ಆ್ಯಪ್ನಗರ

ಉನ್ನತ ಶಿಕ್ಷಣಕ್ಕೆ ನಿರಾಕರಣೆ: ಕಾಂಗ್ರೆಸ್‌ ಮುಖಂಡನ ಪುತ್ರಿ ಆತ್ಮಹತ್ಯೆ

ಉನ್ನತ ಶಿಕ್ಷಣಕ್ಕೆ ಮನೆಯವರು ಒಪ್ಪಲಿಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಶಿವಶಂಕರ ಹಂಪಣವರ ಪುತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Vijaya Karnataka Web 3 Jun 2018, 3:58 pm
ಧಾರವಾಡ: ಉನ್ನತ ಶಿಕ್ಷಣಕ್ಕೆ ಮನೆಯವರು ಒಪ್ಪಲಿಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಶಿವಶಂಕರ ಹಂಪಣವರ ಪುತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
Vijaya Karnataka Web congress leader daughter


ಶಹರದ ಚರಂತಿಮಠ ಗಾರ್ಡನ ನಿವಾಸಿ ಪೂರ್ಣಿಮಾ ( ಪ್ರೀತಿ ) ಶಿವಶಂಕರ ಹಂಪಣ್ಣವರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಉದ್ಯಮಿ ಶಿವಶಂಕರ ಹಂಪಣ್ಣವರ ಇವರ ಮಗಳಾದ ಪೂರ್ಣಿಮಾ ಉನ್ನತ ಶಿಕ್ಷಣ ಪಡೆಯಲು ಬೆಂಗಳೂರಿಗೆ ಹೋಗಲು ಇಚ್ಚಿಸಿದ್ದಳು. ಮನೆಯಲ್ಲಿ ಕುಟುಂಬಸ್ಥರ ಪ್ರೀತಿಗೆ ಪಾತ್ರಳಾಗಿದ್ದ ಪೂರ್ಣಿಮಾಳನ್ನು ಬೆಂಗಳೂರಿಗೆ ಕಳುಹಿಸಲು ಹಿಂದೇಟು ಹಾಕಿದಾಗ ಮನ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ತಿಳಿದು ಬಂದಿದೆ.

ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ