ನಾಟಕ ದಿಕ್ಕಿನ ರಾಜಕೀಯ ಬೊಂಬೆಯ ಬಲಗಾಲಿಗೆ ಪೆಟ್ಟಾಗಿದ್ದು, ನಮ್ಮ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಯಾಗಬಹುದು ಎಂದು ಊಹಿಸಲಾಗಿದೆ. ಸದ್ಯ ನಾಡಿನ ದೊರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದು, ಈ ಬೊಂಬೆ ಭವಿಷ್ಯದ ಪ್ರಕಾರ ನಾಯಕತ್ವ ಬದಲಾಗಬಹುದು ಎಂದು ಬೊಂಬೆ ಭವಿಷ್ಯ ನುಡಿದಿದೆ.

ಯಡಿಯೂರಪ್ಪನವರ ಬಗ್ಗೆಯೂ ಹೀಗೇ ಹೇಳಿತ್ತು!

ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನಮ್ಮ ರಾಜ್ಯದ ನಾಯಕತ್ವ ಬದಲಾಗಬಹುದು ಎಂಬುದನ್ನು ಈ ಬೊಂಬೆ ಭವಿಷ್ಯ ನುಡಿದಿತ್ತು. ಆ ಪ್ರಕಾರ ಯಡಿಯೂರಪ್ಪನವರು ಕೆಳಗಿಳಿದ ಪ್ರಸಂಗ ಎಲ್ಲರಿಗೂ ಗೊತ್ತೇ ಇದೆ.

CM Basavaraj Bommai: ಮತ್ತೆ ನಾನು ಸಿಎಂ ಆಗಿ ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಇಂದಿರಾ ಗಾಂಧಿ ಬಗ್ಗೆ ಹೇಳಿತ್ತು ಭವಿಷ್ಯ


ಹಿಂದೆ, ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ, ಹನುಮನಕೊಪ್ಪ ಗ್ರಾಮಸ್ಥರು ಮಾಡಿದ್ದ ಈ ಆಚರಣೆಯಲ್ಲಿ ರಾಷ್ಟ್ರನಾಯಕರ ಬೊಂಬೆಯೊಂದು ಉರುಳಿ ಬಿದ್ದಿತ್ತು. ರಾಷ್ಟ್ರನಾಯಕರಿಗೆ ಆಪತ್ತು ಎದುರಾಗಬಹದು ಎಂಬುದನ್ನು ಆ ಮೂಲಕ ಬೊಂಬೆ ಹೇಳಿತ್ತು. ಅದರ ತರುವಾಯ ಇಂದಿರಾಗಾಂಧಿ ಹತ್ಯೆ ಕೂಡ ಆಯಿತು. ಸದ್ಯ ರಾಜ್ಯ ರಾಜಕಾರಣದ ಬೊಂಬೆಯ ಬಲಗಾಲಿಗೆ ಪೆಟ್ಟಾಗಿದ್ದು, ಇದು ನಾಯಕತ್ವ ಬದಲಾವಣೆಯ ಮುನ್ಸೂಚನೆಯನ್ನು ನೀಡಿದೆ. ಈ ಗ್ರಾಮಸ್ಥರು ಅನೇಕ ವರ್ಷಗಳಿಂದ ಈ ಆಚರಣೆ ಮಾಡುತ್ತ ಬಂದಿದ್ದು, ಅನೇಕ ಸಂಗತಿಗಳು ನಿಜ ಕೂಡ ಆಗಿವೆ.
ಲೇಖಕರ ಬಗ್ಗೆ
ಚೇತನ್ ಓ.ಆರ್.
ಪ್ರಸ್ತುತ, ವಿಜಯ ಕರ್ನಾಟಕ ವೆಬ್ ನಲ್ಲಿ ಪತ್ರಕರ್ತನಾಗಿ 2022ರಿಂದ ಪತ್ರಕರ್ತನಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2007ರಲ್ಲಿ ತುಮಕೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ 5ನೇ ರ‍್ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಮೈಸೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ ಪಿಎಚ್ ಡಿ ಪದವಿ ಪಡೆದಿದ್ದಾರೆ. ಜಿಲ್ಲಾ ಸುದ್ದಿಗಳಿಂದ ಹಿಡಿದು ಕ್ರೀಡೆ, ದೇಶ- ವಿದೇಶ, ಸಿನಿಮಾ, ವಿಜ್ಞಾನ- ತಂತ್ರಜ್ಞಾನ ಇತ್ಯಾದಿ ವೈವಿಧ್ಯಯಮ ವಿಷಯಗಳ ಬಗ್ಗೆ ಬರೆಯುವ ಇವರಿಗೆ, ನಾನಾ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಈವರೆಗೆ 16 ವರ್ಷ ಕೆಲಸ ಮಾಡಿದ ಅನುಭವವಿದೆ. ಫೋಟೋಗ್ರಫಿ ಇವರ ಅಚ್ಚುಮೆಚ್ಚಿನ ಹವ್ಯಾಸ. ಸಿನಿಮಾ, ಸಾಕ್ಷ್ಯಚಿತ್ರ, ಸಾಹಿತ್ಯ, ವಿಡಿಯೋ ಸಂಕಲನ, ಪತ್ರಿಕೆ ಪುಟ ವಿನ್ಯಾಸ, ಹಾಡುಗಾರಿಕೆ, ಚಿತ್ರಕಲೆ, ಅನಿಮೇಶನ್, ಸಂಗೀತದಲ್ಲಿಯೂ ಆಸಕ್ತಿಯಿದೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ