ಆ್ಯಪ್ನಗರ

ಓದುವ ಹವ್ಯಾಸ ಬೆಳೆಸಿಕೊಳ್ಳಿ

ಧಾರವಾಡ : ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಯುಗದಲ್ಲಿ ಹೆಚ್ಚು ಓದುವ ಮೂಲಕ ವಿದ್ಯಾವಂತರಾಗಿ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಬದುಕಬೇಕು ಎಂದು ಪದವಿ ಪೂರ್ವ ಶಿಕ್ಷ ಣ ಇಲಾಖೆ ಉಪನರ್ದೇಶಕಿ ಶಾರದಾ ಕಿರೇಸೂರ ಹೇಳಿದರು.

Vijaya Karnataka 17 Jul 2019, 5:00 am
ಧಾರವಾಡ : ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಯುಗದಲ್ಲಿ ಹೆಚ್ಚು ಓದುವ ಮೂಲಕ ವಿದ್ಯಾವಂತರಾಗಿ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಬದುಕಬೇಕು ಎಂದು ಪದವಿ ಪೂರ್ವ ಶಿಕ್ಷ ಣ ಇಲಾಖೆ ಉಪನರ್ದೇಶಕಿ ಶಾರದಾ ಕಿರೇಸೂರ ಹೇಳಿದರು.
Vijaya Karnataka Web DRW-16RANGA04
ಧಾರವಾಡ ಮರಾಠಾ ವಿದ್ಯಾಪ್ರಸಾರಕ ಮಂಡಳದ ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಕಲಾ ಮತ್ತು ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಶಾರದಾ ಕಿರೇಸೂರ ಉದ್ಘಾಟಿಸಿದರು.


ನಗರದ ಮರಾಠಾ ವಿದ್ಯಾಪ್ರಸಾರಕ ಮಂಡಳದ ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಕಲಾ ಮತ್ತು ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯದ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ, ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮೊಬೈಲ್‌ ಗೀಳಿಗೆ ಅಂಟಿಕೊಳ್ಳದೇ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಅಂದಾಗ ಮಾತ್ರ ಸಾಧನೆ ಮಾಡಲು ಸಾಧ್ಯ. ಉತ್ತಮವಾಗಿ ಓದಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಹೇಳಿದರು.

ಸಂಸ್ಥೆಯ ಗೌರವಕಾರ್ಯದರ್ಶಿ ವಿಜಯ ರಾಮಕೃಷ್ಣ ಭೋಸಲೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಮಾತನಾಡಿ, ಬರುವ ದಿನಗಳಲ್ಲಿ 10 ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ಗೌರವಿಸಲಾಗುವುದು ಎಂದು ಹೇಳಿದರು.

ಪ್ರಾಚಾರ್ಯ ಎಸ್‌. ಎಂ. ಸಂಕೋಜಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆ ಹಾಗೂ ಓದಿನ ಕಡೆಗೆ ಗಮನ ನೀಡಬೇಕು. ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಳಾಗಬೇಕು ಎಂದರು.

ನವೀನ ಪ್ರಕಾಶ ಕದಂ, ಅಪ್ಪಾಜಿ ಶಿಂಧೆ ಉಪಸ್ಥಿತರಿದ್ದರು. ಪಿ.ಎಸ್‌.ಶೀಲವಂತ ನಿರೂಪಿಸಿ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ