ಆ್ಯಪ್ನಗರ

ಸಿಬಿಐ ತನಿಖೆ ಚುರುಕು, ನಾಲ್ವರ ವಿಚಾರಣೆ

ಧಾರವಾಡ: ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದ ತನಿಖೆಯನ್ನು ಗುರುವಾರವೂ ಮುಂದುವರಿಸಿದ ಸಿಬಿಐ ಅಧಿಕಾರಿಗಳು, ಪ್ರಮುಖ ನಾಲ್ವರ ವಿಚಾರಣೆ ಮಾಡಿದ್ದಾರೆ.

Vijaya Karnataka 28 Feb 2020, 4:48 pm
Vijaya Karnataka Web cbi probe into swift quadruple interrogation
ಸಿಬಿಐ ತನಿಖೆ ಚುರುಕು, ನಾಲ್ವರ ವಿಚಾರಣೆ
ಧಾರವಾಡ: ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದ ತನಿಖೆಯನ್ನು ಗುರುವಾರವೂ ಮುಂದುವರಿಸಿದ ಸಿಬಿಐ ಅಧಿಕಾರಿಗಳು, ಪ್ರಮುಖ ನಾಲ್ವರ ವಿಚಾರಣೆ ಮಾಡಿದ್ದಾರೆ.

ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ವಿನಾಯಕ ಕಟಗಿ, ಸಂದೀಪ, ಮುದುಕಪ್ಪ, ಕೀರ್ತಿ ಎಂಬುವರನ್ನು ನಗರದ ಉಪನಗರ ಪೊಲೀಸ್‌ ಠಾಣೆಗೆ ಕರೆಸಿಕೊಂಡು ಎರಡು ದಿನಗಳಿಂದ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೇ ಗುರುವಾರ ಹೊಸದಾಗಿ ಮತ್ತೆ ಇಬ್ಬರನ್ನು ಠಾಣೆಗೆ ಕರೆಸಿ ಅವರಿಂದ ಪ್ರತ್ಯೇಕವಾಗಿ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ. ಕಳೆದ ಮೂರು ದಿನಗಳಿಂದ ನಗರದಲ್ಲಿಬೀಡುಬಿಟ್ಟಿರುವ ಸಿಬಿಐ ತಂಡ, ಹತ್ಯೆಗೆ ಸಂಬಂಧಿಸಿದ ಮಾಹಿತಿ ಕಲೆಹಾಕಲು ವಿವಿಧ ಸ್ಥಳಗಳಿಗೆ ಭೇಟಿ ನೀಡಿದೆ ಎಂದು ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ