ಹುಬ್ಬಳ್ಳಿ: ಉಪಚುನಾವಣೆಯ ಫಲಿತಾಂಶ 2019ರ ಲೋಕಸಭಾ ಚುನಾವಣೆಯ ದಿಕ್ಸೂಚಿಯಾಗಲಿದೆ. ಅಲ್ಲದೇ ಕೇಂದ್ರ ಸರಕಾರದ ಬಗ್ಗೆ ಜನಾಭಿಪ್ರಾಯ ವ್ಯಕ್ತವಾಗಲಿದೆ ಎಂದು
ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಐದೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ್ದೇ ಗೆಲುವು ಸಾಧಿಸುತ್ತೇವೆ ಎಂದರು. ಇನ್ನು, ಗುಪ್ತಚರ ವರದಿ ಪ್ರಕಾರ ಜಮಖಂಡಿ ಕ್ಷೇತ್ರ ಕಾಂಗ್ರೆಸ್ ಸೋಲಲಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಿಎಂ, ಜಮಖಂಡಿ, ಬಳ್ಳಾರಿ, ಮಂಡ್ಯ ರಾಮನಗರ ಕ್ಷೇತ್ರಗಳಲ್ಲಿ ಸುಲಭವಾಗಿ ಜಯಗಳಿಸುತ್ತೇವೆ. ಆದ್ರೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ತೀವ್ರ ಪೈಪೋಟಿ ನೀಡಿದ್ದೇವೆ, ಏನಾಗುತ್ತೋ ನೋಡೋಣ ಎಂದರು.
ಇನ್ನೊಂದೆಡೆ, ಸಾಲ ಪಾವತಿಸುವಂತೆ ಬ್ಯಾಂಕ್ ಗಳು ರೈತರಿಗೆ ನೋಟಿಸ್ ನೀಡುವುದು ಮುಂದುವರಿದಿರುವುದರ ವಿಷಯವಾಗಿ ಸಿಎಂ ಕುಮಾರಸ್ವಾಮಿ ಜತೆ ಮಾತನಾಡುತ್ತೇನೆ ಎಂದರು. ಸಾಲಮನ್ನಾ ಮಾಡುತ್ತಿಲ್ಲ ಸರಕಾರ ಬಿದ್ದುಹೋಗುತ್ತದೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪನವರಿಗೆ ವಿಧಾನಸೌಧದ ಮೂರನೇ ಮಹಡಿ ಕನಸು ಬೀಳುತ್ತೆ. ಆದರೆ, ಸರಕಾರಕ್ಕೆ ಏನು ಆಗುವುದಿಲ್ಲ ಎಂದು ಲೇವಡಿ ಮಾಡಿದರು.
ಅಲ್ಲದೆ, ಈ ಹಿಂದೆ ಟಿಪ್ಪು ಜಯಂತಿ ವಿರೋಧಿಸಿದ್ದ ಸಿಎಂ ಕುಮಾರಸ್ವಾಮಿ ಹೇಳಿಕೆ ಬಗ್ಗೆ ನನಗೆ ಇನ್ನೂ ಗೊತ್ತಿಲ್ಲ. ಮೂರು ವರ್ಷಗಳಿಂದ ಟಿಪ್ಪು ಜಯಂತಿ ಆಚರಣೆ ಮಾಡ್ತಾ ಬರಲಾಗುತ್ತಿದೆ. ಈ ಸರಕಾರ ಕೂಡ ಟಿಪ್ಪು ಜಯಂತಿ ಮಾಡಲು ನಿರ್ಧಾರ ಮಾಡಿದೆ. ದೀಪಾವಳಿ ಮುಗಿದ ಮೇಲೆ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ಮಾಡಲಾಗುವುದು ಎಂದು ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಐದೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ್ದೇ ಗೆಲುವು ಸಾಧಿಸುತ್ತೇವೆ ಎಂದರು. ಇನ್ನು, ಗುಪ್ತಚರ ವರದಿ ಪ್ರಕಾರ ಜಮಖಂಡಿ ಕ್ಷೇತ್ರ ಕಾಂಗ್ರೆಸ್ ಸೋಲಲಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಿಎಂ, ಜಮಖಂಡಿ, ಬಳ್ಳಾರಿ, ಮಂಡ್ಯ ರಾಮನಗರ ಕ್ಷೇತ್ರಗಳಲ್ಲಿ ಸುಲಭವಾಗಿ ಜಯಗಳಿಸುತ್ತೇವೆ. ಆದ್ರೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ತೀವ್ರ ಪೈಪೋಟಿ ನೀಡಿದ್ದೇವೆ, ಏನಾಗುತ್ತೋ ನೋಡೋಣ ಎಂದರು.
ಇನ್ನೊಂದೆಡೆ, ಸಾಲ ಪಾವತಿಸುವಂತೆ ಬ್ಯಾಂಕ್ ಗಳು ರೈತರಿಗೆ ನೋಟಿಸ್ ನೀಡುವುದು ಮುಂದುವರಿದಿರುವುದರ ವಿಷಯವಾಗಿ ಸಿಎಂ ಕುಮಾರಸ್ವಾಮಿ ಜತೆ ಮಾತನಾಡುತ್ತೇನೆ ಎಂದರು. ಸಾಲಮನ್ನಾ ಮಾಡುತ್ತಿಲ್ಲ ಸರಕಾರ ಬಿದ್ದುಹೋಗುತ್ತದೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪನವರಿಗೆ ವಿಧಾನಸೌಧದ ಮೂರನೇ ಮಹಡಿ ಕನಸು ಬೀಳುತ್ತೆ. ಆದರೆ, ಸರಕಾರಕ್ಕೆ ಏನು ಆಗುವುದಿಲ್ಲ ಎಂದು ಲೇವಡಿ ಮಾಡಿದರು.
ಅಲ್ಲದೆ, ಈ ಹಿಂದೆ ಟಿಪ್ಪು ಜಯಂತಿ ವಿರೋಧಿಸಿದ್ದ ಸಿಎಂ ಕುಮಾರಸ್ವಾಮಿ ಹೇಳಿಕೆ ಬಗ್ಗೆ ನನಗೆ ಇನ್ನೂ ಗೊತ್ತಿಲ್ಲ. ಮೂರು ವರ್ಷಗಳಿಂದ ಟಿಪ್ಪು ಜಯಂತಿ ಆಚರಣೆ ಮಾಡ್ತಾ ಬರಲಾಗುತ್ತಿದೆ. ಈ ಸರಕಾರ ಕೂಡ ಟಿಪ್ಪು ಜಯಂತಿ ಮಾಡಲು ನಿರ್ಧಾರ ಮಾಡಿದೆ. ದೀಪಾವಳಿ ಮುಗಿದ ಮೇಲೆ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ಮಾಡಲಾಗುವುದು ಎಂದು ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಹೇಳಿದರು.