ಆ್ಯಪ್ನಗರ

ಹೋಟೆಲ್‌ಗಳಂತೆ ಕಾಲೇಜುಗಳೂ ಸಹಜ ಸ್ಥಿತಿಗೆ ಬರುತ್ತೆ; ಜಗದೀಶ್‌ ಶೆಟ್ಟರ್ ವಿಶ್ವಾಸ

ಹೋಟೆಲ್‌, ರೆಸ್ಟೋರೆಂಟ್‌ ಆರಂಭಗೊಂಡಾಗಲೂ ಜನ ಬರುತ್ತಿರಲಿಲ್ಲ. ಇದೀಗ ಜನ ಸಹಜ ರೀತಿಯಲ್ಲಿ ಹೋಟೆಲ್‌, ರೆಸ್ಟೋರೆಂಟ್‌ಗಳಿಗೆ ಬರುತ್ತಿದ್ದಾರೆ. ಅದರಂತೆ ಕಾಲೇಜಿಗೂ ವಿದ್ಯಾರ್ಥಿಗಳು ಬರುತ್ತಾರೆ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Vijaya Karnataka Web 18 Nov 2020, 6:42 am
ಹುಬ್ಬಳ್ಳಿ: ಪದವಿ ಕಾಲೇಜು ಆರಂಭಿಕ ಹಂತದಲ್ಲಿ ವಿದ್ಯಾರ್ಥಿಗಳು ಬರುವುದು ಕಷ್ಟ. ದಿನ ಕಳೆದಂತೆ ಕಾಲೇಜುಗಳಿಗೆ ವಿದ್ಯಾರ್ಥಿಗಳು ಬರುತ್ತಾರೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ವಿಶ್ವಾಸ ವ್ಯಕ್ತಪಡಿಸಿದರು.
Vijaya Karnataka Web jagadish shettar


ನಗರದಲ್ಲಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, 'ಹೋಟೆಲ್‌, ರೆಸ್ಟೋರೆಂಟ್‌ ಆರಂಭಗೊಂಡಾಗಲೂ ಜನ ಬರುತ್ತಿರಲಿಲ್ಲ. ಇದೀಗ ಜನ ಸಹಜ ರೀತಿಯಲ್ಲಿ ಹೋಟೆಲ್‌, ರೆಸ್ಟೋರೆಂಟ್‌ಗಳಿಗೆ ಬರುತ್ತಿದ್ದಾರೆ. ಅದರಂತೆ ಕಾಲೇಜಿಗೂ ವಿದ್ಯಾರ್ಥಿಗಳು ಬರುತ್ತಾರೆ' ಎಂದರು.

8 ತಿಂಗಳು ನಂತರ ಕಾಲೇಜುಗಳ ಆರಂಭ, ವಿದ್ಯಾರ್ಥಿಗಳ ಹಿಂದೇಟು !

ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ವಿವೇಚನೆಗೆ ಬಿಟ್ಟದ್ದು. ಬಹಳಷ್ಟು ಜನ ಸಚಿವಾಕಾಂಕ್ಷಿಗಳಿದ್ದಾರೆ. ಯಾರಿಗೆ ಸಚಿವ ಸ್ಥಾನ ಕೊಡಬೇಕು, ಬಿಡಬೇಕು ಅನ್ನೋದು ಮುಖ್ಯಮಂತ್ರಿಗೆ ಬಿಟ್ಟಿದ್ದು. ಎಲ್ಲರನ್ನೂ ಸರಿದೂಗಿಸಿಕೊಂಡು ಹೋಗುವ ಕೆಲಸ ನಮ್ಮಿಂದಾಗುತ್ತೆ' ಎಂದರು.

ಹಲವು ದೂರುಗಳ ಕಾರಣಕ್ಕೆ ಆರೋಪಿಗೆ ಜಾಮೀನು ನಿರಾಕರಣೆ ಸಲ್ಲದು; ಹೈಕೋರ್ಟ್‌

ಇನ್ನು ಉಪ ಚುನಾವಣೆಯಲ್ಲಿ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಯಾರಾಗುತ್ತಾರೆ ಎಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ. ದೇಶದಲ್ಲಿ ಬಿಜೆಪಿ ಪರ ಅಲೆ ಇದೆ. ಎಲ್ಲ ಚುನಾವಣೆ, ಉಪ ಚುನಾವಣೆಗಳಲ್ಲಿ ಬಿಜೆಪಿ ನಿರೀಕ್ಷೆಗೂ ಮೀರಿದ ಗೆಲುವು ಸಾಧಿಸಿದೆ. ಹೀಗಾಗಿ ಮಸ್ಕಿ ಕ್ಷೇತ್ರದಲ್ಲಿಯೂ ಬಿಜೆಪಿ ಅಭ್ಯರ್ಥಿ ಅಭೂತಪೂರ್ಣ ಗೆಲುವು ಸಾಧಿಸಲಿದ್ದಾರೆ' ಎಂದರು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ