ಆ್ಯಪ್ನಗರ

ಕೊರೊನಾ ಎಫೆಕ್ಟ್: ಬ್ಯಾಂಕ್ ಗ್ರಾಹಕರನ್ನು ಹೊರಗೆ ನಿಲ್ಲಿಸಿ ವ್ಯವಹಾರ!

ಹುಬ್ಬಳ್ಳಿಯಲ್ಲಿ ಎಸ್‌ಬಿಐ ಶಾಖೆಯಲ್ಲಿ ಗ್ರಾಹಕರನ್ನು ಹೊರಗಡೆ ನಿಲ್ಲಿಸಿ ವ್ಯವಹಾರ ನಡೆಸಲಾಗುತ್ತಿದೆ. ಕೊರೊನಾವೈರಸ್‌ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಬ್ಯಾಂಕ್ ಒಳಗಡೆ ಹೆಚ್ಚು ಜನ ಇರಬಾರದು ಎಂಬ ಕಾರಣಕ್ಕಾಗಿ ಬ್ಯಾಂಕ್ ಆಡಳಿತ ಮಂಡಳಿಯು ನಿರ್ದೇಶನ ನೀಡಿದೆ.

Vijaya Karnataka Web 19 Mar 2020, 1:35 pm
ಹುಬ್ಬಳ್ಳಿ: ನಗರದ ಎಸ್‌ಬಿಐ ಶಾಖೆಯಲ್ಲಿ ಗ್ರಾಹಕರನ್ನು ಹೊರಗಡೆ ನಿಲ್ಲಿಸಿ ವ್ಯವಹಾರ ನಡೆಸಲಾಗುತ್ತಿದೆ. ಕೊರೊನಾವೈರಸ್‌ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಬ್ಯಾಂಕ್ ಒಳಗಡೆ ಹೆಚ್ಚು ಜನ ಇರಬಾರದು ಎಂಬ ಕಾರಣಕ್ಕಾಗಿ ಬ್ಯಾಂಕ್ ಆಡಳಿತ ಮಂಡಳಿಯು ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಬ್ಯಾಂಕ್ ಅಧಿಕಾರಿಗಳು ಸಮರ್ಥಿಸಿಕೊಳ್ಳುತ್ತಿದ್ದಾರೆ.
Vijaya Karnataka Web hubli sbi


ಸರದಿ ಪ್ರಕಾರ ಒಬ್ಬೊಬ್ಬರನ್ನೇ ಒಳಗೆ ಬಿಡಲಾಗುತ್ತಿದೆ ಎಂದು ಗ್ರಾಹಕ ಮಂಜುನಾಥ ಹೊಂಬಳ ತಿಳಿಸಿದ್ದಾರೆ. ಶಾಖೆಯ ಹೊರಗೆ ನಿಲ್ಲಿಸಿ ವ್ಯವಹಾರ ನಡೆಸುತ್ತಿರುವುದರಿಂದ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ವೈರಸ್‌ ಹರಡುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ವಿಮಾನ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ವಿದೇಶಿ ಪ್ರಯಾಣಿಕರನ್ನು ಅತ್ಯಂತ ಜಾಗರೂಕತೆಯಿಂದ ಸ್ಕ್ರೀನಿಂಗ್‌ ನಡೆಸಲಾಗುತ್ತಿದೆ. ರೈಲ್ವೆ ನಿಲ್ದಾಣಗಳಲ್ಲಿ ಫ್ಲಾಟ್‌ಫಾರಂ ಟಿಕೆಟ್‌ ಬೆಲೆಯನ್ನು ಕೂಡ ಹೆಚ್ಚಿಸಲಾಗಿದೆ.

168 ರೈಲುಗಳ ಓಡಾಟ ನಿಲ್ಲಿಸಿದ ಕೊರೊನಾ: ಶೇ. 100 ರಷ್ಟು ಹಣ ವಾಪಸ್!

ಸೋಂಕಿತರನ್ನು ಗುರುತಿಸಲು ಮತ್ತು ಅವರ ಮೇಲೆ ನಿಗಾ ಇರಿಸಲು ಸೋಂಕಿತರ ಕೈಗೆ ಸ್ಯ್ಟಾಂಪ್ ಹಾಕಲು ಸರ್ಕಾರ ನಿರ್ಧರಿಸಿದೆ. ಇದಲ್ಲದೆ ವಿದೇಶಗಳಿಂದ ರಾಜ್ಯಕ್ಕೆ ಬರುವ ಎಲ್ಲ ಪ್ರಯಾಣಿಕರನ್ನು ಪರೀಕ್ಷಿಸಿ ಪ್ರತ್ಯೇಕ 14 ದಿನ ಇಡಲು ತೀರ್ಮಾನಿಸಲಾಗಿದ್ದು, ಹಕ್ಕಿಜ್ವರ ಮತ್ತು ಮಂಗನ ಕಾಯಿಲೆಗಳ ತಡೆಗೂ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಲು ನಿರ್ಧಾರ ಕೈಗೊಳ್ಳಲಾಗಿದೆ.

ಹೆಚ್ಚಿದ ಕೊರೊನಾ ಭೀತಿ: ವಿದೇಶಿ ಪ್ರಯಾಣಿಕರಿಗೆ ಸ್ಕ್ರೀನಿಂಗ್‌, ಸ್ಟಾಂಪಿಂಗ್!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ