ಆ್ಯಪ್ನಗರ

ನವಲಗುಂದದಲ್ಲಿ ಕಾಂಗ್ರೆಸ್‌ ಪ್ರತಿಭಟನೆ

ನವಲಗುಂದ: ರೈತ ವಿರೋಧಿ ಭೂಸುಧಾರಣಾ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ವಿರೋಧಿ ಕಾಯ್ದೆ ತಿದ್ದುಪಡಿಗಳನ್ನು ತಕ್ಷಣ ಹಿಂಪಡೆಯಬೇಕು, ಕೊರೊನಾ ನಿಯಂತ್ರಣದಲ್ಲಿನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರದ ವಿಷಯದಲ್ಲಿಹೈಕೋರ್ಟ್‌ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಜಿಲ್ಲಾಯುವ ಕಾಂಗ್ರೆಸ್‌ ಅಧ್ಯಕ್ಷ ವಿನೋದ್‌ ಅಸೂಟಿ ನೇತೃತ್ವದಲ್ಲಿಪ್ರತಿಭಟನೆ ನಡೆಸಿತು.

Vijaya Karnataka 30 Aug 2020, 5:00 am
ನವಲಗುಂದ: ರೈತ ವಿರೋಧಿ ಭೂಸುಧಾರಣಾ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ವಿರೋಧಿ ಕಾಯ್ದೆ ತಿದ್ದುಪಡಿಗಳನ್ನು ತಕ್ಷಣ ಹಿಂಪಡೆಯಬೇಕು, ಕೊರೊನಾ ನಿಯಂತ್ರಣದಲ್ಲಿನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರದ ವಿಷಯದಲ್ಲಿಹೈಕೋರ್ಟ್‌ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಜಿಲ್ಲಾಯುವ ಕಾಂಗ್ರೆಸ್‌ ಅಧ್ಯಕ್ಷ ವಿನೋದ್‌ ಅಸೂಟಿ ನೇತೃತ್ವದಲ್ಲಿಪ್ರತಿಭಟನೆ ನಡೆಸಿತು.
Vijaya Karnataka Web congress protests in navalgund
ನವಲಗುಂದದಲ್ಲಿ ಕಾಂಗ್ರೆಸ್‌ ಪ್ರತಿಭಟನೆ


ವಿನೋದ್‌ ಅಸೂಟಿ ಮಾತನಾಡಿ, ಕರ್ನಾಟಕ ಬಿಜೆಪಿ ಸರಕಾರ ಅತಿವೃಷ್ಟಿ ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿಸತತ ಎರಡು ವರ್ಷ ವಿಫಲವಾಗಿದೆ. ಕಳೆದ ವರ್ಷ ಘೋಷಿಸಿದ ಪರಿಹಾರದ ಮೊತ್ತವೆಷ್ಟು? ಎಷ್ಟು ಜನರಿಗೆ ವಿತರಿಸಲಾಗಿದೆ? ಬಿದ್ದು ಹೋದ ಎಷ್ಟು ಮನೆಗಳನ್ನು ಕಟ್ಟಲಾಗಿದೆ? ಎಷ್ಟು ಜನ ಕೃಷಿಕರಿಗೆ ಪರಿಹಾರ ನೀಡಲಾಗಿದೆ. ಮತ್ತಿತರ ಎಲ್ಲವಿವರಗಳ ಲೆಕ್ಕ ಕೊಡಬೇಕೆಂದು, ರೈತ ವಿರೋಧಿ ಭೂಸುಧಾರಣೆ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ವಿರೋಧಿ ಕಾರ್ಮಿಕ ಕಾಯ್ದೆ ತಿದ್ದುಪಡಿಗಳನ್ನು ತಕ್ಷಣ ವಾಪಸ್‌ ತೆಗೆದುಕೊಳ್ಳಬೇಕು, ಕೊರೊನಾ ನಿಯಂತ್ರಣದಲ್ಲಿನಡೆದಿರುವ ಭ್ರಷ್ಟಾಚಾರ ಕುರಿತು ಹೈಕೋರ್ಟ್‌ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ಮಾಡಿಸಬೇಕೆಂದು ಸರಕಾರವನ್ನು ಆಗ್ರಹಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವರ್ಧಮಾನಗೌಡ ಹಿರೇಗೌಡರ, ಕಿಸಾನ್‌ ಕಾಂಗ್ರೆಸ್‌ ಅಧ್ಯಕ್ಷ ಸದುಗೌಡ ಪಾಟೀಲ್‌, ಆರ್‌.ಎಚ್‌.ಕೋನರಡ್ಡಿ, ಸುಲೇಮಾನ ನಾಶಿಪುಡಿ, ಮುತ್ತಣ್ಣ ಪೂಜಾರ, ಮಂಜು ಜಾಧವ್‌,ಪ್ರವೀಣ ಮೂಗಣ್ಣವರ, ಶಿವಾನಂದ ತಡಸಿ ಮತ್ತಿತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ