ಹುಬ್ಬಳ್ಳಿ: ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಅವರ ಮನೆ, ಕಾಲೇಜುಗಳ ಮೇಲೆ ನಡೆದ ಐಟಿ ದಾಳಿ ಖಂಡಿಸಿ ಹು-ಧಾ ಮಹಾನಗರ ಕಾಂಗ್ರೆಸ್ ಸಮಿತಿ ಡಾ.ಅಂಬೇಡ್ಕರ್ ವೃತ್ತದಲ್ಲಿಶನಿವಾರ ಪ್ರತಿಭಟನೆ ನಡೆಸಿದರು.
ಪರಮೇಶ್ವರ ಅವರ ಏಳ್ಗೆ ಸಹಿಸದ ಕೇಂದ್ರ ಹಾಗೂ ರಾಜ್ಯ ಸರಕಾರ ಐ.ಟಿ ದಾಳಿ ಮಾಡಿಸುತ್ತಿವೆ. ಉಪಚುನಾವಣೆ ಹಿನ್ನೆಲೆಯಲ್ಲಿಮಾನಸಿಕ ಹಾಗೂ ರಾಜಕೀಯವಾಗಿ ಕುಗ್ಗಿಸಲು ಬಿಜೆಪಿ ಸರಕಾರ ಮಾಡುತ್ತಿರುವ ಷಡ್ಯಂತ್ರ ಎಂದು ಆರೋಪಿಸಿದರು. ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಷಡ್ಯಂತ್ರಕ್ಕೆ ಕಾಂಗ್ರೆಸ್ ಮಣಿಯುವುದಿಲ್ಲಎಂದರು.
ಕೇಂದ್ರದ ವಿರುದ್ಧ ಆಕ್ರೋಶ
ಮಾಜಿ ಸಂಸದ ಪ್ರೋ. ಐ.ಜಿ ಸನದಿ ಮಾತನಾಡಿ, ಹಿರಿಯ ರಾಜಕಾರಣಿ ಆರ್.ಎಲ್. ಜಾಲಪ್ಪ ಸೇರಿಂದಂತೆ ಮಾಜಿ ಸಚಿವ ಡಿ.ಕೆ ಶಿವಕುಮಾರ ಅವರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ನಡೆಸಿರುವ ದಾಳಿಯು ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿದರು. ಪ್ರಧಾನ ಮಂತ್ರಿಗಳು ಹಾಗೂ ಕೇಂದ್ರ ಗೃಹ ಸಚಿವರ ಅಣತಿಯಂತೆ ದೇಶದಲ್ಲಿಸಾಂವಿಧಾನಿಕ ಸ್ಥಾನಿಕ ಸಂಸ್ಥೆಗಳಾದ ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ, ಕೇಂದ್ರಿಯ ತನಿಖಾದಳ ಹಾಗೂ ಭಾರತೀಯ ಚುನಾವಣೆಯ ಆಯೋಗವು ಸೇರಿದಂತೆ ಕೇಂದ್ರ ಸರಕಾರದ ಮೂಗಿನ ನೇರಕ್ಕೆ ಕೆಲಸ ಮಾಡುತ್ತಿವೆ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ರಾಜಶೇಖರ ಮೆಣಸಿನಕಾಯಿ ಅನ್ವರ ಮುಧೋಳ, ಅಲ್ತಾಫ್ ಹಳ್ಳೂರ ಅಧ್ಯಕ್ಷರು ಹು-ಧಾ ಮಪಾ,ಬಾಬಾಜಾನ ಮುಧೋಳ, ಶಾಖೀರ ಸನದಿ, ವಸಂತ ಲದವಾ, ಶರಣಪ್ಪ ಕೊಟಗಿ, ಮಹೇಶ ದಾಬಡೆ, ಮಹೊಮೊದ ಕೊಳುರ, ಸೂರ್ಯಕಾಂತ ಘೊಡಕೆ, ಶೋಭಾ ಕಮತರ ಮುಂತಾದ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ಪರಮೇಶ್ವರ ಅವರ ಏಳ್ಗೆ ಸಹಿಸದ ಕೇಂದ್ರ ಹಾಗೂ ರಾಜ್ಯ ಸರಕಾರ ಐ.ಟಿ ದಾಳಿ ಮಾಡಿಸುತ್ತಿವೆ. ಉಪಚುನಾವಣೆ ಹಿನ್ನೆಲೆಯಲ್ಲಿಮಾನಸಿಕ ಹಾಗೂ ರಾಜಕೀಯವಾಗಿ ಕುಗ್ಗಿಸಲು ಬಿಜೆಪಿ ಸರಕಾರ ಮಾಡುತ್ತಿರುವ ಷಡ್ಯಂತ್ರ ಎಂದು ಆರೋಪಿಸಿದರು. ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಷಡ್ಯಂತ್ರಕ್ಕೆ ಕಾಂಗ್ರೆಸ್ ಮಣಿಯುವುದಿಲ್ಲಎಂದರು.
ಕೇಂದ್ರದ ವಿರುದ್ಧ ಆಕ್ರೋಶ
ಮಾಜಿ ಸಂಸದ ಪ್ರೋ. ಐ.ಜಿ ಸನದಿ ಮಾತನಾಡಿ, ಹಿರಿಯ ರಾಜಕಾರಣಿ ಆರ್.ಎಲ್. ಜಾಲಪ್ಪ ಸೇರಿಂದಂತೆ ಮಾಜಿ ಸಚಿವ ಡಿ.ಕೆ ಶಿವಕುಮಾರ ಅವರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ನಡೆಸಿರುವ ದಾಳಿಯು ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿದರು. ಪ್ರಧಾನ ಮಂತ್ರಿಗಳು ಹಾಗೂ ಕೇಂದ್ರ ಗೃಹ ಸಚಿವರ ಅಣತಿಯಂತೆ ದೇಶದಲ್ಲಿಸಾಂವಿಧಾನಿಕ ಸ್ಥಾನಿಕ ಸಂಸ್ಥೆಗಳಾದ ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ, ಕೇಂದ್ರಿಯ ತನಿಖಾದಳ ಹಾಗೂ ಭಾರತೀಯ ಚುನಾವಣೆಯ ಆಯೋಗವು ಸೇರಿದಂತೆ ಕೇಂದ್ರ ಸರಕಾರದ ಮೂಗಿನ ನೇರಕ್ಕೆ ಕೆಲಸ ಮಾಡುತ್ತಿವೆ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ರಾಜಶೇಖರ ಮೆಣಸಿನಕಾಯಿ ಅನ್ವರ ಮುಧೋಳ, ಅಲ್ತಾಫ್ ಹಳ್ಳೂರ ಅಧ್ಯಕ್ಷರು ಹು-ಧಾ ಮಪಾ,ಬಾಬಾಜಾನ ಮುಧೋಳ, ಶಾಖೀರ ಸನದಿ, ವಸಂತ ಲದವಾ, ಶರಣಪ್ಪ ಕೊಟಗಿ, ಮಹೇಶ ದಾಬಡೆ, ಮಹೊಮೊದ ಕೊಳುರ, ಸೂರ್ಯಕಾಂತ ಘೊಡಕೆ, ಶೋಭಾ ಕಮತರ ಮುಂತಾದ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.