ಆ್ಯಪ್ನಗರ

ವಿಶ್ವಾಸಮತ ಯಾಚನೆಗೆ ವಿಳಂಬ: ಸಚಿವ ಜೋಶಿ ಆಕ್ಷೇಪ

ಹುಬ್ಬಳ್ಳಿ : ಮೈತ್ರಿ ಪಕ್ಷದ ನಾಯಕರು ಅತೃಪ್ತ ಶಾಸಕರಿಗೆ ಹಣ ಸೇರಿದಂತೆ ವಿವಿಧ ಬಗೆಯ ಆಮಿಷ ತೋರಿಸಿ ವಾಪಸ್‌ ಕರೆ ತರುವ ಪ್ರಯತ್ನ ನಡೆಸಿರುವ ಹಿನ್ನೆಲೆಯಲ್ಲಿ ವಿಶ್ವಾಸಮತ ಯಾಚನೆಗೆ ವಿಳಂಬ ಮಾಡುತ್ತಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.

Vijaya Karnataka 21 Jul 2019, 5:00 am
Vijaya Karnataka Web delay in confidence vote minister joshi
ವಿಶ್ವಾಸಮತ ಯಾಚನೆಗೆ ವಿಳಂಬ: ಸಚಿವ ಜೋಶಿ ಆಕ್ಷೇಪ
ಹುಬ್ಬಳ್ಳಿ : ಮೈತ್ರಿ ಪಕ್ಷದ ನಾಯಕರು ಅತೃಪ್ತ ಶಾಸಕರಿಗೆ ಹಣ ಸೇರಿದಂತೆ ವಿವಿಧ ಬಗೆಯ ಆಮಿಷ ತೋರಿಸಿ ವಾಪಸ್‌ ಕರೆ ತರುವ ಪ್ರಯತ್ನ ನಡೆಸಿರುವ ಹಿನ್ನೆಲೆಯಲ್ಲಿ ವಿಶ್ವಾಸಮತ ಯಾಚನೆಗೆ ವಿಳಂಬ ಮಾಡುತ್ತಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಮೈತ್ರಿ ಸರಕಾರ ಪ್ರತಿ ಹಂತದಲ್ಲೂ ಸಂವಿಧಾನ ಉಲ್ಲಂಘಿಸುತ್ತಿದೆ. ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೊಸ ಇತಿಹಾಸ ಬರೆಯಲು ಮುಂದಾಗಿದ್ದು, ವಿಶ್ವಾಸಮತ ಸಾಬೀತುಗೊಳಿಸಲು ಐದು ದಿನ ತೆಗೆದುಕೊಂಡಿರುವುದು ದುರಂತ. ಅಲ್ಲದೆ, ಮೈತ್ರಿ ನಾಯಕರು ಮತ್ತು ಕುಮಾರಸ್ವಾಮಿ ಸಂವಿಧಾನಕ್ಕೆ ಅವಮಾನ ಮಾಡುತ್ತಿದ್ದಾರೆ'' ಎಂದು ದೂರಿದರು.

''ವಿಶ್ವಾಸಮತ ಯಾಚನೆ ವಿಚಾರದಲ್ಲಿ ಸ್ಪೀಕರ್‌ ರಮೇಶಕುಮಾರ್‌ ತತ್ವ ಸಿದ್ಧಾಂತಕ್ಕೆ ಬದ್ಧರಾಗಿ ಕಾರ್ಯ ನಿರ್ವಹಿಸುತ್ತಾರೆ ಎಂದು ಭಾವಿಸಲಾಗಿತ್ತು. ಆದರೆ ಅವರ ವರ್ತನೆ ಆಘಾತಕಾರಿಯಾಗಿದೆ. ಇನ್ನು ರಾಜ್ಯಪಾಲರು ಸಂವಿಧಾನದ ಆಶಯದಂತೆ ವರ್ತಿಸುತ್ತಿದ್ದಾರೆ. ಬಹುಮತ ಸಾಬೀತಿಗೆ ಎಲ್ಲ ರೀತಿ ಅವಕಾಶ ಕೊಟ್ಟಿದ್ದಾರೆ. ಅಲ್ಲದೆ, ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೀಗಿದ್ದಾಗ್ಯೂ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದ್ದಾರೆ'' ಎಂದು ಕಿಡಿಕಾರಿದರು.

''ರಾಜ್ಯ ರಾಜಕೀಯ ವಿಚಾರದಲ್ಲಿ ಕೇಂದ್ರ ಸರಕಾರ ಸದ್ಯ ಯಾವುದೇ ರೀತಿಯಿಂದ ಮಧ್ಯ ಪ್ರವೇಶ ಮಾಡಲ್ಲ. ಸ್ಪೀಕರ್‌ ರಮೇಶಕುಮಾರ್‌ ಸೋಮವಾರ ಕೊನೆಯ ದಿನ ಎಂದು ಹೇಳಿಕೊಂಡಿದ್ದಾರೆ. ಸಮಾಧಾನದಿಂದ ಕಾಯುವುದು ಸೂಕ್ತ. ರಾಷ್ಟ್ರಪತಿ ಆಳ್ವಿಕೆ ತರಲು ಬಿಜೆಪಿ ಹುನ್ನಾರ ನಡೆಸುತ್ತಿದೆ ಎಂಬುದು ಸತ್ಯಕ್ಕೆ ದೂರವಾದ ಮಾತು'' ಎಂದು ತಿಳಿಸಿದರು.

''ಬಿಜೆಪಿ ಯಾವುದೇ ಆಪರೇಷನ್‌ ಕಮಲ ಮಾಡಿಲ್ಲ. ಶ್ರೀಮಂತ ಪಾಟೀಲ್‌ ಸೇರಿದಂತೆ ಅವರ ಶಾಸಕರೇ ಈ ಕುರಿತು ಸ್ಪಷ್ಟೀಕರಣ ಕೊಟ್ಟಿದ್ದಾರೆ. ಶಾಸಕರನ್ನು, ಸಂಸದರನ್ನು ಅಪಹರಿಸುವುದು ಈಗ ಸಾಧ್ಯವಿಲ್ಲ. ಸದ್ಯ ಬಹುಮತ ಸಾಬೀತುಪಡಿಸಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಎನ್ನುವ ವಿಶ್ವಾಸವಿದೆ'' ಎಂದು ಜೋಶಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ