ಆ್ಯಪ್ನಗರ

ಹೆಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಕೆಗೆ ಕಾಂಗ್ರೆಸ್‌ ಚಿಂತನೆ

ಹುಬ್ಬಳ್ಳಿ : ರಾಜೀನಾಮೆ ಸಲ್ಲಿಸಿರುವ ಶಾಸಕರು ಸೋಮವಾರ ಒಳಗಾಗಿ ಸದನಕ್ಕೆ ಬರಲೇಬೇಕು. ಇಲ್ಲದಿದ್ದರೆ ಕಾಂಗ್ರೆಸ್‌ ವತಿಯಿಂದ ಹೆಬಿಯಸ್‌ ಕಾರ್ಪಸ್‌ ಅರ್ಜಿಯನ್ನು ಹೈಕೋರ್ಟ್‌ಗೆ ಸಲ್ಲಿಸಲು ಗಂಭೀರ ಚಿಂತನೆ ನಡೆದಿದೆ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿತಿಳಿಸಿದ್ದಾರೆ.

Vijaya Karnataka 13 Jul 2019, 5:00 am
ಹುಬ್ಬಳ್ಳಿ : ರಾಜೀನಾಮೆ ಸಲ್ಲಿಸಿರುವ ಶಾಸಕರು ಸೋಮವಾರ ಒಳಗಾಗಿ ಸದನಕ್ಕೆ ಬರಲೇಬೇಕು. ಇಲ್ಲದಿದ್ದರೆ ಕಾಂಗ್ರೆಸ್‌ ವತಿಯಿಂದ ಹೆಬಿಯಸ್‌ ಕಾರ್ಪಸ್‌ ಅರ್ಜಿಯನ್ನು ಹೈಕೋರ್ಟ್‌ಗೆ ಸಲ್ಲಿಸಲು ಗಂಭೀರ ಚಿಂತನೆ ನಡೆದಿದೆ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿತಿಳಿಸಿದ್ದಾರೆ.
Vijaya Karnataka Web congress contemplates submission of habeas corpus petition
ಹೆಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಕೆಗೆ ಕಾಂಗ್ರೆಸ್‌ ಚಿಂತನೆ


ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ನೀಡಿರುವ ರಾಜೀನಾಮೆ ಪತ್ರಗಳ ಪರಿಶೀಲನೆ ಪ್ರಕ್ರಿಯೆಯಲ್ಲಿ ಕೈಗೊಂಡಿರುವ ಸ್ಪೀಕರ್‌ ರಮೇಶಕುಮಾರ್‌ ತೀರ್ಮಾನಗಳು ಸಮರ್ಪಕವಾಗಿವೆ. ರಾಜೀನಾಮೆ ಅಂಗೀಕಾರವಾಗದಿದ್ದರೆ ಶಾಸಕರು ಅನಿವಾರ್ಯವಾಗಿ ವಿಪ್‌ ಅನ್ನು ಪಾಲಿಸಲೇಬೇಕು'' ಎಂದರು.

''ವಿಪ್‌ ಉಲ್ಲಂಘಿಸಿದರೆ ಸಹಜವಾಗಿ ಶಾಸಕರು ಅನರ್ಹತೆಗೆ ಒಳಗಾಗಲಿದ್ದಾರೆ. ರಾಜೀನಾಮೆ ಸಲ್ಲಿಸಿದ ಶಾಸಕರ ವೈಯಕ್ತಿಕ ಅಭಿಪ್ರಾಯಗಳನ್ನು ಸ್ಪೀಕರ್‌ ಆಲಿಸಲೇಬೇಕು. ಗುರುವಾರ ನಡೆದ ಸಂದರ್ಶನದ ವೇಳೆ ಅತೃಪ್ತ ಶಾಸಕರು, ರಾಜ್ಯದಲ್ಲಿ ಅಭದ್ರತೆ ಇದೆ, ಸರಕಾರದಲ್ಲಿ ಕೆಲಸಗಳು ಆಗುತ್ತಿಲ್ಲ ಎಂದು ನಾನಾ ರೀತಿ ಹೇಳಿಕೆಗಳನ್ನು ನೀಡಿದ್ದಾರೆ. ಇದನ್ನು ಗಮನಿಸಿದರೆ ಶಾಸಕರು ಯಾವುದೊ ಒತ್ತಡಕ್ಕೆ ಒಳಗಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಹೀಗಾಗಿ ಅವರ ರಾಜೀನಾಮೆ ಅಂಗೀಕಾರಗೊಳ್ಳುವುದು ಅನುಮಾನ'' ಎಂದು ಸಂಶಯ ವ್ಯಕ್ತಪಡಿಸಿದರು.

''ಬಿಜೆಪಿಯವರು ಅಧಿಕಾರ ಹಿಡಿಯಲು ವಾಮಮಾರ್ಗ ಅನುಸರಿಸುತ್ತಿದ್ದಾರೆ. ಅಸೆಂಬ್ಲಿಯಲ್ಲಿ ಗದ್ದಲ ಎಬ್ಬಿಸಿ ಗವರ್ನರ್‌ ಅವರಿಂದ ಸದನವನ್ನು ಅಮಾನತ್ತಿನಲ್ಲಿರಿಸಿ ಬಳಿಕ ಬಿಜೆಪಿ ಅಧಿಕಾರಕ್ಕೇರುವ ಹುನ್ನಾರ ನಡೆಸಿದೆ. ಇದು ಫಲಿಸುವುದಿಲ್ಲ. ಮುಂಬಯಿಯಲ್ಲಿರುವ ಅತೃಪ್ತ ಶಾಸಕರು ಮತ್ತೆ ಕಾಂಗ್ರೆಸ್‌ಗೆ ಬರಲಿದ್ದಾರೆ ಎಂಬ ವಿಶ್ವಾಸ ಇದೆ'' ಎಂದು ರಾಯರೆಡ್ಡಿ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ