ಹುಬ್ಬಳ್ಳಿ: ಪಾಕಿಸ್ತಾನ ಪರ ವಿವಾದಾತ್ಮಕ ಹೇಳಿಕೆ ನೀಡಿರುವ ಇಲ್ಲಿನ ಗಣೇಶಪೇಟೆಯ ಮುತವಲ್ಲಿ ಅಬ್ದುಲ್ಹಮೀದ ಖೈರಾತಿ ವಿರುದ್ಧ ಇಲ್ಲಿನ ಶಹರ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣ ದಾಖಲಾಗಿದ್ದು, ಡಿಸಿಪಿ ನೇತೃತ್ವದಲ್ಲಿ ತನಿಖೆ ನಡೆಸಲು ಪೊಲೀಸ್ ಆಯಕ್ತ ಎಂ.ಎನ್. ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಡಿ. 2ರಂದು ನಗರದ ಗಣೇಶಪೇಟೆಯಲ್ಲಿ ನಡೆದ ಈದ್ ಮಿಲಾದ್ ಕಾರ್ಯಕ್ರಮದಲ್ಲಿ ಖೈರಾತಿ, ''ಪಾಕಿಸ್ತಾನ ನೋಡಬೇಕೆಂದರೆ ಅಲ್ಲಿಗೆ ಹೋಗುವ ಅವಶ್ಯಕತೆ ಇಲ್ಲ, ಈ ಗಣೇಶಪೇಟೆ ನನಗೆ ಪಾಕಿಸ್ತಾನದಂತೆಯೇ ಕಾಣುತ್ತಿದೆ'' ಎಂದು ಹೇಳಿಕೆ ನೀಡಿದ್ದರು.
ಖೈರಾತಿ ಜತೆ ಹುಬ್ಬಳ್ಳಿ ಉತ್ತರ ಎಸಿಪಿ ದಾವೂದಖಾನ್ ವೇದಿಕೆ ಹಂಚಿಕೊಂಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಪ್ರಕರಣದ ಗಂಭೀರತೆ ಅರಿತ ಎಸಿಪಿ ದಾವೂದ್ಖಾನ್ 153(ಎ) ಅಡಿಯಲ್ಲಿ ಖೈರಾತಿ ವಿರುದ್ಧ ಸೋಮವಾರ ಪ್ರಕರಣ ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ಸಹ ಪ್ರತ್ಯೇಕ ಪ್ರಕರಣ ದಾಖಲಿಸಿದೆ.
ಬಿಜೆಪಿ ಪ್ರತಿಭಟನೆ:
ಪಾಕಿಸ್ತಾನ ಪರ ವಿವಾದಾತ್ಮಕ ಹೇಳಿಕೆ ನೀಡಿರುವ ಮುತವಲ್ಲಿಯನ್ನು ಕೂಡಲೇ ಬಂಧಿಸಬೇಕು. ಈ ಹೇಳಿಕೆ ನೀಡುವಾಗ ವೇದಿಕೆಯಲ್ಲಿದ್ದ ಎಸಿಪಿ ದಾವೂದ್ಖಾನ್ ಅವರನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂಪರ ಸಂಘಟನೆಗಳ ಮುಖಂಡರು ಇಲ್ಲಿನ ಉಪನಗರ ಪೊಲೀಸ್ ಠಾಣೆಗೆ ಸೋಮವಾರ ಸಂಜೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಮುತವಲ್ಲಿ ಖೈರಾತಿ ಹೇಳಿಕೆ ರಾಷ್ಟ್ರ ವಿರೋಧಿಯಾಗಿದೆ. ಎಸಿಪಿ ದಾವೂದ್ಖಾನ್ ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರೂ ಸುಮ್ಮನೆ ಇದ್ದರು. ಅವರ ವಿರುದ್ಧವೂ ಗುರುವಾರದೊಳಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು'' ಎಂದು ಎಚ್ಚರಿಕೆ ನೀಡಿದರು.
ಮಾತಿನ ಚಕಮಕಿ:
ಠಾಣೆಗೆ ಮುತ್ತಿಗೆ ಹಾಕಲು ಬಂದಿದ್ದ ಕಾರ್ಯಕರ್ತರ ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಇದೇ ವೇಳೆ ಸಂಚಾರ ತಡೆ ನಡೆಸಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ತಡೆದರು. ಮುಖಂಡರಾದ ನಾಗೇಶ ಕಲಬುರ್ಗಿ ಮಹೇಶ ಟೆಂಗಿನಕಾಯಿ, ಜಯತೀರ್ಥ ಕಟ್ಟಿ, ರಂಗಾ ಬದ್ದಿ, ಉಮೇಶ ದುಶಿ, ವೆಂಕಟೇಶ ಮೇಸ್ತ್ರಿ, ದತ್ತಮೂರ್ತಿ ಕುಲಕರ್ಣಿ, ಸಂಜೀವ ಬಡಸ್ಕರ್, ಮಹೇಂದ್ರ ಕೌತಾಳ, ಸಂತೋಷ ಚೌಹಾಣ್, ಶಂಕ್ರಪ್ಪ ಛಬ್ಬಿ, ಶಶಿ ಬಿಜವಾಡ ಮುಂತಾದವರು ಈ ಹಾಜರಿದ್ದರು.
ಬಿಜೆಪಿಯಿಂದ ದೂರು
ಖೈರಾತಿ ವಿರುದ್ಧ 153ಎ ಕಲಂ ಅಡಿಯಲ್ಲಿ ನಗರದ ವೀರಾಪುರ ಓಣಿಯ ಶಶಿಧರ ಕಾಶಪ್ಪ ಬಿಜವಾಡ ಶಹರ ಠಾಣೆಗೆ ದೂರು ದಾಖಲಿಸಿದ್ದಾರೆ. ಇದರ ಜತೆಗೆ ಪರೋಕ್ಷವಾಗಿ ಪ್ರಚೊದನೆ ನೀಡಿದ ಎಸಿಪಿ ದಾವೂದ್ಖಾನ್, ಪೊಲೀಸ್ ಇನ್ಸ್ಸ್ಪೆಕ್ಟರ್ ಶಿವಾನಂದ ಚಲವಾದಿ ಹಾಗೂ ಇತರರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.
ಸೂಕ್ತ ಕಾನೂನು ಕ್ರಮ: ಆಯುಕ್ತ
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಡಿಸಿಪಿ ರೇಣುಕಾ ಸುಕುಮಾರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ. ಅವರು ವರದಿ ನೀಡಿದ ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ ಸುದ್ದಿಗಾರರಿಗೆ ತಿಳಿಸಿದ್ದಾರೆ.
''ಅವಶ್ಯಕತೆ ಬಿದ್ದರೆ ಮುತವಲ್ಲಿ ಅವರನ್ನು ಬಂಧಿಸಲಾಗುವುದು. ತನಿಖಾಧಿಕಾರಿ ಎಸಿಪಿ ದಾವೂದಖಾನ್ ಮತ್ತು ಮುತವಲ್ಲಿ ಬಗ್ಗೆ ಪ್ರತ್ಯೇಕ ವರದಿ ನೀಡಲಿದ್ದಾರೆ. ಈಗಾಗಲೇ ಮುತವಲ್ಲಿ ವಿರುದ್ಧ 153(ಎ) ಸೆಕ್ಷ ನ್ ಅಡಿ ಪ್ರಕರಣ ದಾಖಲಾಗಿದ್ದು, ಅಗತ್ಯ ಬಿದ್ದರೆ 153(ಬಿ) ಸೆಕ್ಷ ನ್ ಅಡಿ ದಾಖಲಿಸಲಾಗುವುದು'' ಎಂದರು.
''ಈಗಾಗಲೇ ಎಸಿಪಿ ಖಾನ್ ವಿರುದ್ಧ ಶಹರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಠಾಣಾಧಿಕಾರಿ ತನಿಖೆ ಕೈಗೊಂಡಿದ್ದಾರೆ. ವಿಶೇಷ ತಂಡ ರಚಿಸಿ ಸೂಕ್ತ ತನಿಖೆ ನಡೆಸುತ್ತೇವೆ. ಮೊದಲು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊ ಎಲ್ಲಿಂದ ಅಪ್ಲೋಡ್ ಆಗಿದೆ. ಯಾರು ಕಳುಹಿಸಿದ್ದಾರೆ ಎನ್ನುವ ಮಾಹಿತಿ ಸಂಗ್ರಹಿಸಬೇಕು. ದೇಶವಿರೋಧ ಹೇಳಿಕೆ ಸಂಬಂಧಿಸಿ ಸೂಕ್ತ ಸಾಕ್ಷ್ಯ ಸಂಗ್ರಹಿಸಿ ನ್ಯಾಯಾಲಯಕ್ಕೆ ಒಪ್ಪಿಸಬೇಕಾಗುತ್ತದೆ. ತಪ್ಪಿತಸ್ಥರು ಯಾರೇ ಇರಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ'' ಎಂದು ಸ್ಪಷ್ಟಪಡಿಸಿದರು.
ಖೈರಾತಿ ಕ್ಷಮೆಯಾಚನೆ
ಹುಬ್ಬಳ್ಳಿ: ತೀವ್ರ ವಿವಾದಕ್ಕೆ ಕಾರಣವಾಗಿರುವ 'ಗಣೇಶಪೇಟೆ ಪಾಕಿಸ್ತಾನದಂತಿದೆ' ಎಂಬ ಹೇಳಿಕೆಗೆ ಗಣೇಶಪೇಟೆ ಮುತವಲ್ಲಿ ಅಬ್ದುಲ ಹಮೀದ ಖೈರಾತಿ ಕ್ಷಮೆಯಾಚಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ''ಭಾರತ ದೇಶದ ಹುಬ್ಬಳ್ಳಿ ಶಹರದ ಗಣೇಶಪೇಟೆಯಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬವನ್ನು ಪಾಕಿಸ್ತಾನಗಿಂತ ಹೆಚ್ಚಿನ ಉತ್ಸಾಹದಿಂದ, ವಿಜೃಂಭಣೆಯಿಂದ ಆಚರಿಸುತ್ತಾರೆ. ಬಂದು ನೋಡಿ'' ಎಂದು ಹೇಳಲು ಮನಸ್ಸಿನಲ್ಲಿತ್ತು. ತಪ್ಪಾಗಿ ''ಪಾಕಿಸ್ತಾನ ನೋಡಬೇಕೆಂದರೆ ಅಲ್ಲಿಗೆ ಹೋಗುವ ಅವಶ್ಯಕತೆ ಇಲ್ಲ, ಈ ಗಣೇಶಪೇಟೆ ನನಗೆ ಪಾಕಿಸ್ತಾನದಂತೆಯೇ ಕಾಣುತ್ತಿದೆ'' ಎಂದು ಹೇಳಿದ್ದೇನೆ ಎಂದು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.
''ವಿಡಿಯೊ ನೋಡಿದ ಮೇಲೆಯೇ ನಾನು ತಪ್ಪಾಗಿ ಮಾತನಾಡಿದ್ದೇನೆ. ನನ್ನ ಹೇಳಿಕೆಯಿಂದ ದೇಶದ ಜನರಿಗೆ ಏನಾದರೂ ನೋವುಂಟಾಗಿದ್ದಲ್ಲಿ ಕ್ಷಮೆಯಾಚಿಸುತ್ತೇನೆ'' ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಗೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಸೋಮವಾರ ಸಂಜೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಡಿ. 2ರಂದು ನಗರದ ಗಣೇಶಪೇಟೆಯಲ್ಲಿ ನಡೆದ ಈದ್ ಮಿಲಾದ್ ಕಾರ್ಯಕ್ರಮದಲ್ಲಿ ಖೈರಾತಿ, ''ಪಾಕಿಸ್ತಾನ ನೋಡಬೇಕೆಂದರೆ ಅಲ್ಲಿಗೆ ಹೋಗುವ ಅವಶ್ಯಕತೆ ಇಲ್ಲ, ಈ ಗಣೇಶಪೇಟೆ ನನಗೆ ಪಾಕಿಸ್ತಾನದಂತೆಯೇ ಕಾಣುತ್ತಿದೆ'' ಎಂದು ಹೇಳಿಕೆ ನೀಡಿದ್ದರು.
ಖೈರಾತಿ ಜತೆ ಹುಬ್ಬಳ್ಳಿ ಉತ್ತರ ಎಸಿಪಿ ದಾವೂದಖಾನ್ ವೇದಿಕೆ ಹಂಚಿಕೊಂಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಪ್ರಕರಣದ ಗಂಭೀರತೆ ಅರಿತ ಎಸಿಪಿ ದಾವೂದ್ಖಾನ್ 153(ಎ) ಅಡಿಯಲ್ಲಿ ಖೈರಾತಿ ವಿರುದ್ಧ ಸೋಮವಾರ ಪ್ರಕರಣ ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ಸಹ ಪ್ರತ್ಯೇಕ ಪ್ರಕರಣ ದಾಖಲಿಸಿದೆ.
ಬಿಜೆಪಿ ಪ್ರತಿಭಟನೆ:
ಪಾಕಿಸ್ತಾನ ಪರ ವಿವಾದಾತ್ಮಕ ಹೇಳಿಕೆ ನೀಡಿರುವ ಮುತವಲ್ಲಿಯನ್ನು ಕೂಡಲೇ ಬಂಧಿಸಬೇಕು. ಈ ಹೇಳಿಕೆ ನೀಡುವಾಗ ವೇದಿಕೆಯಲ್ಲಿದ್ದ ಎಸಿಪಿ ದಾವೂದ್ಖಾನ್ ಅವರನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂಪರ ಸಂಘಟನೆಗಳ ಮುಖಂಡರು ಇಲ್ಲಿನ ಉಪನಗರ ಪೊಲೀಸ್ ಠಾಣೆಗೆ ಸೋಮವಾರ ಸಂಜೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಮುತವಲ್ಲಿ ಖೈರಾತಿ ಹೇಳಿಕೆ ರಾಷ್ಟ್ರ ವಿರೋಧಿಯಾಗಿದೆ. ಎಸಿಪಿ ದಾವೂದ್ಖಾನ್ ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರೂ ಸುಮ್ಮನೆ ಇದ್ದರು. ಅವರ ವಿರುದ್ಧವೂ ಗುರುವಾರದೊಳಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು'' ಎಂದು ಎಚ್ಚರಿಕೆ ನೀಡಿದರು.
ಮಾತಿನ ಚಕಮಕಿ:
ಠಾಣೆಗೆ ಮುತ್ತಿಗೆ ಹಾಕಲು ಬಂದಿದ್ದ ಕಾರ್ಯಕರ್ತರ ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಇದೇ ವೇಳೆ ಸಂಚಾರ ತಡೆ ನಡೆಸಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ತಡೆದರು. ಮುಖಂಡರಾದ ನಾಗೇಶ ಕಲಬುರ್ಗಿ ಮಹೇಶ ಟೆಂಗಿನಕಾಯಿ, ಜಯತೀರ್ಥ ಕಟ್ಟಿ, ರಂಗಾ ಬದ್ದಿ, ಉಮೇಶ ದುಶಿ, ವೆಂಕಟೇಶ ಮೇಸ್ತ್ರಿ, ದತ್ತಮೂರ್ತಿ ಕುಲಕರ್ಣಿ, ಸಂಜೀವ ಬಡಸ್ಕರ್, ಮಹೇಂದ್ರ ಕೌತಾಳ, ಸಂತೋಷ ಚೌಹಾಣ್, ಶಂಕ್ರಪ್ಪ ಛಬ್ಬಿ, ಶಶಿ ಬಿಜವಾಡ ಮುಂತಾದವರು ಈ ಹಾಜರಿದ್ದರು.
ಬಿಜೆಪಿಯಿಂದ ದೂರು
ಖೈರಾತಿ ವಿರುದ್ಧ 153ಎ ಕಲಂ ಅಡಿಯಲ್ಲಿ ನಗರದ ವೀರಾಪುರ ಓಣಿಯ ಶಶಿಧರ ಕಾಶಪ್ಪ ಬಿಜವಾಡ ಶಹರ ಠಾಣೆಗೆ ದೂರು ದಾಖಲಿಸಿದ್ದಾರೆ. ಇದರ ಜತೆಗೆ ಪರೋಕ್ಷವಾಗಿ ಪ್ರಚೊದನೆ ನೀಡಿದ ಎಸಿಪಿ ದಾವೂದ್ಖಾನ್, ಪೊಲೀಸ್ ಇನ್ಸ್ಸ್ಪೆಕ್ಟರ್ ಶಿವಾನಂದ ಚಲವಾದಿ ಹಾಗೂ ಇತರರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.
ಸೂಕ್ತ ಕಾನೂನು ಕ್ರಮ: ಆಯುಕ್ತ
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಡಿಸಿಪಿ ರೇಣುಕಾ ಸುಕುಮಾರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ. ಅವರು ವರದಿ ನೀಡಿದ ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ ಸುದ್ದಿಗಾರರಿಗೆ ತಿಳಿಸಿದ್ದಾರೆ.
''ಅವಶ್ಯಕತೆ ಬಿದ್ದರೆ ಮುತವಲ್ಲಿ ಅವರನ್ನು ಬಂಧಿಸಲಾಗುವುದು. ತನಿಖಾಧಿಕಾರಿ ಎಸಿಪಿ ದಾವೂದಖಾನ್ ಮತ್ತು ಮುತವಲ್ಲಿ ಬಗ್ಗೆ ಪ್ರತ್ಯೇಕ ವರದಿ ನೀಡಲಿದ್ದಾರೆ. ಈಗಾಗಲೇ ಮುತವಲ್ಲಿ ವಿರುದ್ಧ 153(ಎ) ಸೆಕ್ಷ ನ್ ಅಡಿ ಪ್ರಕರಣ ದಾಖಲಾಗಿದ್ದು, ಅಗತ್ಯ ಬಿದ್ದರೆ 153(ಬಿ) ಸೆಕ್ಷ ನ್ ಅಡಿ ದಾಖಲಿಸಲಾಗುವುದು'' ಎಂದರು.
''ಈಗಾಗಲೇ ಎಸಿಪಿ ಖಾನ್ ವಿರುದ್ಧ ಶಹರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಠಾಣಾಧಿಕಾರಿ ತನಿಖೆ ಕೈಗೊಂಡಿದ್ದಾರೆ. ವಿಶೇಷ ತಂಡ ರಚಿಸಿ ಸೂಕ್ತ ತನಿಖೆ ನಡೆಸುತ್ತೇವೆ. ಮೊದಲು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊ ಎಲ್ಲಿಂದ ಅಪ್ಲೋಡ್ ಆಗಿದೆ. ಯಾರು ಕಳುಹಿಸಿದ್ದಾರೆ ಎನ್ನುವ ಮಾಹಿತಿ ಸಂಗ್ರಹಿಸಬೇಕು. ದೇಶವಿರೋಧ ಹೇಳಿಕೆ ಸಂಬಂಧಿಸಿ ಸೂಕ್ತ ಸಾಕ್ಷ್ಯ ಸಂಗ್ರಹಿಸಿ ನ್ಯಾಯಾಲಯಕ್ಕೆ ಒಪ್ಪಿಸಬೇಕಾಗುತ್ತದೆ. ತಪ್ಪಿತಸ್ಥರು ಯಾರೇ ಇರಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ'' ಎಂದು ಸ್ಪಷ್ಟಪಡಿಸಿದರು.
ಖೈರಾತಿ ಕ್ಷಮೆಯಾಚನೆ
ಹುಬ್ಬಳ್ಳಿ: ತೀವ್ರ ವಿವಾದಕ್ಕೆ ಕಾರಣವಾಗಿರುವ 'ಗಣೇಶಪೇಟೆ ಪಾಕಿಸ್ತಾನದಂತಿದೆ' ಎಂಬ ಹೇಳಿಕೆಗೆ ಗಣೇಶಪೇಟೆ ಮುತವಲ್ಲಿ ಅಬ್ದುಲ ಹಮೀದ ಖೈರಾತಿ ಕ್ಷಮೆಯಾಚಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ''ಭಾರತ ದೇಶದ ಹುಬ್ಬಳ್ಳಿ ಶಹರದ ಗಣೇಶಪೇಟೆಯಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬವನ್ನು ಪಾಕಿಸ್ತಾನಗಿಂತ ಹೆಚ್ಚಿನ ಉತ್ಸಾಹದಿಂದ, ವಿಜೃಂಭಣೆಯಿಂದ ಆಚರಿಸುತ್ತಾರೆ. ಬಂದು ನೋಡಿ'' ಎಂದು ಹೇಳಲು ಮನಸ್ಸಿನಲ್ಲಿತ್ತು. ತಪ್ಪಾಗಿ ''ಪಾಕಿಸ್ತಾನ ನೋಡಬೇಕೆಂದರೆ ಅಲ್ಲಿಗೆ ಹೋಗುವ ಅವಶ್ಯಕತೆ ಇಲ್ಲ, ಈ ಗಣೇಶಪೇಟೆ ನನಗೆ ಪಾಕಿಸ್ತಾನದಂತೆಯೇ ಕಾಣುತ್ತಿದೆ'' ಎಂದು ಹೇಳಿದ್ದೇನೆ ಎಂದು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.
''ವಿಡಿಯೊ ನೋಡಿದ ಮೇಲೆಯೇ ನಾನು ತಪ್ಪಾಗಿ ಮಾತನಾಡಿದ್ದೇನೆ. ನನ್ನ ಹೇಳಿಕೆಯಿಂದ ದೇಶದ ಜನರಿಗೆ ಏನಾದರೂ ನೋವುಂಟಾಗಿದ್ದಲ್ಲಿ ಕ್ಷಮೆಯಾಚಿಸುತ್ತೇನೆ'' ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಗೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಸೋಮವಾರ ಸಂಜೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.