ಧಾರವಾಡ : ಬರುವ ಜನವರಿ 4,5 ಹಾಗೂ 6 ರಂದು ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಬುಧವಾರ ನಗರದ ಕಾಲೇಜು ರಸ್ತೆಯಲ್ಲಿರುವ 115 ವರ್ಷಗಳನ್ನು ಪೂರೈಸಿರುವ ಅರಳಿ ಮರದ ಕಟ್ಟೆ ಶುಚಿಗೊಳಿಸಿ, ಕಟಕಟೆಗೆ ಬಣ್ಣ ಬಳಿದು ಸುಂದರಗೊಳಿಸಲಾಯಿತು.
ಜಿಲ್ಲಾಡಳಿತ, ಮಹಾನಗರಪಾಲಿಕೆ , ಕಸಾಪ ಹಾಗೂ ಕನ್ನಡ ಪರ ಕಾರ್ಯಕರ್ತರು ಸ್ವಚ್ಛತಾ ಆಂದೋಲನ ಆರಂಭಿಸಿದ್ದಾರೆ. ಅದರಂತೆ ಅರಳಿ ಮರದ ಕಟ್ಟೆಗೆ ರಂಗಾಯಣದ ನೇತೃತ್ವದಲ್ಲಿ ಕಲಾವಿದರು ಬಣ್ಣ ಹಚ್ಚುವ ಕಾರ್ಯ ನಡೆಯಿತು.
ಶತಮಾನ ಕಂಡ ವೃಕ್ಷ : ಕಾಲೇಜು ರಸ್ತೆಯಲ್ಲಿ ಎಲ್ಐಸಿ ಕಚೇರಿ ಬಳಿ ಇರುವ ಈ ಅರಳಿ ಮರವನ್ನು ಇಂಗ್ಲೆಂಡ್ನ ದೊರೆ, ಇಂಡಿಯಾದ ಚಕ್ರಾಧಿಪತ್ಯ ಹೊಂದಿದ್ದ 7 ನೇ ಎಡ್ವರ್ಡನ ಪಟ್ಟಾಭಿಷೇಕದ ಸವಿನೆನಪಿಗಾಗಿ, ಗಿಬ್ ದಂಪತಿ ಮತ್ತು ನೈಟ್ ಅವರ ಉಪಸ್ಥಿತಿಯಲ್ಲಿ ರೊದ್ದ ಶ್ರೀನಿವಾಸರಾಯರು 1903 ರ ಜನವರಿ 1 ರಂದು ನೆಟ್ಟಿದ್ದರು. ಈಗ 115 ವರ್ಷಗಳನ್ನು ಈ ವೃಕ್ಷ ಪೂರೈಸಿದೆ.
ಸ್ವಚ್ಛತಾ ಕಾರ್ಯದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಿ.ಸಿ. ಸತೀಶ್, ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ್, ರಂಗಾಯಣ ಆಡಳಿತಾಧಿಕಾರಿ ಕೆ.ಎಚ್. ಚನ್ನೂರ, ಆಹಾರ ಇಲಾಖೆಯ ಜಂಟಿನಿರ್ದೇಶಕ ಸದಾಶಿವ ಮರ್ಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಕೆ. ರಂಗಣ್ಣವರ, ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಪ್ರಕಾಶ ಉಡಕೇರಿ, ಎಸ್.ಎಸ್. ದೊಡ್ಡಮನಿ, ಎಫ್.ಬಿ. ಕಣವಿ, ಶಂಕರ ಹಲಗತ್ತಿ, ಶಂಕರ ಕುಂಬಿ, ಎನ್.ಆರ್. ಬಾಳಿಕಾಯಿ, ಶ್ರೀಶೈಲ್ ರಾಚಣ್ಣವರ, ಬಸವರಾಜ ವಾಸನದ್, ವಿಜಯ ಮಹಾಂತೇಶ ಹೊಸಕೇರಿ ಮತ್ತಿತರರು ಇದ್ದರು.
ಜಿಲ್ಲಾಡಳಿತ, ಮಹಾನಗರಪಾಲಿಕೆ , ಕಸಾಪ ಹಾಗೂ ಕನ್ನಡ ಪರ ಕಾರ್ಯಕರ್ತರು ಸ್ವಚ್ಛತಾ ಆಂದೋಲನ ಆರಂಭಿಸಿದ್ದಾರೆ. ಅದರಂತೆ ಅರಳಿ ಮರದ ಕಟ್ಟೆಗೆ ರಂಗಾಯಣದ ನೇತೃತ್ವದಲ್ಲಿ ಕಲಾವಿದರು ಬಣ್ಣ ಹಚ್ಚುವ ಕಾರ್ಯ ನಡೆಯಿತು.
ಶತಮಾನ ಕಂಡ ವೃಕ್ಷ : ಕಾಲೇಜು ರಸ್ತೆಯಲ್ಲಿ ಎಲ್ಐಸಿ ಕಚೇರಿ ಬಳಿ ಇರುವ ಈ ಅರಳಿ ಮರವನ್ನು ಇಂಗ್ಲೆಂಡ್ನ ದೊರೆ, ಇಂಡಿಯಾದ ಚಕ್ರಾಧಿಪತ್ಯ ಹೊಂದಿದ್ದ 7 ನೇ ಎಡ್ವರ್ಡನ ಪಟ್ಟಾಭಿಷೇಕದ ಸವಿನೆನಪಿಗಾಗಿ, ಗಿಬ್ ದಂಪತಿ ಮತ್ತು ನೈಟ್ ಅವರ ಉಪಸ್ಥಿತಿಯಲ್ಲಿ ರೊದ್ದ ಶ್ರೀನಿವಾಸರಾಯರು 1903 ರ ಜನವರಿ 1 ರಂದು ನೆಟ್ಟಿದ್ದರು. ಈಗ 115 ವರ್ಷಗಳನ್ನು ಈ ವೃಕ್ಷ ಪೂರೈಸಿದೆ.
ಸ್ವಚ್ಛತಾ ಕಾರ್ಯದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಿ.ಸಿ. ಸತೀಶ್, ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ್, ರಂಗಾಯಣ ಆಡಳಿತಾಧಿಕಾರಿ ಕೆ.ಎಚ್. ಚನ್ನೂರ, ಆಹಾರ ಇಲಾಖೆಯ ಜಂಟಿನಿರ್ದೇಶಕ ಸದಾಶಿವ ಮರ್ಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಕೆ. ರಂಗಣ್ಣವರ, ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಪ್ರಕಾಶ ಉಡಕೇರಿ, ಎಸ್.ಎಸ್. ದೊಡ್ಡಮನಿ, ಎಫ್.ಬಿ. ಕಣವಿ, ಶಂಕರ ಹಲಗತ್ತಿ, ಶಂಕರ ಕುಂಬಿ, ಎನ್.ಆರ್. ಬಾಳಿಕಾಯಿ, ಶ್ರೀಶೈಲ್ ರಾಚಣ್ಣವರ, ಬಸವರಾಜ ವಾಸನದ್, ವಿಜಯ ಮಹಾಂತೇಶ ಹೊಸಕೇರಿ ಮತ್ತಿತರರು ಇದ್ದರು.