ಆ್ಯಪ್ನಗರ

ಕಿಮ್ಸ್‌ನಲ್ಲಿ ಪಾಪು ಆರೋಗ್ಯ ವಿಚಾರಿಸಿದ ಡಿಸಿ

ಹುಬ್ಬಳ್ಳಿ: ಎರಡು ವಾರಗಳಿಂದ ಅನಾರೋಗ್ಯದ ಹಿನ್ನೆಲೆಯಲ್ಲಿಕಿಮ್ಸ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರನ್ನು ಜಿಲ್ಲಾಧಿಕಾರಿ ಎಂ.ದೀಪಾ ಸೋಮವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

Vijaya Karnataka 26 Feb 2020, 5:00 am
ಹುಬ್ಬಳ್ಳಿ: ಎರಡು ವಾರಗಳಿಂದ ಅನಾರೋಗ್ಯದ ಹಿನ್ನೆಲೆಯಲ್ಲಿಕಿಮ್ಸ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರನ್ನು ಜಿಲ್ಲಾಧಿಕಾರಿ ಎಂ.ದೀಪಾ ಸೋಮವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
Vijaya Karnataka Web 25 KALMESH 5045355
ಕಿಮ್ಸ್‌ನಲ್ಲಿಚಿಕಿತ್ಸೆ ಪಡೆಯುತ್ತಿರುವ ಡಾ.ಪಾಟೀಲ ಪುಟ್ಟಪ್ಪ ಅವರ ಆರೋಗ್ಯವನ್ನು ಡಿಸಿ ಎಂ. ದೀಪಾ ಸೋಮವಾರ ವಿಚಾರಿಸಿದರು.


ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿಕಡಿಮೆ ರಕ್ತದ ಒತ್ತಡ, ಕಿಡ್ನಿ , ಶ್ವಾಸಕೋಶದ ತೊಂದರೆ ಹಾಗೂ ರಕ್ತ ಹೀನತೆಯಿಂದ ಬಳಲುತ್ತಿದ್ದ ಪಾಟೀಲ್‌ ಪುಟ್ಟಪ್ಪ ಅವರ ಆರೋಗ್ಯದಲ್ಲಿಚೇತರಿಕೆ ಕಂಡು ಬಂದಿದೆ. ಸದ್ಯ ಆರೋಗ್ಯ ಸ್ಥಿರವಾಗಿದ್ದು, ಸೂಕ್ತ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿಹರಿದಾಡುತ್ತಿರುವ ಸುಳ್ಳು ಸುದ್ದಿಗಳಿಗೆ ಕಿವಿ ಕೊಡಬೇಡಿ. ಪಾಪು ಅವರ ಆರೋಗ್ಯ ದಿನದಿಂದ ದಿನಕ್ಕೆ ಸುಧಾರಿಸುತ್ತಿದೆ. ಫೆ.26ರಂದು ನರರೋಗ ತಜ್ಞರು ಸಣ್ಣ ಶಸ್ತ್ರ ಚಿಕಿತ್ಸೆ ನಡೆಸಲಿದ್ದಾರೆ ಎಂದು ಕಿಮ್ಸ್‌ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ ತಿಳಿಸಿದರು.

ಈ ಸಂದರ್ಭದಲ್ಲಿವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಬಿಆರ್‌ಟಿಎಸ್‌ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್‌, ಜಿಪಂ ಸಿಇಒ ಡಾ.ಬಿ.ಸಿ.ಸತೀಶ್‌, ತಹಸೀಲ್ದಾರ ಶಶಿಧರ ಮಾಡ್ಯಾಳ, ಗ್ರಾಮೀಣ ತಹಸೀಲ್ದಾರ ಪ್ರಕಾಶ್‌ ನಾಸಿ ಸೇರಿದಂತೆ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ