ಆ್ಯಪ್ನಗರ

ಹತ್ರಾಸ್‌ ಘಟನೆ ಖಂಡಿಸಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ

ಹತ್ರಾಸ್‌ ಘಟನೆ ಖಂಡಿಸಿ ಹುಬ್ಬಳ್ಳಿಯಲ್ಲಿರಾಜ್ಯ ಕಾಂಗ್ರೆಸ್‌ ಸಮಿತಿಯ ಪರಿಶಿಷ್ಟ ಜಾತಿ ಇಲಾಖೆಯ ಹಾಗೂ ಧಾರವಾಡ ಜಿಲ್ಲಾಗ್ರಾಮೀಣ ಕಾಂಗ್ರೆಸ್‌ ಸಮಿತಿಯ ಪರಿಶಿಷ್ಟ ಜಾತಿ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Vijaya Karnataka Web 9 Oct 2020, 5:07 pm
ಹುಬ್ಬಳ್ಳಿ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನೆ ಖಂಡಿಸಿ ರಾಜ್ಯ ಕಾಂಗ್ರೆಸ್‌ ಸಮಿತಿಯ ಪರಿಶಿಷ್ಟ ಜಾತಿ ಘಟಕದ ನೇತೃತ್ವದಲ್ಲಿ ಹುಬ್ಬಳ್ಳಿ ನಗರದಲ್ಲಿ ಪ್ರತಿಭಟನೆ ನಡೆಯಿತು.
Vijaya Karnataka Web congress flag


ತಹಸೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ, ಮಾತನಾಡಿದ ಪ್ರತಿಭಟನಾಕಾರರು, ಗ್ಯಾಂಗ್‌ರೇಪ್‌ ನಡೆದು ಅಮಾಯಕ ಹೆಣ್ಣುಮಗಳು ಮೃತಪಟ್ಟಿದ್ದು, ನಾಚಿಕೆಗೇಡಿ ಸಂಗತಿ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸರಕಾರ ಕೃತ್ಯವನ್ನು ಮುಚ್ಚಿಹಾಕಲು ಯತ್ನಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದಂತಾಗಿದೆ ಎಂದು ಆರೋಪಿಸಿದರು.

ನಾನು ಬಿಜೆಪಿ ಸೇರುತ್ತಿದ್ದೇನೆ ಅನ್ನೋದು ಬರೀ ಊಹಾಪೋಹ ಅಷ್ಟೇ; ವಿನಯ್ ಕುಲಕರ್ಣಿ

ಕಾಂಗ್ರೆಸ್‌ ಗ್ರಾಮೀಣ ಜಿಲ್ಲಾ ಅಧ್ಯಕ್ಷ ಅನೀಲಕುಮಾರ ಪಾಟೀಲ, ಎಸ್‌.ಸಿ. ಸೆಲ್‌ ಮಹಾನಗರ ಜಿಲ್ಲಾಧ್ಯಕ್ಷ ಆನಂದ ಮುಶನ್ನವರ, ಸದಾನಂದ ಡಂಗನವರ, ಅನ್ವರ ಮುಧೋಳ, ಮೋಹನ ಹಿರೇಮನಿ, ಶಾಕೀರ ಸನದಿ, ವೆಂಕಟೇಶ ಮೊರಬದ, ಮಗೆಪ್ಪ ಮಜಲಿ, ಪಕ್ಷದ ಎಲ್ಲಬ್ಲಾಕ್‌ ಘಟಕದ ಅಧ್ಯಕ್ಷರು, ಮಹಿಳಾ ಕಾಯಕತರು, ಹಿರಿಯ ಮುಖಂಡರು, ಯುವ ಘಟಕದ ಕಾರ್ಯಕರ್ತರು, ಅಭಿಮಾನಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ