ಆ್ಯಪ್ನಗರ

ಎತ್ತುಗಳ ರಕ್ಷಿಸಿ ಮಾಲೀಕರಿಗೆ ಹಸ್ತಾಂತರಿಸಿದ ಪೊಲೀಸರು

ಹುಬ್ಬಳ್ಳಿ: ಗೋವುಗಳ ಸಾಗಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆ ದಾಳಿ ನಡೆಸಿದ ಪೊಲೀಸರು ಎತ್ತುಗಳನ್ನು ರಕ್ಷಿಸಿ ಮಾಲೀಕರಿಗೆ ಹಸ್ತಾಂತರಿಸಿದ ಘಟನೆ ಇಲ್ಲಿಯ ಹು-ಧಾ ಬೈಪಾಸ್‌ನಲ್ಲಿ ಶುಕ್ರವಾರ ನಡೆದಿದೆ.

Vijaya Karnataka 21 Jul 2019, 5:00 am
ಹುಬ್ಬಳ್ಳಿ: ಗೋವುಗಳ ಸಾಗಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆ ದಾಳಿ ನಡೆಸಿದ ಪೊಲೀಸರು ಎತ್ತುಗಳನ್ನು ರಕ್ಷಿಸಿ ಮಾಲೀಕರಿಗೆ ಹಸ್ತಾಂತರಿಸಿದ ಘಟನೆ ಇಲ್ಲಿಯ ಹು-ಧಾ ಬೈಪಾಸ್‌ನಲ್ಲಿ ಶುಕ್ರವಾರ ನಡೆದಿದೆ.
Vijaya Karnataka Web cops protected by oxen and handed over to owners
ಎತ್ತುಗಳ ರಕ್ಷಿಸಿ ಮಾಲೀಕರಿಗೆ ಹಸ್ತಾಂತರಿಸಿದ ಪೊಲೀಸರು


ತಾರಿಹಾಳ ಗ್ರಾಮದ ರೈತ ಉಳವಪ್ಪ ಮುರಗೋಡ ಎಂಬುವರಿಗೆ ಸೇರಿದ ಎರಡು ಎತ್ತುಗಳನ್ನು ಗೂಡ್ಸ್‌ ವಾಹನದಲ್ಲಿ ಸಾಗಿಸಲಾಗುತ್ತಿತ್ತು. ಎತ್ತುಗಳನ್ನು ರೈತರು ತಾರಿಹಾಳ ಗ್ರಾಮದಿಂದ ರೇವಡಿಹಾಳ ಗ್ರಾಮಕ್ಕೆ ಸಾಗಿಸುತ್ತಿದ್ದರು. ಈ ವೇಳೆ ಗೋವುಗಳ ಸಾಗಾಟ ಮಾಡಲಾಗುತ್ತಿದೆ ಎಂದು ಹಿಂದೂ ಸಂಘಟನೆಯೊಂದರ ಸದಸ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಆಧರಿಸಿ ದಾಳಿ ನಡೆಸಿದ ಗೋಕುಲ್‌ರೋಡ್‌ ಠಾಣೆ ಪಿಐ ಡಿ.ಪಿ. ನಿಂಬಾಳ್ಕರ ನೇತೃತ್ವದ ತಂಡ ವಾಹನ ತಡೆದು ವಿಚಾರಿಸಿದಾಗ ರೈತರಿಗೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಹೀಗಿದ್ದಾಗ್ಯೂ ತಾರಿಹಾಳ ಗ್ರಾಮದ ರೈತ ಉಳವಪ್ಪ ಅವರನ್ನು ಸ್ಥಳಕ್ಕೆ ಕರೆಯಿಸಿ ಪಿಐ ನಿಂಬಾಳ್ಕರ, ಈ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಿದ್ದಾರೆ. ನಂತರ ಎರಡು ಎತ್ತುಗಳನ್ನು ಮರಳಿ ಉಳವಪ್ಪ ಅವರಿಗೆ ವಾಪಸ್‌ ನೀಡಿ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ