ಆ್ಯಪ್ನಗರ

ಪುಲ್ವಾಮಾ ದಾಳಿ: ಕೇಂದ್ರ ಗುಪ್ತಚರ ಇಲಾಖೆ ವಿಫಲತೆ ಎಂದ ಸಚಿವ ಜಮೀರ ಅಹ್ಮದ್

ಹಾವೇರಿಯಲ್ಲಿ ನಡೆಯಲಿರೊ ಸಮಾವೇಶಕ್ಕೆ ತೆರಳುವ ವೇಳೆಯಲ್ಲಿ ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಈ ಘಟನೆಯಲ್ಲಿ ಕೇಂದ್ರ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ‌. ಘಟನೆ ಪೂರ್ವ ನಿಯೋಜಿತವಾಗಿದ್ದರೂ ಗುಪ್ತಚರ ಇಲಾಖೆಗೆ ಮಾಹಿತಿಯೇ ಇರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Vijaya Karnataka Web 16 Feb 2019, 12:42 pm
ಹುಬ್ಬಳ್ಳಿ: ಜಮ್ಮು ಕಾಶ್ಮೀರದಲ್ಲಿ ನಡೆದ ಘಟನೆಯಲ್ಲಿ ಕೇಂದ್ರ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ‌ ಎಂದು ಸಚಿವ ಜಮೀರ ಅಹ್ಮದ್ ಹೇಳಿದ್ದಾರೆ.
Vijaya Karnataka Web Zameer Ahmad


ಹಾವೇರಿಯಲ್ಲಿ ನಡೆಯಲಿರೊ ಸಮಾವೇಶಕ್ಕೆ ತೆರಳುವ ವೇಳೆಯಲ್ಲಿ ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಈ ಘಟನೆಯಲ್ಲಿ ಕೇಂದ್ರ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ‌. ಘಟನೆ ಪೂರ್ವ ನಿಯೋಜಿತವಾಗಿದ್ದರೂ ಗುಪ್ತಚರ ಇಲಾಖೆಗೆ ಮಾಹಿತಿಯೇ ಇರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂತಹ ಘಟನೆಯಿಂದ ಅತೀವ ದುಃಖವಾಗಿದೆ. ದೇವರು ಸೈನಿಕರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಅವರು ಕಂಬನಿ ಮಿಡಿದರು. ಬಳಿಕ ಸಮಾವೇಶದ ಕುರಿತು ಮಾತನಾಡಿದ ಅವರು, ಹಾವೇರಿಯಲ್ಲಿ 25ನೇ ತಾರೀಕಿನಂದು ಸಮಾವೇಶ ನಡೆಯಲಿದ್ದು, ಪಕ್ಷದ ನಾಯಕರೊಂದಿಗೆ ಇಂದು ಪೂರ್ವಭಾವಿ ಸಭೆ ನಡೆಸಲಿದ್ದೇವೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ