ಆ್ಯಪ್ನಗರ

ಸಮ್ಮೇಳನ ಮುಖ್ಯ ವೇದಿಕೆ ಪರಿಶೀಲಿಸಿದ ಶಾಸಕ

ಧಾರವಾಡ : ಬರುವ ಜನವರಿ 4, 5 ಹಾಗೂ 6 ರಂದು ನಡೆಯಲಿರುವ ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ಸಮಿತಿ ಅಧ್ಯಕ್ಷ ರಾದ ಶಾಸಕ ಪ್ರಸಾದ ಅಬ್ಬಯ್ಯ ಕೃಷಿ ವಿವಿ ಆವರಣದಲ್ಲಿ ಸಮ್ಮೇಳನದ ಮುಖ್ಯ ವೇದಿಕೆ, ಮಾಧ್ಯಮ ಕೇಂದ್ರ, ಭೋಜನಾಂಗಣ, ಪುಸ್ತಕ ಮಳಿಗೆಗಳ ನಿರ್ಮಾಣ ಕಾರ್ಯವನ್ನು ಭಾನುವಾರ ಪರಿಶೀಲಿಸಿದರು.

Vijaya Karnataka 31 Dec 2018, 5:00 am
ಧಾರವಾಡ : ಬರುವ ಜನವರಿ 4, 5 ಹಾಗೂ 6 ರಂದು ನಡೆಯಲಿರುವ ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ಸಮಿತಿ ಅಧ್ಯಕ್ಷ ರಾದ ಶಾಸಕ ಪ್ರಸಾದ ಅಬ್ಬಯ್ಯ ಕೃಷಿ ವಿವಿ ಆವರಣದಲ್ಲಿ ಸಮ್ಮೇಳನದ ಮುಖ್ಯ ವೇದಿಕೆ, ಮಾಧ್ಯಮ ಕೇಂದ್ರ, ಭೋಜನಾಂಗಣ, ಪುಸ್ತಕ ಮಳಿಗೆಗಳ ನಿರ್ಮಾಣ ಕಾರ್ಯವನ್ನು ಭಾನುವಾರ ಪರಿಶೀಲಿಸಿದರು.
Vijaya Karnataka Web conference mukhya vedike reviewed mla
ಸಮ್ಮೇಳನ ಮುಖ್ಯ ವೇದಿಕೆ ಪರಿಶೀಲಿಸಿದ ಶಾಸಕ


ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಸಾದ ಅಬ್ಬಯ್ಯ ಅವರು, 300*600 ಅಡಿಯ ಮುಖ್ಯ ವೇದಿಕೆಯನ್ನು 50 ಸಾವಿರ ಜನರಿಗೆ ಆಸನ ವ್ಯವಸ್ಥೆಯೊಂದಿಗೆ ನಿರ್ಮಿಸಲಾಗುತ್ತಿದೆ. ಶೇ.80 ಕಾರ್ಯ ಪೂರ್ಣವಾಗಿದೆ. ಕಲಾವಿದರಾದ ಬಿ.ಮಾರುತಿ, ಪ್ರತಾಪ ಬಹುರೂಪಿ ಹಾಗೂ ತಂಡದವರು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ಕಿತ್ತೂರ ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಕರ್ನಾಟಕ ವಿಶ್ವವಿದ್ಯಾಲಯ, ಡೈಟ್‌, ಮತ್ತಿತರ ಪ್ರಸಿದ್ಧ ಕಟ್ಟಡಗಳನ್ನು ಒಳಗೊಂಡ ವೇದಿಕೆಯ ಸಭಾ ಮಂಟಪ ನಿರ್ಮಾಣವಾಗುತ್ತಿದೆ ಎಂದರು.

ಕೃಷಿ ವಿಶ್ವವಿದ್ಯಾಲಯ ಫುಟ್ಬಾಲ್‌ ಮೈದಾನದ ಪೆವಿಲಿಯನ್‌ ಕಟ್ಟಡದಲ್ಲಿ ಮಾಧ್ಯಮ ಕೇಂದ್ರ ನಿರ್ಮಿಸಲಾಗುತ್ತಿದೆ. 500 ಪುಸ್ತಕ ಮಳಿಗೆಗಳು, 250 ವಾಣಿಜ್ಯ ಮಳಿಗೆಗಳು , ನೋಂದಣಿಗಾಗಿ 75 ಮಳಿಗೆಗಳು ತಲೆ ಎತ್ತಿವೆ. 150 ಜನ ಅಧಿಕಾರಿಗಳು ಹಾಗೂ 300 ಜನ ಎನ್‌ಎಸ್‌ಎಸ್‌ ಸ್ವಯಂ ಸೇವಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮುಖ್ಯ ಮಂಟಪದ ವಿನ್ಯಾಸ ಬಿಡುಗಡೆಗೊಳಿಸಿದರು. ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಲಿಂಗರಾಜ ಅಂಗಡಿ, ಲೋಕೋಪಯೋಗಿ ಅಧೀಕ್ಷ ಕ ಎಂಜಿನಿಯರ್‌ ಶಿವಯೋಗಿ ಹಿರೇಮಠ, ಕಾರ್ಯ ನಿರ್ವಾಹಕ ಎಂಜಿನಿಯರ್‌ ವಿರೂಪಾಕ್ಷ ಪ್ಪ ಯಮಕನಮರಡಿ, ಎಇಇ ವಿ.ಎನ್‌.ಪಾಟೀಲ, ಎಇ ಯು.ಎಂ. ಗದಗಕರ್‌, ಲೆಕ್ಕ ಪರಿಶೋಧನಾಧಿಕಾರಿ ರಮೇಶ ಎಸ್‌.ಕುಲಕರ್ಣಿ, ಆಹಾರ ಜಂಟಿ ನಿರ್ದೇಶಕ ಸದಾಶಿವ ಮರ್ಜಿ, ರಂಗಾಯಣ ಆಡಳಿತಾಧಿಕಾರಿ ಕೆ.ಹೆಚ್‌. ಚನ್ನೂರ, ಮಹೇಂದ್ರ ಸಿಂN, ಪರ್ವೇಜ್‌ ಕೊಣ್ಣೂರ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ