ಆ್ಯಪ್ನಗರ

ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಜ. 28 ರಂದು ಪಾರ್ಲಿಮೆಂಟ್‌ ಚಲೋ

ಹುಬ್ಬಳ್ಳಿ: ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಲ್‌ ಇಂಡಿಯಾ ಯುನೈಟೆಡ್‌ ಟ್ರೇಡ್‌ ಯೂನಿಯನ್‌ ಸೆಂಟರ್‌ ಆಶ್ರಯದಲ್ಲಿ ಆಶಾ, ಅಂಗನವಾಡಿ, ಬಿಸಿಯೂಟ ಯೋಜನೆಗಳ ಅಡಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಕಾರ್ಮಿಕರು ಜ. 28ರಂದು ಪಾರ್ಲಿಮೆಂಟ್‌ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಎಐಯುಟಿಯುಸಿ ರಾಜ್ಯ ಕಾರ್ಯದರ್ಶಿ ಕೆ.ಸೋಮಶೇಖರ್‌ ತಿಳಿಸಿದರು.

Vijaya Karnataka 22 Jan 2019, 5:00 am
ಹುಬ್ಬಳ್ಳಿ: ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಲ್‌ ಇಂಡಿಯಾ ಯುನೈಟೆಡ್‌ ಟ್ರೇಡ್‌ ಯೂನಿಯನ್‌ ಸೆಂಟರ್‌ ಆಶ್ರಯದಲ್ಲಿ ಆಶಾ, ಅಂಗನವಾಡಿ, ಬಿಸಿಯೂಟ ಯೋಜನೆಗಳ ಅಡಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಕಾರ್ಮಿಕರು ಜ. 28ರಂದು ಪಾರ್ಲಿಮೆಂಟ್‌ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಎಐಯುಟಿಯುಸಿ ರಾಜ್ಯ ಕಾರ್ಯದರ್ಶಿ ಕೆ.ಸೋಮಶೇಖರ್‌ ತಿಳಿಸಿದರು.
Vijaya Karnataka Web demanding various demands parliamentary chalo on 28th
ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಜ. 28 ರಂದು ಪಾರ್ಲಿಮೆಂಟ್‌ ಚಲೋ


ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಿಂದ 3-4 ಸಾವಿರ ಮಹಿಳಾ ಕಾರ್ಮಿಕರು ಪಾರ್ಲಿಮೆಂಟ್‌ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅದರಂತೆ ದೇಶವ್ಯಾಪಿಯಿಂದ ಬರುವ ಲಕ್ಷಾಂತರ ಮಹಿಳಾ ಕಾರ್ಮಿಕರು ಕೇಂದ್ರ ಸರಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಪಾರ್ಲಿಮೆಂಟ್‌ ಎದುರು ಒಂದು ದಿನ ಹೋರಾಟ ನಡೆಸಲಿದ್ದಾರೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದರು. ಅಲ್ಲದೆ, ಕಾರ್ಮಿಕ ಸಂಘಟನೆ ಸಮ್ಮೇಳನದಲ್ಲಿ ಮಹಿಳಾ ಕಾರ್ಮಿಕರ ಸಂಬಳ ದ್ವಿಗುಣ ಜತೆ ನಾನಾ ಸೌಲಭ್ಯಗಳನ್ನು ಕಲ್ಪಿಸುವುದಾಗಿ ತಿಳಿಸಿದ್ದರು. ಆದರೆ ಇದುವರೆಗೂ ಯಾವುದೇ ಯೋಜನೆಗಳು ಜಾರಿಯಾಗಿಲ್ಲ ಎಂದು ದೂರಿದರು.

ಕೇಂದ್ರ ಸರಕಾರ ನಾನಾ ಮಹತ್ವಪೂರ್ಣ ಯೋಜನೆಗಳಲ್ಲಿ ನೌಕರರನ್ನು ದುಡಿಸಿಕೊಳ್ಳುತ್ತಿರುವ ರೀತಿ ಅಮಾನವೀಯ. ಆಶಾ, ಅಂಗನವಾಡಿ, ಬಿಸಿಯೂಟ ಯೋಜನೆಯಡಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರು ಹಲವಾರು ವೈಯಕ್ತಿಕ ಕಷ್ಟಗಳನ್ನು ಮರೆತು, ಒತ್ತಡದ ಮಧ್ಯೆಯೂ ಸಾಮಾಜಿಕ ಕೆಲಸ ಮಾಡುತ್ತಿದ್ದಾರೆ. ಇಂತಹ ನೌಕರರನ್ನು ನಿಕೃಷ್ಟವಾಗಿ ಕಾಣುವುದು ಸರಿಯಲ್ಲ ಎಂದರು.

ಪ್ರಮುಖವಾಗಿ ಪಾರ್ಲಿಮೆಂಟ್‌ ಚಲೋ ಹೋರಾಟದಲ್ಲಿ ಸ್ಕೀಂ ವರ್ಕರ್ಸ್‌ಗಳ ಕಾಯಂ, ಸ್ವಯಂಸೇವಕರು, ಕಾರ್ಯಕರ್ತೆಯರು ಅನ್ನುವ ಬದಲಿಗೆ ಇವರನ್ನು ಕಾರ್ಮಿಕರೆಂದು ಪರಿಗಣಿಸಬೇಕು. ದುಡಿತಕ್ಕೆ ತಕ್ಕಂತೆ ಗೌರವ- ಪ್ರೋತ್ಸಾಹ ಧನ, ಕನಿಷ್ಠ ವೇತನ 21 ಸಾವಿರ ರೂ, ಪಿಎಫ್‌, ಇಎಸ್‌ಐ, ಗ್ರಾಚ್ಯುಟಿ, ತುಟ್ಟಿ ಭತ್ಯೆ ನೀಡಬೇಕು. ನಿವೃತ್ತರಿಗೆ ಮಾಸಿಕ 6 ಸಾವಿರ ರೂ. ಪಿಂಚಣಿ ನೀಡಬೇಕು. ಜನಾಭಿವೃದ್ಧಿ ಯೋಜನೆಗಳನ್ನು ಖಾಸಗೀಕರಣಗೊಳಿಸದೆ, ಬಜೆಟ್‌ನಲ್ಲಿ ಹೆಚ್ಚು ಹಣ ಮೀಸಲಿಡಬೇಕು ಎಂದು ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಎಐಯುಟಿಯುಸಿ ಸಂಚಾಲಕ ಗಂಗಾಧರ ಬಡಿಗೇರ, ಭವನಾ ಎ., ಬಸಮ್ಮ ಘಂಟಿ, ಮಂಜುಳಾ, ಗಿರೀಜಾ, ದಾವಲಬಿ, ಅನ್ನಪೂರ್ಣ ಗಿರಿಯಪ್ಪಗೌಡ್ರ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ