ಆ್ಯಪ್ನಗರ

ಒತ್ತುವರಿ ತೆರವಿಗೆ ಸಹಕರಿಸಿ: ಜೋಶಿ

ಹುಬ್ಬಳ್ಳಿ : ಗೋಕುಲ ರಸ್ತೆ ರಾಮಲಿಂಗೇಶ್ವರ ನಗರದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯಡಿ ರಸ್ತೆ ಸೇರಿದಂತೆ ಇತರ ಮೂಲಸೌಲಭ್ಯಗಳ ಕಾಮಗಾರಿಗೆ ಸಂಸದ ಪ್ರಹ್ಲಾದ ಜೋಶಿ ಬುಧವಾರ ಭೂಮಿಪೂಜೆ ನೆರವೇರಿಸಿದರು.

Vijaya Karnataka 30 May 2019, 5:00 am
ಹುಬ್ಬಳ್ಳಿ : ಗೋಕುಲ ರಸ್ತೆ ರಾಮಲಿಂಗೇಶ್ವರ ನಗರದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯಡಿ ರಸ್ತೆ ಸೇರಿದಂತೆ ಇತರ ಮೂಲಸೌಲಭ್ಯಗಳ ಕಾಮಗಾರಿಗೆ ಸಂಸದ ಪ್ರಹ್ಲಾದ ಜೋಶಿ ಬುಧವಾರ ಭೂಮಿಪೂಜೆ ನೆರವೇರಿಸಿದರು.
Vijaya Karnataka Web DRW-29MANJU3A
ಹುಬ್ಬಳ್ಳಿ ಗೋಕುಲ ರಸ್ತೆ ರಾಮಲಿಂಗೇಶ್ವರ ನಗರದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯಡಿ ರಸ್ತೆ ಸೇರಿದಂತೆ ಇತರ ಮೂಲಸೌಲಭ್ಯಗಳ ಕಾಮಗಾರಿಗೆ ಸಂಸದ ಪ್ರಹ್ಲಾದ ಜೋಶಿ ಬುಧವಾರ ಭೂಮಿಪೂಜೆ ನೆರವೇರಿಸಿದರು.


ಇದಕ್ಕೂ ಮುನ್ನ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಜೋಶಿ, 28 ಕೋಟಿ ರೂ. ವೆಚ್ಚದಲ್ಲಿ ಈ ಭಾಗದಲ್ಲಿ ರಸ್ತೆ, ಚರಂಡಿ, ಸ್ಮಾರ್ಟ್‌ ಪುಟ್‌ಪಾತ್‌ ಸೇರಿದಂತೆ ವಿವಿಧ ಮೂಲಸೌಲಭ್ಯಗಳ ಅಭಿವೃದ್ಧಿ ಕೆಲಸಗಳು ನಡೆಯಲಿವೆ. ರಸ್ತೆ ಕಾಮಗಾರಿ ವೇಳೆ ಒತ್ತುವರಿ ತೆರವಿಗೆ ಸಾರ್ವಜನಿಕರು ಸಹಕರಿಸಬೇಕು. ಬಹಳಷ್ಟು ಕಡೆಗಳಲ್ಲಿ ಒತ್ತುವರಿ ಅಭಿವೃದ್ಧಿಗೆ ಅಡಚಣೆಯಾಗುತ್ತಿದೆ ಎಂದರು.

ಸ್ಮಾರ್ಟ್‌ ರಸ್ತೆ ನಿರ್ಮಿಸಿದ ನಂತರವಾದರೂ ಜನರು ರಸ್ತೆ ಬದಿ ಶೌಚ ಮಾಡುವುದನ್ನು ನಿಲ್ಲಿಸಬೇಕು. ಬಯಲು ಶೌಚದಿಂದಲೇ ಸಾಕಷ್ಟು ಕಾಯಿಲೆಗಳು ಉಂಟಾಗುವ ಸಾಧ್ಯತೆ ಇದೆ. ಇದನ್ನು ನಿಯಂತ್ರಿಸಿದರೆ ಪ್ರತಿಯೊಬ್ಬರು ಆರೋಗ್ಯವಂತರಾಗಿ ಉತ್ತಮ ಜೀವನ ನಡೆಸಬಹುದು ಎಂದು ಸಲಹೆ ನೀಡಿದರು.

ಕೇಂದ್ರ ಸರಕಾರ ಕಟ್ಟಡ ಕಾರ್ಮಿಕರು ಸೇರಿದಂತೆ ಎಲ್ಲಾ ವರ್ಗದ ಕಾರ್ಮಿಕರಿಗೆ 60 ವರ್ಷದ ನಂತರ ಪಿಂಚಣಿ ಯೋಜನೆ ಜಾರಿಗೊಳಿಸಿದ್ದು, ಇದರ ಸದ್ಬಳಕೆ ಮಾಡಿಕೊಳ್ಳಬೇಕು. ಕೇಂದ್ರದಿಂದ ಇನ್ನೂ ಹಲವು ಯೋಜನೆಗಳಿದ್ದು, ಪ್ರತಿಯೊಬ್ಬರೂ ಲಾಭ ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಶಾಸಕ ಅರವಿಂದ ಬೆಲ್ಲದ, ಮಾಜಿ ಕಾರ್ಪೋರೇಟರ್‌ ಸಂತೋಷ ಹಿರೇಕೆರೂರ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ