ಆ್ಯಪ್ನಗರ

ಎಸಿಯಲ್ಲಿ ಕುಳಿತರೆ ಬರ ನೀಗಲ್ಲ, ಹಳ್ಳಿಗಳಿಗೆ ಹೋಗಿ: ಗೋವಿಂದ ಕಾರಜೋಳ

ರಾಜ್ಯದಲ್ಲಿ 3 ಸಾವಿರಕ್ಕೂ ಅಧಿಕ ಹಳ್ಳಿಗಳ ಜನರು ಕುಡಿಯುವ ನೀರಿಗೆ ಪರಿತಪಿಸುತ್ತಿದ್ದಾರೆ. ಜಾನುವಾರುಗಳಿಗೆ ನೀರಿನ ತೊಂದರೆ ಕಾಡುತ್ತಿದೆ. ಹಳ್ಳಿಗಳಿಗೆ ಹೋದರೆ ಮಾತ್ರ ಪರಿಹಾರ ಕಲ್ಪಿಸಲು ಸಾಧ್ಯ ಎಂದು ಬಿಜೆಪಿ ನಾಯಕರು ತಿಳಿಸಿದರು.

Vijaya Karnataka Web 15 May 2019, 4:27 pm
ಹುಬ್ಬಳ್ಳಿ: ರಾಜ್ಯದಲ್ಲಿ ತೀವ್ರ ಬರಗಾಲ ತಾಂಡವವಾಡುತ್ತಿದೆ. ಕುಡಿಯುವ ನೀರು ಸೇರಿ ಬರ ಪರಿಹಾರ ಕಾಮಗಾರಿ ಕೈಗೊಳ್ಳದ ಮುಖ್ಯಮಂತ್ರಿ ಕೇವಲ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಮಾಡಿದರೆ ಸಾಲದು, ಹಳ್ಳಿಗಳಿಗೆ ಹೋಗಿ ಸಮಸ್ಯೆ ಅರಿಯಬೇಕು ಎಂದು ಪ್ರತಿಪಕ್ಷ ಉಪನಾಯಕ ಗೋವಿಂದ ಕಾರಜೋಳ ಸಲಹೆ ನೀಡಿದ್ದಾರೆ.
Vijaya Karnataka Web ಗೋವಿಂದ ಕಾರಜೋಳ
ಗೋವಿಂದ ಕಾರಜೋಳ


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು ನಿರ್ದೇಶನ ನೀಡಿದರೆ, ಅಧಿಕಾರಿಗಳೂ ಎಸಿಯಲ್ಲಿ ಕುಳಿತು ನಿರ್ವಹಣೆ ಮಾಡುತ್ತಾರೆ. ಇದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ ಎಂದರು.

ರಾಜ್ಯದಲ್ಲಿ 3 ಸಾವಿರಕ್ಕೂ ಅಧಿಕ ಹಳ್ಳಿಗಳ ಜನರು ಕುಡಿಯುವ ನೀರಿಗೆ ಪರಿತಪಿಸುತ್ತಿದ್ದಾರೆ. ಜಾನುವಾರುಗಳಿಗೆ ನೀರಿನ ತೊಂದರೆ ಕಾಡುತ್ತಿದೆ. ಹಳ್ಳಿಗಳಿಗೆ ಹೋದರೆ ಮಾತ್ರ ಪರಿಹಾರ ಕಲ್ಪಿಸಲು ಸಾಧ್ಯ ಎಂದು ಬಿಜೆಪಿ ನಾಯಕರು ತಿಳಿಸಿದರು.

ರಾಜ್ಯದಲ್ಲಿ ಸಾಕಷ್ಟು ಮೇವು ದಾಸ್ತಾನು ಇದೆ ಎಂದು ಸರಕಾರ ಸುಳ್ಳು ಹೇಳುತ್ತಿದೆ. ವಾಸ್ತವದಲ್ಲಿ 2018-19 ನೇ ಸಾಲಿನಲ್ಲಿ ಹಿಂಗಾರು-ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಎಲ್ಲಿಯೂ ಬೆಳೆ ಬೆಳೆಯಲು ಸಾಧ್ಯವಾಗಿಲ್ಲ. ಹೀಗಾಗಿ ಮೇವು ದಾಸ್ತಾನು ಮಾಡಲು ಸಾಧ್ಯವಿಲ್ಲ ಎಂದು ಮಾಹಿತಿ ನೀಡಿದರು.

ರೈತನ ಮನೆಗೇಕೆ ಸಾಂತ್ವನ ಹೇಳಲಿಲ್ಲ?

ಕುಂದಗೋಳ ತಾಲೂಕು ಹರ್ಲಾಪುರದಲ್ಲಿ ಸಾಲ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಈರಪ್ಪ ಯಲಿವಾಳ ರೈತ ಕುಟುಂಬಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಕುಂದಗೋಳದಲ್ಲಿದ್ದರೂ ಸೌಜನ್ಯಕ್ಕೂ ಸಾಂತ್ವನ ಹೇಳಲಿಲ್ಲ ಏಕೆ? ಇದೇನಾ ನಿಮ್ಮ ರೈತ ಪರ ಕಾಳಜಿ? ಇದಕ್ಕೆ ಸ್ಪಷ್ಟೀಕರಣ ನೀಡಬೇಕೆಂದು ಎಂದು ಗೋವಿಂದ ಕಾರಜೋಳ ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ