ಆ್ಯಪ್ನಗರ

ಹುಬ್ಬಳ್ಳಿಯಲ್ಲಿ ಘರ್ಷಣೆಗೆ ತಿರುಗಿದ ಪ್ರತಿಭಟನೆ: ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ಜಟಾಪಟಿ!

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೈಪಾಸ್ ಅಗಲೀಕರಣ ಹಾಗೂ ಇತ್ತೀಚೆಗೆ ಮೃತಪಟ್ಟ ಕುಟುಂಬಗಳಿಗೆ ಪರಿಹಾರ‌ ನೀಡುವಂತೆ ಒತ್ತಾಯಿಸಿ ನಡೆಸಿದ ಪ್ರತಿಭಟನೆಯು ಘರ್ಷಣೆಯ ಸ್ವರೂಪವನ್ನು ಪಡೆದುಕೊಂಡಿತು. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಕ್ಷಣಕಾಲ ಜಟಾಪಟಿ ನಡೆದಿದ್ದು, ಈಗ ಪರಿಸ್ಥಿತಿ ತಿಳಿಯಾಗಿದೆ.

Vijaya Karnataka Web 18 Jan 2021, 1:55 pm
ಹುಬ್ಬಳ್ಳಿ -ಧಾರವಾಡ: ಬೈಪಾಸ್ ಅಗಲೀಕರಣ ಹಾಗೂ ಇತ್ತೀಚೆಗೆ ಮೃತಪಟ್ಟ ಕುಟುಂಬಗಳಿಗೆ ಪರಿಹಾರ‌ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ತೀವ್ರ ಸ್ವರೂಪ ಪಡೆದು ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟ ಘಟನೆ ನಡೆದಿದೆ.
Vijaya Karnataka Web ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ


ಜ.18ರಂದು ಕಾಂಗ್ರೆಸ್ ಕಾರ್ಯಕರ್ತರು ಹುಬ್ಬಳ್ಳಿ ಹೊರ ವಲಯದ ಗಬ್ಬೂರ ಬೈಪಾಸ್ ನಂದಿ ಟೋಲ್ ಗೇಟ್ ಬಂದ್ ಮಾಡಿ ಬೈಪಾಸ್ ಅಗಲೀಕರಣ ಹಾಗೂ ಇತ್ತೀಚೆಗೆ ಧಾರವಾಡದಲ್ಲಿ ಅಪಘಾತದಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ‌ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಜಟಾಪಟಿ ನಡೆದಿದೆ.
ಪ್ರತಿಭಟನೆಯು ಘರ್ಷಣೆಗೆ ತಿರುಗಿ ಕಾರ್ಯಕರ್ತನೊಬ್ಬ ಗಾಯಗೊಂಡಿದ್ದಾ‌ನೆ. ಟೋಲ್ ಗೇಟ್ ಗೆ ನುಗ್ಗುತ್ತಿದ್ದಾಗ ಪೋಲೀಸರು ಮತ್ತು ಪ್ರತಿಭಟನಾಕಾರರ‌ ಮಧ್ಯೆ ಪರಸ್ಪರ ತಳ್ಳಾಟ ನೂಕಾಟ ಜರುಗಿತು. ತಾಳ್ಮೆ ಕಳೆದುಕೊಂಡ ಪೊಲೀಸರು ಕಾರ್ಯಕರ್ತರ ಮೇಲೆ ಹಲ್ಲೆಯನ್ನೂ ನಡೆಸಿದರು. ಈ ವೇಳೆ ಸದಾನಂದ ಕುಲಕರ್ಣಿ ಎಂಬಾತನಿಗೆ ತುಟಿಗೆ ಭಾರಿ ಪೆಟ್ಟು ಬಿದ್ದು ರಕ್ತ ಸುರಿಯಿತು. ಅಲ್ಲದೇ ಅಂಗಿ ಕೂಡ ಹರಿದಿದೆ.
ಕೃಷಿ ಮಸೂದೆ ಜಾರಿ ವಿರೋಧ, ಬೆಳಗಾವಿಯಲ್ಲಿ ರೈತರಿಂದ ಅರೆಬೆತ್ತಲೆ ಮೆರವಣಿಗೆ; ಅಮಿತ್ ಶಾ ಗೆ ಗೋ ಬ್ಯಾಕ್!

ಏತನ್ಮಧ್ಯೆ ಟೋಲ್ ಗೆ ನುಗ್ಗುತ್ತಿದ್ದಾಗ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದರು. ಇದರಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರು ಕೈಗೆ ಸಿಕ್ಕ‌ ಕಲ್ಲು‌ ಮಣ್ಣನ್ನು ಪೊಲೀಸರೆಡೆಗೆ ತೂರಿದ್ದಾರೆ.
ಸಿ.ಡಿ. ರಾಜಕೀಯ ಗಡಿಬಿಡಿ: ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಸ್ಥಳಕ್ಕೆ ಸಕಾಲಕ್ಕೆ ಆಗಮಿಸಿದ ಕಮಿಷನರ್ ಲಾಬೂರಾಮ್ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ