ಆ್ಯಪ್ನಗರ

ನೂತನ ಕಟ್ಟದ ನಿರ್ಮಾಣಕ್ಕೆ ಶಂಕುಸ್ಥಾಪನೆ

ಹುಬ್ಬಳ್ಳಿ: ಭಾರತೀಯ ಕಿಸಾನ್‌ ಸಂಘ - ಕರ್ನಾಟಕ ಪ್ರದೇಶ ವತಿಯಿಂದ ಗುರುವಾರ ಕುಮಾರವ್ಯಾಸ ನಗರದಲ್ಲಿಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು.

Vijaya Karnataka 11 Nov 2019, 5:00 am
ಹುಬ್ಬಳ್ಳಿ: ಭಾರತೀಯ ಕಿಸಾನ್‌ ಸಂಘ - ಕರ್ನಾಟಕ ಪ್ರದೇಶ ವತಿಯಿಂದ ಗುರುವಾರ ಕುಮಾರವ್ಯಾಸ ನಗರದಲ್ಲಿಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು.
Vijaya Karnataka Web construct new construction
ನೂತನ ಕಟ್ಟದ ನಿರ್ಮಾಣಕ್ಕೆ ಶಂಕುಸ್ಥಾಪನೆ


ಸಾನ್ನಿಧ್ಯ ವಹಿಸಿದ್ದ ಹುಕ್ಕೇರಿ ಶ್ರೀ ಗುರುಶಾಂತೇಶ್ವರ ಹಿರೇಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶೀರ್ವಚನ ನೀಡಿದರು. ನರಗುಂದ ಶ್ರೀ ಸಿದ್ಧೇಶ್ವರ ಪಂಚಗೃಹ ಗುಡ್ಡದ ಹಿರೇಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿದರು.

ಕಿಸಾನ ಸಂಘದ ವಿಜಯಪುರ ಜಿಲ್ಲಾಕಟ್ಟಡ ಸಮಿತಿ ಅಧ್ಯಕ್ಷ ಬಿ.ಎಂ. ಕೋಕರೆ

ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಘದ ರಾಷ್ಟ್ರೀಯ ಅಧ್ಯಕ್ಷ ಐ.ಎನ್‌. ಬಸವೇಗೌಡರು, ಅಖಿಲ ಭಾರತ ಸಂಘಟನಾ ಕಾರ್ಯದರ್ಶಿ ದಿನೇಶ ಕುಲಕರ್ಣಿ, ಸಾಮಾಜಿಕ ಕಾರ್ಯಕರ್ತ ಹಾಗೂ ಕೃಷಿಕರಾದ ಅರವಿಂದರಾವ ದೇಶಪಾಂಡೆ, ಕಟ್ಟಡ ಸಮಿತಿ ಗೌರವಾಧ್ಯಕ್ಷ ಯಳಂದೂರ ರಂಗನಾಥ, ಸ್ವರ್ಣ

ಗ್ರುಪ್‌ ಆಫ್‌ ಕಂಪನಿಸ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ಚಿ.ವಿ.ಎಸ್‌.ವಿ. ಪ್ರಸಾದ, ಉದ್ಯಮಿಗಳಾದ ರಮೇಶ ಬಾಫಣಾ, ವೆಂಕಟರಮಣ ನಾರಾಯಣ ಚಿಟ್ಟಾ, ಸಂಘದ ರಾಜ್ಯಾಧ್ಯಕ್ಷ ಪುಟ್ಟಸ್ವಾಮಿಗೌಡ, ಕರ್ನಾಟಕ ಉತ್ತರ ಪ್ರಾಂತದ ಅಧ್ಯಕ್ಷ ಗುರುನಾಥ ಎಸ್‌. ಬಗಲಿ ಉಪಸ್ಥಿತರಿದ್ದರು.

ರೇವತಿ ದಶರಥ ರಂಗರಡ್ಡಿ ಪ್ರಾರ್ಥಿಸಿದರು. ಕಟ್ಟಡ ಸಮಿತಿಯ ಕಾರ್ಯಾಧ್ಯಕ್ಷ ರಮೇಶ ಬ. ಕೊರವಿ ಸ್ವಾಗತಿಸಿದರು. ಜಿಲ್ಲಾಕಾರ್ಯದರ್ಶಿ ಡಿ.ಸಿ. ರಂಗರಡ್ಡಿ ನಿರೂಪಿಸಿದರು. ಜಿಲ್ಲಾಧ್ಯಕ್ಷ ವಿವೇಕ ಮೋರೆ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ