ಆ್ಯಪ್ನಗರ

ಹಿಂದೆ ಇದ್ದ ಸರಕಾರಗಳು ಸಹ ಫೋನ್ ಕದ್ದಾಲಿಕೆ ಮಾಡಿವೆ, ಇದೇನು ಹೊಸದಲ್ಲ: ಡಿ ಸಿ ತಮ್ಮಣ್ಣ

ಫೋನ್ ಕದ್ದಾಲಿಕೆ ಆಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಇಲ್ಲ ಎಂದು ಮಾಜಿ ಸಚಿವ ಡಿ ಸಿ ತಮ್ಮಣ್ಣ ಹೇಳಿದರು.

Vijaya Karnataka Web 16 Aug 2019, 12:10 pm
ಹಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಧಿಕಾರದಲ್ಲಿ ಫೋನ್ ಕದ್ದಾಲಿಕೆ ಆಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಇಲ್ಲ. ಈ ಹಿಂದೆ ಇದ್ದ ಸರಕಾರಗಳು ಸಹ ಫೋನ್ ಕದ್ದಾಲಿಕೆ ಮಾಡಿವೆ. ಇದೇನು ಹೊಸದಲ್ಲ ಎಂದು ಮಾಜಿ ಸಚಿವ ಡಿ ಸಿ ತಮ್ಮಣ್ಣ ಹೇಳಿದರು.
Vijaya Karnataka Web dct


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕೇಂದ್ರ ಸರಕಾರವೂ ಫೋನ್ ಕದ್ದಾಲಿಕೆ ಮಾಡಿದೆ. ಫೋನ್ ಕದ್ದಾಲಿಕೆ ಆರೋಪದ ಬಗ್ಗೆ ತನಿಖೆ ಮಾಡಲಿ ಎಂದರು.

ರಾಜ್ಯದಲ್ಲಿ ಉಂಟಾಗಿರುವ ಭೀಕರ ಪ್ರವಾಹ ವಿಷಯವನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಸಂತ್ರಸ್ತರ ನೆರವಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ 5 ಸಾವಿರ ಕೋಟಿ ರೂಪಾಯಿ ನೀಡುವಂತೆ ಕೇಂದ್ರ ಸರಕಾರದ ಬಳಿ ಮನವಿ ಮಾಡಿದ್ದಾರೆ. ಆದರೆ, ಐದು-ಹತ್ತು ಸಾವಿರ ಕೋಟಿ ಯಾವುದಕ್ಕೂ ಸಾಲುವುದಿಲ್ಲ. ಹೆಚ್ಚಿನ ಪರಿಹಾರ ಒದಗಿಸಬೇಕು. ಕೇಂದ್ರ ಸರಕಾರ ಕೂಡಲೇ 10 ಸಾವಿರ ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದರು.

ಪ್ರವಾಹದಿಂದ ಉತ್ತರ ಕರ್ನಾಟಕ ಭಾಗದ ಜನ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ನಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದೇವೆ. ನೆರೆ ಸಂತ್ರಸ್ತರಿಗೆ ಆರು ಲಾರಿ ಆಹಾರ ಸಾಮಾಗ್ರಿ ಒದಗಿಸಿದ್ದೇವೆ. 50 ಲಕ್ಷ ರೂಪಾಯಿ ವೆಚ್ಚದಲ್ಲಿ ಆಹಾರ ಪದಾರ್ಥ ಹಾಗೂ ಸಾಮಾಗ್ರಿಗಳ ವಿತರಣೆ ಮಾಡಲಾಗುತ್ತಿದೆ. ಡಿ ಸಿ ತಮ್ಮಣ್ಣ ಸೇವಾ ಪ್ರತಿಷ್ಠಾನ ಫೌ೦ಡಶೇನ್ ವತಿಯಿಂದ ಈ ಸಹಾಯ ಮಾಡಲಾಗುತ್ತಿದೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ