ಆ್ಯಪ್ನಗರ

ಇಂದು, ನಾಳೆ ಅಥವಾ ನಾಳಿದ್ದು ಸರಕಾರ ಬೀಳಬಹುದು: ಜಗದೀಶ್‌ ಶೆಟ್ಟರ್‌

ಮಾಜಿ ಮುಖ್ಯಮಂತ್ರಿ ಹುಬ್ಬಳ್ಳಿಯಲ್ಲಿ ಹೇಳಿಕೆ

Vijaya Karnataka Web 17 Sep 2018, 5:27 pm
ಹುಬ್ಬಳ್ಳಿ: ರಾಜ್ಯದಲ್ಲಿ ಯಾವುದೇ ರೀತಿಯ ಆಪರೇಷನ್ ಕಮಲ ನಡೆಯುತ್ತಿಲ್ಲ. ಮುಖ್ಯಮಂತ್ರಿ ಎಚ್‌.ಡಿ‌. ಕುಮಾರಸ್ವಾಮಿ ಹೈಡ್ರಾಮಾ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಆರೋಪಿಸಿದ್ದಾರೆ.
Vijaya Karnataka Web ಜಗದೀಶ್‌ ಶೆಟ್ಟರ್
ಜಗದೀಶ್‌ ಶೆಟ್ಟರ್


ಹುಬ್ಬಳ್ಳಿಯಲ್ಲಿ ಜಗದೀಶ್‌ ಶೆಟ್ಟರ್‌ ಸುದ್ದಿಗಾರರೊಂದಿಗೆ ಮಾತನಾಡಿದರು.

ಆಪರೇಷನ್ ಕಮಲದ ಬಗ್ಗೆ ಸಾಕ್ಷಿ ಪುರಾವೆಗಳಿಲ್ಲ. ಸುಳ್ಳು ಆಪಾದನೆ ಮಾಡುತ್ತ ಪಲಾಯನ ಮಾಡುತ್ತಿದ್ದಾರೆ ಕುಮಾರಸ್ವಾಮಿ. ನಿಮ್ಮ ಶಾಸಕರು ನಿಮ್ಮ ಜೊತೆ ಇದ್ದರೆ ಇಂತಹ ಬ್ಲೇಮ್ ಗೇಮ್ ಮಾಡುವ ಅವಶ್ಯಕತೆ ಬರುತ್ತಿರಲಿಲ್ಲ. ಗಟ್ಸ್ ಇದ್ದರೆ ನಿಮ್ಮ ಎಲ್ಲ ಶಾಸಕರನ್ನು ಸೇರಿಸಿ ಒಂದು ಹೇಳಿಕೆ ಕೊಡಿಸಿ ನೋಡೋಣ ಎಂದು ಸವಾಲು ಹಾಕಿದರು.

ಜಾರಕಿಹೊಳಿ ಸಹೋದರರಿಂದ ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ಇದೆ ಎಂದು ಹೇಳಿಸಲಿ. ಬಿಜೆಪಿಯ 104 ಶಾಸಕರು ಒಟ್ಟಾಗಿದ್ದಾರೆ. ಲೋಕಸಭಾ ಚುನಾವಣೆ ತಯಾರಿ ನಡೆಸಿದ್ದು, ಶಾಸಕರು, ಸಂಸದರು, ಜಿಲ್ಲಾಧ್ಯಕ್ಷರ ಸಭೆ ಕರೆಯಲಾಗಿದೆ. ಆಪರೇಷನ್ ಕಾಂಗ್ರೆಸ್ ನಡೆಯುತ್ತಿರುವ ಬಗ್ಗೆ ಮಾಹಿತಿಯಿಲ್ಲ ಎಂದರು.

ರಾಜ್ಯ ಸರ್ಕಾರ ನೀರಿನ ಮೇಲಿನ ಗುಳ್ಳೆ ಇದ್ದಂತೆ. ಇಂದು, ನಾಳೆ, ನಾಡಿದ್ದು ಯವುದಾದರೂ ಸಮಯದಲ್ಲಿ ಬೀಳಬಹುದು. ಸರ್ಕಾರದ ಅಸ್ತಿತ್ವದ ಬಗ್ಗೆಯೇ ಜನ ಪ್ರಶ್ನಿಸುತ್ತಿದ್ದಾರೆ ಎಂದು ಜಗದೀಶ್‌ ಶೆಟ್ಟರ್‌ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ