ಆ್ಯಪ್ನಗರ

ಈ ವರ್ಷವೇ ಹೈನುಗಾರಿಕೆ ಪ್ರಗತಿಗೆ ಕ್ಷೀರ ಅಭಿವೃದ್ಧಿ ಬ್ಯಾಂಕ್‌ ಪ್ರಾರಂಭ: ಬಸವರಾಜ ಬೊಮ್ಮಾಯಿ

ಕರ್ನಾಟಕದಲ್ಲಿ ಹೈನುಗಾರಿಕಾ ಅಭಿವೃದ್ಧಿಗೆ ಮೊದಲ ಬಾರಿಗೆ ಕ್ಷೀರ ಅಭಿವೃದ್ಧಿ ಬ್ಯಾಂಕ್‌ ಅನ್ನು ಈ ವರ್ಷವೇ ಪ್ರಾರಂಭಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಧಾರವಾಡ ಜಿಲ್ಲೆಯ ಬ್ಯಾಹಟ್ಟಿ ಗ್ರಾಮದಲ್ಲಿ ಮಾತನಾಡಿದ ಅವರು, ಕಳೆದ ಬಜೆಟ್‌ನಲ್ಲಿ 260 ಕೋಟಿ ರೂ. ಹಣ ಮೀಸಲಿಡಲಾಗಿದೆ. ಈ ವರ್ಷ ಬ್ಯಾಂಕ್‌ ಅನ್ನು ಪ್ರಾರಂಭ ಮಾಡಲಾಗುವುದು ಎಂದು ತಿಳಿಸಿದರು.

Edited byಅವಿನಾಶ ವಗರನಾಳ | Lipi 15 May 2022, 7:47 pm

ಹೈಲೈಟ್ಸ್‌:


  • 'ಹೈನುಗಾರಿಕೆ ಪ್ರಗತಿಗೆ ಕ್ಷೀರ ಅಭಿವೃದ್ಧಿ ಬ್ಯಾಂಕ್‌ ಪ್ರಾರಂಭ'
  • ಧಾರವಾಡದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ
  • ಕಳೆದ ಬಜೆಟ್‌ನಲ್ಲಿ 260 ಕೋಟಿ ರೂ. ಮೀಸಲು, ಈ ವರ್ಷವೇ ಆರಂಭ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Basavaraj Bommai
ಧಾರವಾಡ: ರಾಜ್ಯದಲ್ಲಿ ಹೈನುಗಾರಿಕಾ ಅಭಿವೃದ್ಧಿಗೆ ಮೊದಲ ಬಾರಿಗೆ ಕ್ಷೀರ ಅಭಿವೃದ್ಧಿ ಬ್ಯಾಂಕ್ ಅನ್ನು ಈ ವರ್ಷ ಪ್ರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಧಾರವಾಡ ಜಿಲ್ಲೆಯ ಬ್ಯಾಹಟ್ಟಿ ಗ್ರಾಮದ ಜಾತ್ರಾ ಮಹೋತ್ಸವದ ಪ್ರಯುಕ್ತ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಹೈನುಗಾರಿಕೆ ಮಾಡುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಿದೆ. ಅದರಂತೆ ಹೈನುಗಾರಿಕೆ ಮಾಡುವವರಿಗೆ ಅನುಕೂಲವಾಗಲೆಂದು ಕ್ಷೀರ ಅಭಿವೃದ್ಧಿ ಬ್ಯಾಂಕ್ ಸ್ಥಾಪನೆ ಮಾಡಬೇಕೆಂದು ಕಳೆದ ಬಜೆಟ್ ನಲ್ಲಿ 260 ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದ್ದೇವೆ. ಈ ವರ್ಷ ಬ್ಯಾಂಕ್ ಅನ್ನು ಪ್ರಾರಂಭ ಮಾಡಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

ಕ್ಷೀರ ಅಭಿವೃದ್ಧಿ ಬ್ಯಾಂಕ್ ಮೂಲಕ ರೈತರಿಗೆ ಹಾಲು ಉತ್ಪಾದಿಸುವ ರೈತರಿಗೆ ಅವರ ಕಾರ್ಯ ಚಟುವಟಿಕೆಗಳಲ್ಲಿ ಅಭಿವೃದ್ಧಿ ಮಾಡಿಕೊಳ್ಳಲು ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ದೊರಕುವಂತೆ ಮಾಡಲಾಗುವುದು ಎಂದರು. ಈಗಾಗಲೇ ರೈತನ ಮಕ್ಕಳಿಗೆ ಸಿಎಂ ಆದ ಮೂರೇ ಗಂಟೆಯಲ್ಲಿ ವಿದ್ಯಾನಿಧಿ ಯೋಜನೆ ಘೋಷಣೆ ಮಾಡಿದ್ದೇನೆ. ಈ ಮೂಲಕ ಎಂಟನೇ ತರಗತಿಗೆ ಬರುವ ರೈತನ ಹೆಣ್ಣು ಮಕ್ಕಳಿಗೆ ಎರಡು ಸಾವಿರ ರೂಪಾಯಿ ಶಿಷ್ಯ ವೇತನ ನೀಡುತ್ತಿದ್ದೇವೆ. ಇದು ಪಿಜಿವರೆಗೆ ಮುಂದುವರೆಯಲಿದೆ ಎಂದು ಸಿಎಂ ತಿಳಿಸಿದರು.

ಯಶಸ್ವಿನಿ ಯೋಜನೆಯನ್ನು ಮತ್ತೊಮ್ಮೆ ಸ್ಥಾಪನೆ ಮಾಡಿದ್ದೇವೆ. ಕ್ಯಾಬಿನೆಟ್‌ನಲ್ಲಿ 530 ಕೋಟಿ ರೂಪಾಯಿ ಹಣದಷ್ಟು ರೈತರಿಗೆ ಡಿಸೇಲ್ ಸಬ್ಸಿಡಿ ಕೊಡುವಂತಹ ಕೆಲಸ ಮಾಡಿದ್ದೇವೆ. ಕಳೆದ ವರ್ಷ 22 ಲಕ್ಷ ರೈತರಿಗೆ ಪ್ರತಿಶತ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗಿದೆ. ಈ ವರ್ಷ 33 ಲಕ್ಷ ರೈತರಿಗೆ ಈ ಸೌಲಭ್ಯ ವಿತರಿಸುವ ಯೋಜನೆ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.
ರೈತರಿಗೆ ತ್ವರಿತವಾಗಿ ಸಾಲ ಮಂಜೂರು ಮಾಡುವಂತೆ ಡಿಸಿಸಿ ಬ್ಯಾಂಕ್‌ಗೆ ಎಸ್‌.ಟಿ. ಸೋಮಶೇಖರ್ ಸೂಚನೆ
ತುಪ್ಪರಿಹಳ್ಳ ಸಮಗ್ರ ಅಭಿವೃದ್ಧಿ ಮಾಡಲಾಗುವುದು!
ತುಪ್ಪರಿಹಳ್ಳ ಯೋಜನೆಗೆ ಈ ಹಿಂದೆ ನಾನು ನೀರಾವರಿ ಸಚಿವನಾಗಿದ್ದಾಗ ವಾಟರ್ ಲೋಕೇಶನ್ ಮಾಡಿದ್ದೆ, ಆದರೆ ಮುಂದೆ ಬಂದ ಸರ್ಕಾರಗಳು ಅದನ್ನು ಮುಂದುವರೆಸಲು ಆಸಕ್ತಿ ವಹಿಸಲಿಲ್ಲ. ಆದರೆ, ಇದೀಗ ತುಪ್ಪರಿಹಳ್ಳ ಯೋಜನೆಗೆ ಅನುಮೋದನೆ ನೀಡಲಾಗಿದೆ. ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಅದಕ್ಕೆ ನಾನೇ ಬಂದು ಅಡಿಗಲ್ಲು ಹಾಕುವ ಕೆಲಸ ಮಾಡಲಿದ್ದೇನೆ ಎಂದರು.

ನಾನು ವೀಕ್ ಆಗಿಲ್ಲ, ನೀವೇ ವೀಕ್ ಮಾಡುತ್ತಿದ್ದೀರಿ : ಸಿಎಂ ಬೊಮ್ಮಾಯಿ ಅಸಮಾಧಾನ
ಇದು ಬಹಳ ದಿನಗಳ‌ ಕನಸು ಮಲಪ್ರಭಾ ಯೋಜನೆಯಲ್ಲಿ ಬ್ಯಾಹಟ್ಟಿ ಗ್ರಾಮ ಕೊನೆಯ ಹಳ್ಳಿಯಾಗಿದೆ. ಇಲ್ಲಿ ಕಾಲುವೆಗಳಿವೆ ಹೊರತು ನೀರು ಬಂದಿದಿಲ್ಲ. ಈ ಬಾರಿ ನೀರು ಹರಿಸುವ ಕೆಲಸ ಮಾಡಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.
ಲೇಖಕರ ಬಗ್ಗೆ
ಅವಿನಾಶ ವಗರನಾಳ
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕಳೆದ 6 ವರ್ಷಗಳಿಂದ ವಿವಿಧ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಒಂದಿಷ್ಟು ದಿನ ಕೆಲ ಸಂಸ್ಥೆಗಳಲ್ಲಿ ಸಾರ್ವಜನಿಕ ಸಂಪರ್ಕವನ್ನು ನಿಭಾಯಿಸಿದ್ದಾರೆ. ಇವರು ಹುಟ್ಟಿ ಬೆಳೆದಿದ್ದು ಭತ್ತದ ನಾಡು, ಹನುಮ ಹುಟ್ಟಿದ ನಾಡು ಗಂಗಾವತಿಯಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ರಾಜಕೀಯ ವಿಷಯಗಳು, ಪ್ರಚಲಿತ ವಿದ್ಯಮಾನಗಳ ಮೇಲೆ ಆಸಕ್ತಿ. ತಂತ್ರಜ್ಞಾನದ ವಿಷಯಗಳು ಇವರಿಗೆ ಹೆಚ್ಚು ಆಪ್ತ. ಇವರಿಗೆ ಊರೂರು ಸುತ್ತೋದು.. ಕ್ರಿಕೆಟ್‌ ಆಡೋದು.. ಅದಿದು ಹುಡುಕೋದು ಇಷ್ಟ. ಅಂತೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ