ಆ್ಯಪ್ನಗರ

ರಾಜ್ಯ ಮಟ್ಟದ ಒಕ್ಕೂಟ ರಚನೆಗೆ ತೀರ್ಮಾನ

ಧಾರವಾಡ :ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಅಧ್ಯಕ್ಷ , ಉಪಾಧ್ಯಕ್ಷ ಮತ್ತು ಸದಸ್ಯರ ರಾಜ್ಯ ಮಟ್ಟದ ಒಕ್ಕೂಟ ರಚಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಧಾರವಾಡ ಜಿಪಂ ಅಧ್ಯಕ್ಷೆ ಚೈತ್ರಾ ಶಿರೂರ ಅವರ ಅಧ್ಯಕ್ಷ ತೆಯಲ್ಲಿ ಸಭೆ ನಡೆಸಿದ ಚಾಮರಾಜನಗರ, ಉಡುಪಿ, ಉತ್ತರ ಕನ್ನಡ ಮತ್ತು ಧಾರವಾಡ ಜಿಲ್ಲಾ ಪಂಚಾಯಿತಿ ಜನಪತ್ರಿಗಳು ಈ ಕುರಿತು ನಿರ್ಧಾರ ಪ್ರಕಟಿಸಿದರು.

Vijaya Karnataka 14 Jul 2018, 5:00 am
ಧಾರವಾಡ :ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಅಧ್ಯಕ್ಷ , ಉಪಾಧ್ಯಕ್ಷ ಮತ್ತು ಸದಸ್ಯರ ರಾಜ್ಯ ಮಟ್ಟದ ಒಕ್ಕೂಟ ರಚಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಧಾರವಾಡ ಜಿಪಂ ಅಧ್ಯಕ್ಷೆ ಚೈತ್ರಾ ಶಿರೂರ ಅವರ ಅಧ್ಯಕ್ಷ ತೆಯಲ್ಲಿ ಸಭೆ ನಡೆಸಿದ ಚಾಮರಾಜನಗರ, ಉಡುಪಿ, ಉತ್ತರ ಕನ್ನಡ ಮತ್ತು ಧಾರವಾಡ ಜಿಲ್ಲಾ ಪಂಚಾಯಿತಿ ಜನಪತ್ರಿಗಳು ಈ ಕುರಿತು ನಿರ್ಧಾರ ಪ್ರಕಟಿಸಿದರು.
Vijaya Karnataka Web decision to form state level union
ರಾಜ್ಯ ಮಟ್ಟದ ಒಕ್ಕೂಟ ರಚನೆಗೆ ತೀರ್ಮಾನ


ಜಿಲ್ಲಾ ಪಂಚಾಯಿತಿ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯ ಸರಕಾರ ಅತ್ಯಂತ ಕಡಿಮೆ ಅನುದಾನ ಬಿಡುಗಡೆ ಮಾಡುತ್ತಿದೆ. ಆದರಿಂದ ಗ್ರಾಮ ಪಂಚಾಯಿತಿಗಳಿಗೆ ನೀಡುವಂತೆ ಅನುದಾನವನ್ನು ನೇರವಾಗಿ ಜಿಲ್ಲಾ ಪಂಚಾಯಿತಿಗಳಿಗೆ ಬಿಡುಗಡೆ ಮಾಡುವುದು ಸೇರಿದಂತೆ ರಾಜ್ಯ ಪಂಚಾಯತ್‌ ರಾಜ್‌ ಕಾಯ್ದೆಗೆ ಅನುಗುಣವಾಗಿ ಸ್ವತಂತ್ರವಾಗಿ ಮತ್ತು ಸಮರ್ಥವಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡಬೇಕು. ಹೀಗೆ ವಿವಿಧ ವಿಷಯಗಳ ಕುರಿತು ಜಿಲ್ಲಾ ಪಂಚಾಯಿತಿ ಸದಸ್ಯರು ಸಭೆಯಲ್ಲಿ ಚರ್ಚಿಸಿದರು.

ಈ ವೇಳೆ ಮಾತನಾಡಿದ ಚಾಮರಾಜನಗರ ಜಿಪಂ ಕೃಷಿ ಮತ್ತು ಕೈಗಾರಿಕಾ ಸಮಿತಿಯ ಅಧ್ಯಕ್ಷ ನವೀನ, ರಾಜ್ಯ ಮಟ್ಟದ ಒಕ್ಕೂಟ ರಚನೆಗಾಗಿ ಈಗಾಗಲೇ ರಾಜ್ಯದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಪ್ರವಾಸ ಕೈಕೊಳ್ಳಲಾಗಿದೆ. ಪ್ರತಿ ಜಿಲ್ಲಾ ಪಂಚಾಯಿತಿಯಿಂದ 4ರಿಂದ 5 ಸದಸ್ಯರನ್ನು ರಾಜ್ಯ ಕಾರ್ಯಕಾರಿಣಿಗೆ ನೇಮಿಸಿಕೊಂಡು ಒಕ್ಕೂಟ ಕಾರ್ಯ ಮಾಡಲಿದೆ. ಉಳಿದ ಜಿಲ್ಲಾ ಪಂಚಾಯಿತಿಗಳಿಗೆ ಶೀಘ್ರದಲ್ಲಿ ಭೇಟಿ ನೀಡಿ ಚರ್ಚಿಸಲಾಗುವುದು. ಮುಂದಿನ ತಿಂಗಳು ರಾಜ್ಯ ಮಟ್ಟದ ಸಮಾವೇಶ ಮಾಡುವ ಮೂಲಕ ಒಕ್ಕೂಟದ ಉದ್ಘಾಟನೆ ಮಾಡಲಾಗುವುದು ಎಂದರು.

ಸಭೆಯಲ್ಲಿ ಧಾರವಾಡ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶಿವಾನಂದ ಕರಿಗಾರ, ಉಡುಪಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿವಾಕರ ಬಾಬು ಸೇರಿದಂತೆ ಚಾಮರಾಜನಗರ, ಉಡುಪಿ, ಉತ್ತರ ಕನ್ನಡ ಮತ್ತು ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ