ಆ್ಯಪ್ನಗರ

ಯೋಜನೆ ಅನುಷ್ಠಾನಕ್ಕೆ ಡಿಸಿ ಸೂಚನೆ

ಧಾರವಾಡ: ಸರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಕಲ್ಯಾಣಕ್ಕಾಗಿ ವಿಶೇಷ ಘಟಕ ಯೋಜನೆ (ಎಸ್‌ಸಿಪಿ) ಮತ್ತು ಗಿರಿಜನ ಉಪಯೋಜನೆ (ಟಿಎಸ್‌ಪಿ) ಕಾರ್ಯಕ್ರಮ ಜಾರಿಗೊಳಿಸಿದೆ. ಎಲ್ಲಾಇಲಾಖೆಗಳು ತಮ್ಮ ಕ್ರಿಯಾ ಯೋಜನೆಗಳಡಿ ಹಾಕಿಕೊಂಡಿರುವ ಕಾರ್ಯಕ್ರಮಗಳ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ದೀಪಾ ಎಂ. ಸೂಚಿಸಿದರು.

Vijaya Karnataka 29 Dec 2019, 5:00 am
ಧಾರವಾಡ: ಸರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಕಲ್ಯಾಣಕ್ಕಾಗಿ ವಿಶೇಷ ಘಟಕ ಯೋಜನೆ (ಎಸ್‌ಸಿಪಿ) ಮತ್ತು ಗಿರಿಜನ ಉಪಯೋಜನೆ (ಟಿಎಸ್‌ಪಿ) ಕಾರ್ಯಕ್ರಮ ಜಾರಿಗೊಳಿಸಿದೆ. ಎಲ್ಲಾಇಲಾಖೆಗಳು ತಮ್ಮ ಕ್ರಿಯಾ ಯೋಜನೆಗಳಡಿ ಹಾಕಿಕೊಂಡಿರುವ ಕಾರ್ಯಕ್ರಮಗಳ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ದೀಪಾ ಎಂ. ಸೂಚಿಸಿದರು.
Vijaya Karnataka Web dc notification of plan implementation
ಯೋಜನೆ ಅನುಷ್ಠಾನಕ್ಕೆ ಡಿಸಿ ಸೂಚನೆ


ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಶುಕ್ರವಾರ ನಡೆದ ನವೆಂಬರ್‌ ಅಂತ್ಯದವರೆಗೆ ವಿವಿಧ ಇಲಾಖೆಗಳ ಎಸ್‌ಸಿಪಿ ಹಾಗೂ ಟಿಎಸ್‌ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಧಾನಮಂತ್ರಿ ಗ್ರಾಮಸಡಕ್‌ ಯೋಜನೆ , ಕೆಎಂಎಫ್‌, ಕರ್ನಾಟಕ ನೀರಾವರಿ ನಿಗಮ, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ, ಕೃಷಿ ವಿಶ್ವವಿದ್ಯಾಲಯ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ವಿಭಾಗ ಮತ್ತಿತರ ಇಲಾಖೆಗಳು ಕಳೆದ ಸಾಲಿನ ಪ್ರಗತಿ ಕ್ರೋಢೀಕರಿಸಿ ಪ್ರಸಕ್ತ ಸಾಲಿನಲ್ಲಿಶೇ. ನೂರರಷ್ಟು ಸಾಧನೆ ದಾಖಲಿಸಿರುವಿರಿ. ಇದು ಸರಿಯಾದ ಕ್ರಮವಲ್ಲಪ್ರಸಕ್ತ ಸಾಲಿನ ಗುರಿ ಮತ್ತು ಸಾಧನೆ ವಿವರ ಪ್ರತ್ಯೇಕ ಒದಗಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 22.99 ಕೋಟಿ ರೂ.ಆರ್ಥಿಕ ಗುರಿಯಲ್ಲಿಈವರೆಗೆ ಕೇವಲ 2.63 ಕೋಟಿ ರೂ.ಖರ್ಚು ಮಾಡಿ ಶೇ.23 ರಷ್ಟು ಮಾತ್ರ ಸಾಧನೆ ಮಾಡಲಾಗಿದೆ. ಭೌತಿಕ ಗುರಿ ತಲುಪಲು ಸಾಧ್ಯವಾಗದಿದ್ದರೆ ಕೂಡಲೇ ಸರಕಾರಕ್ಕೆ ಪತ್ರ ಬರೆದು ಬಜೆಟ್‌ ಪೂರ್ವದಲ್ಲಿಯೇ ಮಾಹಿತಿ ನೀಡಬೇಕೆಂದು ಸೂಚಿಸಿದರು.

ಹೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗದಲ್ಲಿಲಭ್ಯವಿರುವ ಅನುದಾನವನ್ನು ಹುಬ್ಬಳ್ಳಿ ಜಗದೀಶ ನಗರದಲ್ಲಿರುವ ಸಮಸ್ಯೆಗಳ ನಿರ್ಮೂಲನೆಗೆ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆಯು ಪರಿಶಿಷ್ಟರು ಸೇರಿದಂತೆ ಒಟ್ಟು ಸಮಾಜದ ಅಭಿವೃದ್ಧಿ ಕೈಗೊಳ್ಳಲು ವರದಾನವಾಗಿದೆ. ಅಧಿಕಾರಿಗಳು ಮನಃಪೂರ್ವಕವಾಗಿ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಡಿಸಿ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್‌.ಆರ್‌.ಪುರುಷೋತ್ತಮ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಅಧಿಕಾರಿ ಅಜ್ಜಪ್ಪ ಸೊಗಲದ, ಲೋಕೋಪಯೋಗಿ ಕಾರ್ಯನಿರ್ವಾಹಕ ಎಂಜಿನಿಯರ್‌ ವಿರುಪಾಕ್ಷಪ್ಪ ಯಮಕನಮರಡಿ, ಕೈಗಾರಿಕಾ ಉಪ ನಿರ್ದೇಶಕ ಮೋಹನ ಭರಮಕ್ಕನವರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಜಾನನ ಮನ್ನಿಕೇರಿ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿಭಾಗವಹಿಸಿ ಪ್ರಗತಿವಿವರ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ