ಆ್ಯಪ್ನಗರ

ಎಸ್ಸೆಸ್ಸೆಲ್ಸಿ ಪರೀಕ್ಷೆ, ಆನ್‌ಲೈನ್‌ ಶಿಕ್ಷಣ ರದ್ದು ಮಾಡಿ

ಹುಬ್ಬಳ್ಳಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಗೂ ಆನ್‌ಲೈನ್‌ ಶಿಕ್ಷಣ ರದ್ದುಗೊಳಿಸುವಂತೆ ಆಗ್ರಹಿಸಿ ಹೋರಾಟಗಾರ ವಾಟಾಳ್‌ ನಾಗರಾಜ ಇಲ್ಲಿಯ ಚನ್ನಮ್ಮ ವೃತ್ತದಲ್ಲಿಜಾಗಟೆ ಬಾರಿಸುವ ಮೂಲಕ ಶನಿವಾರ ವಿನೂತನ ಪ್ರತಿಭಟನೆ ನಡೆಸಿದರು.

Vijaya Karnataka 14 Jun 2020, 5:00 am
ಹುಬ್ಬಳ್ಳಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಗೂ ಆನ್‌ಲೈನ್‌ ಶಿಕ್ಷಣ ರದ್ದುಗೊಳಿಸುವಂತೆ ಆಗ್ರಹಿಸಿ ಹೋರಾಟಗಾರ ವಾಟಾಳ್‌ ನಾಗರಾಜ ಇಲ್ಲಿಯ ಚನ್ನಮ್ಮ ವೃತ್ತದಲ್ಲಿಜಾಗಟೆ ಬಾರಿಸುವ ಮೂಲಕ ಶನಿವಾರ ವಿನೂತನ ಪ್ರತಿಭಟನೆ ನಡೆಸಿದರು.
Vijaya Karnataka Web 13 VIJU VATAL 1_21
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಗೂ ಆನ್‌ಲೈನ್‌ ಶಿಕ್ಷಣ ರದ್ದತಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿಶನಿವಾರ ಜಾಗಟೆ ಬಾರಿಸಿ ಪ್ರತಿಭಟನೆ ನಡೆಸಿದರು.


ಬಳಿಕ ಮಾತನಾಡಿದ ಅವರು, ಸಚಿವ ಸುರೇಶಕುಮಾರ ಅವರು ಹಠಕ್ಕೆ ಬಿದ್ದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾಡಲು ಹೊರಟಿದ್ದಾರೆ. ಕೊರೊನಾ ಪ್ರಕರಣಗಳು ಕಡಿಮೆ ಇದ್ದ ವೇಳೆ ಲಾಕ್‌ಡೌನ್‌ ಮಾಡಿದ್ದರು. ಕೊರೊನಾ ಅಟ್ಟಹಾಸ ಮೆರೆಯುವ ವೇಳೆ ಓಪನ್‌ ಮಾಡಿದ್ದಾರೆ ಎಂದು ಲೇವಡಿ ಮಾಡಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಂತರ ಮೌಲ್ಯಮಾಪನ ಮಾಡುವ ಶಿಕ್ಷಕರ ಭವಿಷ್ಯದ ಪ್ರಶ್ನೆ ಎದುರಾಗಿದೆ. ರಾಜ್ಯದಲ್ಲಿಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ಪಾಸ್‌ ಮಾಡಬೇಕು. ಪ್ರಾಥಮಿಕ ಹಂತದಿಂದ ಡಿಗ್ರಿಯವರೆಗೂ ಆನ್‌ಲೈನ್‌ ಶಿಕ್ಷಣ ಮಾಡುವುದು ಬೇಡ ಎಂದು ಆಗ್ರಹಿಸಿದರು.

ಕರ್ನಾಟಕವನ್ನು ಅಮೆರಿಕಾ ಮಾಡಲು ಆಗಲ್ಲ. ಕೊರೊನಾ ವೈರಸ್‌ ವೇಳೆ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿಲ್ಲ. ಹೀಗಾಗಿ ಪರೀಕ್ಷೆಗಳನ್ನು ನಡೆಸುವುದು ಸರಿಯಲ್ಲಎಂದು ವಾಟಾಳ್‌ ನಾಗರಾಜ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ