ಆ್ಯಪ್ನಗರ

ಸಿಎಎ ವಿರುದ್ಧದ ಹೋರಾಟಕ್ಕೆ ಪಿಎಫ್ಐಗೆ ಹಣ ; ಸಮಗ್ರ ತನಿಖೆಯಾಗಲಿ ಎಂದ ಸಿದ್ದರಾಮಯ್ಯ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟ ನಡೆಯುತ್ತಿರುವ ಸಂದರ್ಭದಲ್ಲಿ ಪಿಎಫ್‌ಐ ಸಂಘಟನೆಯ ಖಾತೆಗೆ ಕೋಟ್ಯಾಂತರ ರೂಪಾಯಿ ಹಣ ಸಂದಾಯವಾಗಿದೆ ಎಂಬ ಆರೋಪದ ಕುರಿತಾಗಿ ಪ್ರತಿಕ್ರಿಯೆ ನೀಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತನಿಖೆಗೆ ಒತ್ತಾಯಿಸಿದ್ದಾರೆ.

Vijaya Karnataka Web 28 Jan 2020, 12:01 pm
ಹುಬ್ಬಳ್ಳಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಹೋರಾಟದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಕೋಟ್ಯಾಂತರ ರೂಪಾಯಿ ಹಣ ವರ್ಗಾವಣೆ ಆಗಿದೆ ಎಂಬ ಆರೋಪದ ಕುರಿತಾಗ ಸಮಗ್ರ ತನಿಖೆಯಾಗಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ತನಿಖೆ ನಡೆದು ಆರೋಪ ಸಾಬೀತಾದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಿ ಎಂದರು.
Vijaya Karnataka Web congress leader siddaramaiah reaction on pfi funding
ಸಿಎಎ ವಿರುದ್ಧದ ಹೋರಾಟಕ್ಕೆ ಪಿಎಫ್ಐಗೆ ಹಣ ; ಸಮಗ್ರ ತನಿಖೆಯಾಗಲಿ ಎಂದ ಸಿದ್ದರಾಮಯ್ಯ


ಪಿಎಫ್‌ಐ ಸಂಘಟನೆಗೆ ಯಾರದೇ ಅಕ್ರಮ ಹಣ ಬಂದಿದ್ದಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳಲಿ ಎಂದರು. ಸಿಎಎ ಸಂವಿಧಾನಕ್ಕೆ ವಿರುದ್ಧವಾದಂತಹ ಕಾಯ್ದೆ. ಜಾತಿ ಧರ್ಮದ ಆಧಾರದ ಮೇಲೆ ಈ ಕಾಯ್ದೆ ಜಾರಿ ಮಾಡಿದ್ದಾರೆ. ಈ ಕಾಯ್ದೆ ಬಗ್ಗೆ ಕಾಂಗ್ರೆಸ್ ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದಿದ್ದಾರೆ.

ಮಂಗಳೂರು: ವ್ಯಾಪಾರಕ್ಕೂ ತಟ್ಟಿದ ಪೌರತ್ವ ಕಿಚ್ಚು, ಸಾಮಾಜಿಕ ಜಾಲತಾಣದಲ್ಲಿ ‘ಬಹಿಷ್ಕಾರದ’ ಕಿಡಿ !

ಇನ್ನು ಕೆಪಿಸಿಸಿ ಅಧ್ಯಕ್ಷ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಅಧ್ಯಕ್ಷ ಸ್ಥಾನಕ್ಕೆ ನಮ್ಮ‌ ಕೇಂದ್ರ‌ ನಾಯಕರು ಶೀಘ್ರವೇ ಆಯ್ಕೆ ಮಾಡಲಿದ್ದಾರೆ ಎಂದು ವಿಶ್ವಾಸವ್ಯಕ್ತಪಡಿಸಿದರು. ಇದೇ ವೇಳೆ ಬಿಜೆಪಿ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ, ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ರಾಷ್ಟ್ರೀಯ ನಾಯಕರು ಯಡಿಯೂರಪ್ಪ ಅವರಿಗೆ ಅನುಮತಿ ನೀಡಿಲ್ಲ.

ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಎಂಬುದೇ ಇಲ್ಲ. ಯಡಿಯೂರಪ್ಪನವರಿಗೆ ಅವರ ರಾಷ್ಟ್ರೀಯ ನಾಯಕರು ಯಾವುದೇ ಸ್ವತಂತ್ರ ಕೊಡುತ್ತಿಲ್ಲ. ಹೀಗಾಗಿ ಯಡಿಯೂರಪ್ಪ ಅವರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಎಂದರು.

ಈ ವೇಳೆ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಕೇಂದ್ರದಿಂದ ರಾಜ್ಯಕ್ಕೆ ಯಾವುದೇ ಹಣ ಬಿಡುಗಡೆ ಮಾಡುತ್ತಿಲ್ಲ. ರಾಜ್ಯಕ್ಕೆ ಬರಬೇಕಾದ ಪಾಲು ಬಂದಿಲ್ಲ ಎಂದು ಆರೋಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ