ಆ್ಯಪ್ನಗರ

ಗಣೇಶ್ ಪೇಟೆ ಪಾಕ್‌ನಂತಿದೆ: ಮೌಲ್ವಿ ವಿವಾದಾತ್ಮಕ ಹೇಳಿಕೆ

ಗಣೇಶ್ ಪೇಟೆ ನನಗೆ ಪಾಕಿಸ್ತಾನದಂತೆ ಕಾಣಿಸುತ್ತಿದೆ ಎಂದು ಮೌಲ್ವಿಯೊಬ್ಬರು ನೀಡಿರುವ ಹೇಳಿಕೆಯ ವೀಡಿಯೊ ವೈರಲ್‌ ಆಗಿದ್ದು, ತೀವ್ರ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

Vijaya Karnataka Web 4 Dec 2017, 1:15 pm
ಹುಬ್ಬಳ್ಳಿ: ಗಣೇಶ್ ಪೇಟೆ ನನಗೆ ಪಾಕಿಸ್ತಾನದಂತೆ ಕಾಣಿಸುತ್ತಿದೆ. ನಾವು ಒಗ್ಗಟ್ಟಿನಿಂದ ಹಾಗೂ ಎದೆ ಸೆಟೆದು ನಡೆದರೆ ನಮ್ಮ ತಂಟೆಗೆ ಯಾರೂ ಬರುವುದಿಲ್ಲ ಎಂದು ಮೌಲ್ವಿಯೊಬ್ಬರು ನೀಡಿರುವ ಹೇಳಿಕೆಯ ವೀಡಿಯೊ ವೈರಲ್‌ ಆಗಿದ್ದು, ತೀವ್ರ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.
Vijaya Karnataka Web controversy statement by maulvi
ಗಣೇಶ್ ಪೇಟೆ ಪಾಕ್‌ನಂತಿದೆ: ಮೌಲ್ವಿ ವಿವಾದಾತ್ಮಕ ಹೇಳಿಕೆ


ಈದ್ ಮಿಲಾದ್ ಹಬ್ಬದ ವೇಳೆ ಮೌಲ್ವಿ ಮಜೀದ ಮುತವಲಿ ಅಬ್ದುಲ್ ಹಮೀದ್ ಖೈರಾತಿ ಈ ಹೇಳಿಕೆ ನೀಡಿದ್ದು, ಗಣೇಶ್ ಪೇಟೆ ನನಗೆ ಪಾಕಿಸ್ತಾನ ಹಾಗೇ ಕಾಣುತ್ತಿದೆ, ಪಾಕಿಸ್ತಾನಕ್ಕೆ ಹೋಗಿ ನೋಡುವ ಅವಶ್ಯಕತೆ ಇಲ್ಲ. ಇಲ್ಲಿಯೇ ಪಾಕಿಸ್ತಾನ ನಿರ್ಮಾಣವಾಗಿದೆ. ನಾವು ಒಗ್ಗಟ್ಟಿನಿಂದ ಹಾಗೂ ಎದೆ ಸೆಟೆದು ನಡೆದರೆ ನಮ್ಮ ತಂಟೆಗೆ ಯಾರೂ ಬರುವುದಿಲ್ಲ ಎಂದು ಹೇಳಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಈ ವೀಡಿಯೊ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಮೌಲ್ವಿ ಎಸಿಪಿ ದಾವೂದ್ ಖಾನ್ ಹಾಗೂ ಪೊಲೀಸರ ಮುಂದೆಯೇ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ