ಆ್ಯಪ್ನಗರ

ಪೌರ ಕಾರ್ಮಿಕನನ್ನು ಬಲಿ ತೆಗೆದುಕೊಂಡಿತೇ ಹು-ಧಾ ಮಹಾನಗರ ಪಾಲಿಕೆ?

ಹುಬ್ಬಳ್ಳಿ- ಧಾರವಾದ ಮಹಾನಗರ ಪಾಲಿಗೆ ಕಾರ್ಮಿಕ ಕಲ್ಲಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ.

Vijaya Karnataka Web 3 Jul 2019, 3:51 pm
ಹುಬ್ಬಳ್ಳಿ: ನೇರ ವೇತನಕ್ಕೆ ಆಯ್ಕೆಯಾಗದ ಹಿನ್ನೆಲೆಯಲ್ಲಿ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಕಾರ್ಮಿಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ನಡೆದಿದೆ.
Vijaya Karnataka Web Death


ಕಲ್ಲಪ್ಪ ಶಿವಲಿಂಗಪ್ಪ ಅಣ್ಣಿಗೇರಿ (34) ಆತ್ಮಹತ್ಯೆ ಮಾಡಿಕೊಂಡ ಪೌರ ಕಾರ್ಮಿಕ. ಪಾಲಿಕೆಯ ತಾರತಮ್ಯಕ್ಕೆ ಹಾಗೂ ಕಿರುಕುಳಕ್ಕೆ ಬೇಸತ್ತು ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ನಗರದ ಬೂಸಪೇಟೆಯಲ್ಲಿ ಘಟನೆ ನಡೆದಿದ್ದು ಈ‌ ಕುರಿತು ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ 20 ವರ್ಷಗಳಿಂದ ಕಲ್ಲಪ್ಪ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ನೇರ ವೇತನಕ್ಕೆ ಆಗ್ರಹಿಸಿ ಕಳೆದ ವಾರ ಹು- ಧಾ ಮಹಾನಗರ ಪಾಲಿಕೆ ಪೌರ ಕಾರ್ಮಿಕರು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟ್ವೀಟ್ ಮಾಡಿದ್ದರು. ಆದರೆ ಇದಕ್ಕೆ ಸ್ಪಂದನೆ ಸಿಕ್ಕಿರಲಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ