ಆ್ಯಪ್ನಗರ

ಅಸಾಂವಿಧಾನಿಕ DCM ಹುದ್ದೆ ನೀಡಿದ್ದರೂ, ಸ್ವೀಕರಿಸುತ್ತಿರಲಿಲ್ಲ: ಸಚಿವ ಜಗದೀಶ್ ಶೆಟ್ಟರ್

ನನಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಿದ್ದರೂ, ನಾನು ಸ್ವೀಕರಿಸುತ್ತಿರಲಿಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

Vijaya Karnataka Web 27 Aug 2019, 2:22 pm
ಹುಬ್ಬಳ್ಳಿ: ಉಪ ಮುಖ್ಯಮಂತ್ರಿ ಸ್ಥಾನ ನೀಡಿದ್ದರೂ, ನಾನು ಸ್ವೀಕರಿಸುತ್ತಿರುಲಿಲ್ಲ. ಅದೊಂದು ಅಸಾಂವಿಧಾನಿಕ ಹುದ್ದೆಯಾಗಿದ್ದು, ಅಂಥ ಹುದ್ದೆ ನನಗೆ ಬೇಕಿಲ್ಲ ಎಂದು ನೂತನ ಸಚಿವ ಜಗದೀಶ್ ಶೆಟ್ಟರ ಹೇಳಿದರು.
Vijaya Karnataka Web jagadish shetter


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರು ತೆಗೆದುಕೊಂಡ ನಿರ್ಧಾರಕ್ಕೆ ಬದ್ಧ. ಹೈಕಮಾಂಡ್ ನಿರ್ಧಾರದಂತೆ ಮುನ್ನಡೆಯುತ್ತೇನೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ಮೇಲೆ ಇಷ್ಟೊಂದು ಪ್ರೀತಿ ಹುಟ್ಟಿರುವುದು ಏಕೆಂದು ಗೊತ್ತಿಲ್ಲ. ಮೊದಲು ಅವರು ತಮ್ಮ ಪಕ್ಷದ ಸ್ಥಿತಿ ನೋಡಿಕೊಳ್ಳಲಿ. ಇಲ್ಲಿಯವರೆಗೂ ವಿರೋಧ ಪಕ್ಷದ ನಾಯಕರಾಗಲು ಸಾಧ್ಯವಾಗದ ಅವರು, ನಮ್ಮ ಪಕ್ಷದ ಬಗ್ಗೆ ಚಿಂತೆ ಮಾಡುವುದೇಕೆ ಎಂದು ಪ್ರಶ್ನಿಸಿದರು.

ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ. ಎಲ್ಲಿಯೂ ಕೂಡ ಸಿ ಟಿ ರವಿ ಅಸಮಾಧ್ಯ ವ್ಯಕ್ತಪಡಿಸಿಲ್ಲ. ಅವರು ಸಮಾಧಾನವಾಗಿಯೇ ಇದ್ದಾರೆ. ನಮ್ಮದು ಶಿಸ್ತಿನ ಪಕ್ಷ ಎಂದವರು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ