ಆ್ಯಪ್ನಗರ

ಸ್ಥಿರ ಸರಕಾರದಿಂದ ಅಭಿವೃದ್ಧಿ

ಹುಬ್ಬಳ್ಳಿ: ಉತ್ತಮ ನಾಯಕತ್ವ ಮತ್ತು ಸ್ಥಿರ ಸರಕಾರದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.

Vijaya Karnataka 16 Jan 2020, 5:00 am
ಹುಬ್ಬಳ್ಳಿ: ಉತ್ತಮ ನಾಯಕತ್ವ ಮತ್ತು ಸ್ಥಿರ ಸರಕಾರದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.
Vijaya Karnataka Web development by stable government
ಸ್ಥಿರ ಸರಕಾರದಿಂದ ಅಭಿವೃದ್ಧಿ


ನಗರದ ರೈಲ್ವೆ ನಿಲ್ದಾಣ ಬಳಿಯ ಸೇತುವೆಯಿಂದ ಕೇಶ್ವಾಪುರ, ನಾಗಶೆಟ್ಟಿಕೊಪ್ಪ, ಗೋಪನಕೊಪ್ಪ ಮಾರ್ಗವಾಗಿ ಸಾಯಿನಗರ ಉಣಕಲ್‌ ವರೆಗಿನ ಕೇಂದ್ರ ರಸ್ತೆ ನಿಧಿ ಅನುದಾನÜ ಅಡಿ 40ಕೊಟಿ ವೆಚ್ಚದಲ್ಲಿಕಾಂಕ್ರೀಟ್‌ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.

ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕೇಂದ್ರ ಸಿಆರ್‌ಎಫ್‌ನಿಂದ ಒಟ್ಟು 460 ಕೋಟಿ ರೂ. ವೆಚ್ಚದಲ್ಲಿಅವಳಿ ನಗರದ ರಸ್ತೆ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂದು ತಿಳಿಸಿದರು.

ರಸ್ತೆ ಅಗೆಯಬೇಡಿ
ಮಹಾನಗರ ಪಾಲಿಕೆ ಹಾಗೂ ಲೋಕೋಪಯೋಗಿ ಇಲಾಖೆ ಸಹಕಾರದಿಂದ ಉತ್ತಮ ಕಾಮಗಾರಿ ಮಾಡಬೇಕಿದೆ. ನಿರ್ಮಿಸಲಾದ ರಸ್ತೆಗಳನ್ನು ಬೇರೆ ಕಾರಣಗಳಿಂದ ಮತ್ತೆ ಅಗೆಯುವ ಕಾರ್ಯಕ್ಕೆ ಮುಂದಾಗಬಾರದು. ಗ್ಯಾಸ್‌ ಪೈಪ್‌, ನೀರು ಸೇರಿದಂತೆ ಎಲ್ಲರೀತಿಯ ಅಗತ್ಯ ಪೈಪ್‌ಗಳನ್ನು ಮೊದಲೇ ಅಳವಡಿಸುವ ಕಾರ್ಯವಾಗಲಿ ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಹು ನಿರೀಕ್ಷಿತ ಚೆನ್ನಮ್ಮ ವೃತ್ತ ಫ್ಲೈಓವರ್‌ ಯೋಜನೆಯ ಅನುಷ್ಠಾನದ ಅಂತಿಮ ಹಂತಕ್ಕೆ ಬಂದಿದ್ದರು, ಆರ್‌ಓ ಕಚೇರಿಗೆ ಪ್ರಸ್ತಾವನೆ ಬಂದಿದೆ. ಇನ್ನು ಕೇಂದ್ರ ಸರ್ಕಾರದಿಂದ ಶೀಘ್ರ ಅನುಮೋದನೆ ಕೊಡಿಸಲಾಗುವುದು ಎಂದರು.

ಪಕ್ಷಾತೀತ ಬೆಂಬಲ ಬೇಕು
ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಅಭಿವೃದ್ಧಿ ವಿಚಾರಕ್ಕೆ ಪಕ್ಷಾತೀತವಾಗಿ ಬೆಂಬಲಿಸಲಾವುದು. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪಕ್ಷಬೇಧ ಮರೆತು ಒಂದಾಗಬೇಕಿದೆ. ಈ ವಿಚಾರವಾಗಿ ಹಳೇ ಮೈಸೂರು ಭಾಗದ ರಾಜಕಾರಣಿಗಳನ್ನ ನೋಡಿ ಕಲಿಯಬೇಕು ಎಂದರು. ಜಾತಿ ವ್ಯವಸ್ಥೆಯಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನೆಡೆಯಾಗುತ್ತಿದೆ. ಸ್ವಾಮೀಜಿಗಳು ರಾಜಕಾರಣದಲ್ಲಿಬರಬಾರದು. ಯಾರನ್ನಾದರು ಸಚಿವರನ್ನಾಗಿ ಮಾಡಲಿ ಸ್ವಾಮೀಜಿಗಳು ಏಕೆ ಬರಬೇಕು ಎಂದು ಪ್ರಶ್ನಿಸಿದರು.

ಮಹಾದಾಯಿ ವಿಚಾರವಾಗಿ ಪಕ್ಷಾತೀತವಾಗಿ ಚರ್ಚೆ ನಡೆದಿದ್ದು ಸಂತಸ ತಂದಿದೆ. ಅದೇ ರೀತಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಎಲ್ಲರೂ ಒಂದಾಗೋಣ ಎಂದ ಅವರು, ಮುಂಬರು ನಾಲ್ಕು ವರ್ಷದಲ್ಲಿಅವಳಿ ನಗರವನ್ನ ಮಾದರಿ ನಗರವನ್ನಾಗಿ ಮಾಡೋಣ ಎಂದರು.

ವರ್ಲ್ಡ್ ಬ್ಯಾಂಕ್‌ನಲ್ಲಿಪ್ರಸ್ತಾವ
ಸಚಿವ ಜಗದೀಶ ಶೆಟ್ಟರ ಮಾತನಾಡಿ, ಅವಳಿನಗರದಲ್ಲಿಸಾಕಷ್ಟು ಅಭಿವೃದ್ಧಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. 26ಕೋಟಿಯಲ್ಲಿ40ಎಂಎಲ್‌ಡಿ ಕುಡಿಯು ನೀರು ಯೋಜನೆ ಕಾಮಗಾರಿ ಅಂತಿಮ ಹಂತದಲ್ಲಿದೆ. ಶೇ.60 ರಷ್ಟು ಬಾಕಿ ಉಳಿದಿರುವ ದಿನದ 24ಗಂಟೆ ಕುಡಿಯುವ ನೀರು ಯೋಜನೆ ಕಾಮಗಾರಿಗೆ 700ಕೋಟಿ ರೂ. ಪ್ರಸ್ತಾವನೆ ವರ್ಲ್ಡ್ ಬ್ಯಾಂಕ್‌ನಲ್ಲಿದೆ. ಅದಲ್ಲದೇ ಲೋಕೋಪಯೋಗಿ ಇಲಾಖೆಯಿಂದ 100ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.

ವಿಪ ಸದಸ್ಯ ಪ್ರದೀಪ ಶೆಟ್ಟರ, ವಾಕರಸಾಸಂಸ್ಥೆ ಅಧ್ಯಕ್ಷ ವಿ.ಎಸ್‌. ಪಾಟೀಲ, ಪಾಲಿಕೆ ಆಯುಕ್ತ ಸುರೇಶ ಇಟ್ನಾಳ್‌, ಹು-ಧಾ ಮಹಾನಗರ ಬಿಜೆಪಿ ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ, ಮಾಜಿ ಮೇಯರ್‌ ಸುಧೀರ್‌ ಸರಾಫ್‌ ಸೇರಿದಂತೆ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ