ಆ್ಯಪ್ನಗರ

ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕರ ವಿರುದ್ಧ ಭ್ರಷ್ಟಾಚಾರ ಆರೋಪ

ಧಾರವಾಡ : ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕರ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಿವೆ ಹೀಗಾಗಿ ಇಲಾಖೆಯ ನಿರ್ದೇಶಕ ತಳವಾರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಗುರುರಾಜ ಹುಣಸಿಮರದ ಆಗ್ರಹಿಸಿದ್ದಾರೆ.

Vijaya Karnataka 3 Jun 2020, 5:00 am
ಧಾರವಾಡ : ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕರ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಿವೆ ಹೀಗಾಗಿ ಇಲಾಖೆಯ ನಿರ್ದೇಶಕ ತಳವಾರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಗುರುರಾಜ ಹುಣಸಿಮರದ ಆಗ್ರಹಿಸಿದ್ದಾರೆ.
Vijaya Karnataka Web corruption charges against tec director
ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕರ ವಿರುದ್ಧ ಭ್ರಷ್ಟಾಚಾರ ಆರೋಪ


ನಗರದಲ್ಲಿಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಹಲವು ವರ್ಷಗಳಿಂದ ಕಾಲೇಜುಗಳ ಆಡಳಿತ ಮಂಡಳಿ ಜತೆ ಶಾಮೀಲಾಗಿ ಅನೇಕ ಅವ್ಯವಹಾರ ಮಾಡಿರುವ ನಿರ್ದೇಶಕರಿಗೆ ರಾಜಕೀಯ ವ್ಯಕ್ತಿಗಳ ಬೆಂಬಲ ಕೂಡ ಇರುವ ಸಂಶಯವಿದೆ. ಈ ಹಿನ್ನೆಲೆಯಲ್ಲಿಕಳೆದ 10 ವರ್ಷಗಳಿಂದ ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಹುದ್ದೆಯಲ್ಲಿಕರ್ತವ್ಯ ನಿರ್ವಹಿಸುತ್ತಿರುವ ಅವರನ್ನು ಅಲ್ಲಿಂದ ಬೇರೆ ಇಲಾಖೆಗೆ ನೇಮಕ ಮಾಡಿ, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮ ಜರುಗಿಸಬೇಕು ಎಂದರು.

ಈ ಕುರಿತು ಸರಕಾರದ ಉನ್ನತ ಶಿಕ್ಷಣ ಇಲಾಖೆಯ ವತಿಯಿಂದ ಜಿ.ವಿ. ಕೃಷ್ಣರಾವ್‌ ನೇತೃತ್ವದಲ್ಲಿನಡೆಸಿದ ತನಿಖಾ ವರದಿಯಲ್ಲಿಯೂ ನಿರ್ದೇಶಕ ತಳವಾರ ಮಾಡಿದ ಅಕ್ರಮಗಳು ದಾಖಲಾಗಿವೆ. ಜತೆಗೆ ಲೋಕಾಯುಕ್ತ ತನಿಖಾ ವರದಿಯಲ್ಲಿಯೂ ಭ್ರಷ್ಟಾಚಾರ ಎಸಗಿರುವುದು ಸಾಬೀತಾಗಿದೆ. ಹಿಂದಿನ ಸಿದ್ಧರಾಮಯ್ಯ ನೇತೃತ್ವದ ಸರಕಾರದ ಅವಧಿಯಲ್ಲಿತಳವಾರ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು, ಡಿಪಿಎಆರ್‌ನಿಂದ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಆದೇಶಿಸಲಾಗಿತ್ತು. ಆದರೆ, ಇವರೆಗೂ ಅವರ ಮೇಲೆ ಯಾವುದೇ ಕ್ರಮ ಜರುಗಿಸಿಲ್ಲ. ಸರಕಾರ ಈ ಬಗ್ಗೆ ಗಮನಹರಿಸದೇ ನಿರ್ಲಕ್ಷತ್ರ್ಯ ತೋರಿದರೆ, ಕಾನೂನು ಹೋರಾಟ ಮಾಡಲಾಗುವುದು. ಸರಕಾರ ಜೊತೆಗೆ ತಾಂತ್ರಿಕ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯದಲ್ಲಿವಿಲೀನಗೊಳಿಸಿ, ನಿರ್ದೇಶಕ ಸ್ಥಾನಕ್ಕೆ ಐಎಎಸ್‌ ಅಧಿಕಾರಿಗಳನ್ನು ನೇಮಿಸಬೇಕು ಎಂದು ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ