ಆ್ಯಪ್ನಗರ

ಎನ್‌ಎಸ್‌ಎಸ್‌ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

ಧಾರವಾಡ : ಇಲ್ಲಿನ ನೆಹರುನಗರದ ಕೊಳೆಗೇರಿ ಪ್ರದೇಶದಲ್ಲಿ ಹುರಕಡ್ಲಿ ಅಜ್ಜ ಶಿಕ್ಷ ಣ ಸಮಿತಿಯ ಕಲ್ಲವ್ವ ಶಿವಪ್ಪಣ್ಣ ಜಿಗಳೂರ ಕಲಾ ಹಾಗೂ ಡಾ. ಸುಶೀಲಾ ಮುರಿಗೆಪ್ಪ ಶೇಷಗಿರಿ ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್‌) ಘಟಕದ ವತಿಯಿಂದ ಸ್ವಚ್ಛ ಭಾರತ ಅಭಿಯಾನದಡಿ ಸ್ವಚ್ಛತಾ ಕಾರ್ಯಕ್ರಮ ಮಂಗಳವಾರ ನಡೆಯಿತು.

Vijaya Karnataka 3 Jul 2019, 5:00 am
ಧಾರವಾಡ : ಇಲ್ಲಿನ ನೆಹರುನಗರದ ಕೊಳೆಗೇರಿ ಪ್ರದೇಶದಲ್ಲಿ ಹುರಕಡ್ಲಿ ಅಜ್ಜ ಶಿಕ್ಷ ಣ ಸಮಿತಿಯ ಕಲ್ಲವ್ವ ಶಿವಪ್ಪಣ್ಣ ಜಿಗಳೂರ ಕಲಾ ಹಾಗೂ ಡಾ. ಸುಶೀಲಾ ಮುರಿಗೆಪ್ಪ ಶೇಷಗಿರಿ ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್‌) ಘಟಕದ ವತಿಯಿಂದ ಸ್ವಚ್ಛ ಭಾರತ ಅಭಿಯಾನದಡಿ ಸ್ವಚ್ಛತಾ ಕಾರ್ಯಕ್ರಮ ಮಂಗಳವಾರ ನಡೆಯಿತು.
Vijaya Karnataka Web DRW-2MAILAR04
ಧಾರವಾಡದ ನೆಹರು ನಗರದಲ್ಲಿ ಶ್ರೀ ಹುರಕಡ್ಲಿ ಅಜ್ಜ ಶಿಕ್ಷ ಣ ಸಮಿತಿಯ ಮಹಿಳಾ ಕಾಲೇಜಿನ ಎನ್‌ಎಸ್‌ಎಸ್‌ ಘಟಕದಿಂದ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನವನ್ನು ಸಹಾಯಕ ಆಯುಕ್ತ ಮಲ್ಲಿಕಾರ್ಜುನ ಸಬರದ ಉದ್ಘಾಟಿಸಿದರು.


ಕಾರ್ಯಕ್ರಮ ಉದ್ಘಾಟಿಸಿದ ಹು-ಧಾ ಮಹಾನಗರ ಪಾಲಿಕೆಯ ವಲಯ ಕಚೇರಿ-1ರ ಸಹಾಯಕ ಆಯುಕ್ತ ಮಲ್ಲಿಕಾರ್ಜುನ ಸಬರದ ಮಾತನಾಡಿ, ನಮ್ಮ ಪರಿಸರ, ನಾಡು, ಕಾಡನ್ನು ಕಾಪಾಡದೇ ಹೋದರೆ ಮುಂದಿನ ಪೀಳಿಗೆಯ ಜನರು ಹೆಗಲಿಗೆ ಆಕ್ಸಿಜನ್‌ ಡಬ್ಬಿ ಇಟ್ಟುಕೊಂಡು ಜೀವನ ನಡೆಸುವ ಸ್ಥಿತಿ ಬರಲಿದೆ. ಹೀಗಾಗಿ ಪರಿಸರ ಉಳಿಸುವ ಕಾರ್ಯವನ್ನು ಎಲ್ಲರೂ ಮಾಡಬೇಕು ಎಂದರು.

ನೆಹರುನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಸವಿತಾ ನಾಡಗೌಡ ಮಾತನಾಡಿ, ಮನಸ್ಸಿದ್ದರೆ ಮಾರ್ಗ ಎಂಬಂತೆ ಯುವಜನತೆಯು ನಿರಂತರ ಚಿಂತನೆ, ಪ್ರಯತ್ನ ಮಾಡುವುದರ ಮೂಲಕ ಪರಿಸರವನ್ನು ಸ್ವಚ್ಛವಾಗಿಡಲು ಶ್ರಮ ವಹಿಸಬೇಕು ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಉಲ್ಲಾಸ ಮೇಸ್ತ್ರಿ ಅವರು, ಜ್ಞಾನ ವಿಕಾಸದ ಅಡಿಯಲ್ಲಿನ ಕಾರ್ಯಕ್ರಮಗಳ ಸ್ವಚ್ಛತೆಯ ಕುರಿತು ಮಾಹಿತಿ ನೀಡಿದರು.

ಈ ಅಭಿಯಾನದಲ್ಲಿ ರಸ್ತೆ ಸ್ವಚ್ಛತೆ, ನೈರ್ಮಲ್ಯದ ಕುರಿತು ಜಾಗೃತಿ, ಬೀದಿನಾಟಕ ಹಾಗೂ ಹಾಡುಗಳ ಮೂಲಕ ಬಯಲು ಶೌಚದ ದುಷ್ಪರಿಣಾಮ ಹಾಗೂ ಘನ ಮತ್ತು ದ್ರವ ತ್ಯಾಜ್ಯದ ನಿರ್ವಹಣೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ