ಆ್ಯಪ್ನಗರ

ಜಿಲ್ಲೆಯಲ್ಲಿ ಸಚಿವ ಸಂಪುಟ ಉಪಸಮಿತಿ ಪ್ರವಾಸ

ಧಾರವಾಡ : ರಾಜ್ಯದಲ್ಲಿ ತಲೆದೋರಿರುವ ಬರ ಪ್ರದೇಶಗಳ ಅಧ್ಯಯನ, ಪರಿಹಾರ ಹಾಗೂ ನಿರ್ವಹಣೆಗೆ ಸಂಬಂಧಿಸಿದಂತೆ ಸ್ಥಿತಿ ಪರಿಶೀಲಿಸಲು ಜ.9 ರಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ ಅವರ ನೇತೃತ್ವದ ಸಚಿವ ಸಂಪುಟದ ಉಪಸಮಿತಿ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

Vijaya Karnataka 9 Jan 2019, 5:00 am
ಧಾರವಾಡ : ರಾಜ್ಯದಲ್ಲಿ ತಲೆದೋರಿರುವ ಬರ ಪ್ರದೇಶಗಳ ಅಧ್ಯಯನ, ಪರಿಹಾರ ಹಾಗೂ ನಿರ್ವಹಣೆಗೆ ಸಂಬಂಧಿಸಿದಂತೆ ಸ್ಥಿತಿ ಪರಿಶೀಲಿಸಲು ಜ.9 ರಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ ಅವರ ನೇತೃತ್ವದ ಸಚಿವ ಸಂಪುಟದ ಉಪಸಮಿತಿ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
Vijaya Karnataka Web cabinet sub committee tour in the district
ಜಿಲ್ಲೆಯಲ್ಲಿ ಸಚಿವ ಸಂಪುಟ ಉಪಸಮಿತಿ ಪ್ರವಾಸ


ಅಂದು ಉಪಸಮಿತಿಯ ಸದಸ್ಯರಾದ ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ, ಪೌರಾಡಳಿತ ಸಚಿವ ಸಿ.ಎಸ್‌. ಶಿವಳ್ಳಿ ಸೇರಿದಂತೆ ಬೆಳಗಾವಿ ವಿಭಾಗದ ಎಲ್ಲ ಸಚಿವರು ಮಧ್ಯಾಹ್ನ 1ಕ್ಕೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಕ್ರಾಸ್‌ಗೆ ಆಗಮಿಸಿ. ಮಧ್ಯಾಹ್ನ 1.5 ನಿಮಿಷಕ್ಕೆ ಶೆರೆವಾಡ ದ ಹೊಲಗಳಿಗೆ ಭೇಟಿ ನೀಡಿ ಗೋಧಿ, ಕಡಲೆ ಬೆಳೆ ಹಾಗೂ ಹಿಂಗಾರಿ ಜೋಳದ ಬೆಳೆಗಳನ್ನು ವೀಕ್ಷಿಸುವರು. ಮಧ್ಯಾಹ್ನ 1.55ಕ್ಕೆ ಕುಂದಗೋಳ ತಾಲೂಕು ಬೆನಕನಹಳ್ಳಿ ಯಲ್ಲಿ ನಡೆದ ಮಹಾತ್ಮಾಗಾಂಧೀ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆರೆ ಹೂಳೆತ್ತುವ ಕಾಮಗಾರಿ ವೀಕ್ಷಿಸುವರು. ಮಧ್ಯಾಹ್ನ 2.10ಕ್ಕೆ ಯರಗುಪ್ಪಿ ಗ್ರಾಮಕ್ಕೆ ಭೇಟಿ ನೀಡಿ ರೈತರೊಂದಿಗೆ ಚರ್ಚಿಸುವರು. ಮಧ್ಯಾಹ್ನ 2.30ಕ್ಕೆ ಇಂಗಳಹಳ್ಳಿ ಕ್ರಾಸ್‌ನಲ್ಲಿ ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ಯಲ್ಲಪ್ಪ ಚನ್ನಪ್ಪ ಹಳ್ಳೂರ ಅವರ ಹೊಲದಲ್ಲಿ ನಿರ್ಮಿಸಲಾಗಿರುವ ಕೃಷಿ ಹೊಂಡ ಹಾಗೂ ಗುರುಪಾದಪ್ಪ ಪ್ರಭಪ್ಪ ಬಡಿಗೇರ ಮತ್ತು ಉಮಾ ಸುತಗಟ್ಟಿ ಅವರ ಹೊಲಗಳಿಗೆ ಭೇಟಿ ನೀಡುವರು. ಮಧ್ಯಾಹ್ನ 3ಕ್ಕೆ ಹುಬ್ಬಳ್ಳಿಯ ಸಾಂಸ್ಕೃತಿಕ ಭವನದಲ್ಲಿ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ಸಂಭವಿಸಿದ ಹಾನಿ ಹಾಗೂ ಪರಿಹಾರದ ಕ್ರಮಗಳ ಬಗ್ಗೆ ಪರಿಶೀಲನಾ ಸಭೆ ನಡೆಸುವರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ