ಆ್ಯಪ್ನಗರ

ಅಭಿವೃದ್ಧಿಗೆ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಿ: ಎಚ್‌.ಕೆ.ಪಾಟೀಲ

ಹುಬ್ಬಳ್ಳಿ : ಸಮಾಜದ ಸರ್ವತೋಮುಖ ಹಿತಾಸಕ್ತಿಯನ್ನು ಕಾಪಾಡುವ ಮೌಲ್ಯಗಳನ್ನು ಹೊಂದಿರುವ ಕಾಂಗ್ರೆಸ್‌ ಪಕ್ಷ ಕ್ಕೆ ಮತ ನೀಡಬೇಕೆಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ಕೆ. ಪಾಟೀಲ್‌ ಮನವಿ ಮಾಡಿದ್ದಾರೆ.

Vijaya Karnataka 12 May 2019, 5:00 am
ಹುಬ್ಬಳ್ಳಿ : ಸಮಾಜದ ಸರ್ವತೋಮುಖ ಹಿತಾಸಕ್ತಿಯನ್ನು ಕಾಪಾಡುವ ಮೌಲ್ಯಗಳನ್ನು ಹೊಂದಿರುವ ಕಾಂಗ್ರೆಸ್‌ ಪಕ್ಷ ಕ್ಕೆ ಮತ ನೀಡಬೇಕೆಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ಕೆ. ಪಾಟೀಲ್‌ ಮನವಿ ಮಾಡಿದ್ದಾರೆ.
Vijaya Karnataka Web DRW-11 NADAF 4
ಕುಂದಗೋಳ ಉಪ ಚುನಾವಣೆ ಪ್ರಚಾರಾರ್ಥ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾವತಿ ಪರವಾಗಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ಕೆ. ಪಾಟೀಲ್‌ ಶನಿವಾರ ಬೆಟದೂರಲ್ಲಿ ಪ್ರಚಾರ ನಡೆಸಿದರು.


ಕುಂದಗೋಳ ವಿಧಾನಸಭಾ ಕ್ಷೇತ್ರದ ಬೆಟದೂರು,ಯಲಿವಾಳ ಸೇರಿದಮತೆ ಕ್ಷೇತ್ರದ ಹಲವು ಗ್ರಾಮಗಳಲ್ಲಿ ಶನಿವಾರ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ಬಡತನವನ್ನು ಹೋಗಲಾಡಿಸಬೇಕು ಎನ್ನುವ ಮೂಲ ಗುರಿಯನ್ನು ಇಂದಿರಾ ಗಾಂಧಿ ಹೊಂದಿದ್ದರು. ಅಂತಹದೇ ಆದರ್ಶವನ್ನು ಮುಂದುವರೆಸಿಕೊಂಡು ಬಂದಿರುವ ಕಾಂಗ್ರೆಸ್‌ ನ್ಯಾಯ ಕಾರ್ಯಕ್ರಮ ಘೋಷಿಸಿದೆ. ಬೇರೆ ಪಕ್ಷ ಗಳು ಊಹಿಸಲೂ ಸಾಧ್ಯವಿಲ್ಲದಂತಹ ಕಾರ್ಯಕ್ರಮ ಇದಾಗಿದ್ದು, ಬಡತನ ರೇಖೆಗಿಂತ ಕೆಳಗಿರುವವರನ್ನು ಮಧ್ಯಮವರ್ಗಕ್ಕೆ ಮೇಲೆತ್ತುವ ಯೋಜನೆ ಇದಾಗಿದೆ ಎಂದರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಕಳೆದ 5 ವರ್ಷದ ಅವಧಿಯಲ್ಲಿ ನೀಡಿದಂತಹ 'ಅನ್ನ ಭಾಗ್ಯ' ಯೋಜನೆ ರಾಜ್ಯದ ಕೋಟ್ಯಂತರ ಕುಟುಂಬಗಳ ಹಸಿವನ್ನು ತಣಿಸಿದೆ. ಇಂತಹ ಕಾರ್ಯಕ್ರಮಗಳ ಜತೆಯಲ್ಲಿ ಗ್ರಾಮಮಟ್ಟದ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾವತಿ ಶಿವಳ್ಳಿಯವರನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿಗಾಗಿ ಮತ ನೀಡಿ ಎಂದು ಮನವಿ ಮಾಡಿದರು.

ಬೆಟದೂರು ಗ್ರಾಮದಲ್ಲಿ ವೀರಯೋಧ ಹನುಮಂತಪ್ಪ ಕೊಪ್ಪದ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಪುಷ್ಪಮಾಲೆ ಅರ್ಪಿಸಿದರು.ಮಾಜಿ ಸಚಿವ ಎ.ಎಂ.ಹಿಂಡಸಗೇರಿ, ಮಾಜಿ ಶಾಸಕ ಎಸ್‌.ಜಿ.ನಂಜಯ್ಯನಮಠ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ