ಆ್ಯಪ್ನಗರ

ಧಾರವಾಡ ಕಟ್ಟಡ ಕುಸಿತ ಪ್ರಕರಣ: ಪಾಲಿಕೆಯ 7 ಅಧಿಕಾರಿಗಳ ಅಮಾನತು

ಪ್ರಕರಣ ಸಂಬಂಧ ನಗರಾಭಿವೃದ್ದಿ ಇಲಾಖೆಯ ಎಳು ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

Vijaya Karnataka Web 23 Mar 2019, 11:49 am
ಧಾರವಾಡ: ಇಲ್ಲಿಯ ಕುಮಾರೇಶ್ವರ ನಗರದ ಬಹು ಮಹಡಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ದಿ ಇಲಾಖೆ ಕೊನೆಗೂ ಎಚ್ಚೆತ್ತುಕೊಂಡಿದೆ.
Vijaya Karnataka Web dharwad


ಪ್ರಕರಣ ಸಂಬಂಧ ನಗರಾಭಿವೃದ್ದಿ ಇಲಾಖೆಯ ಎಳು ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ಈ ಸಂಬಂಧ ಮಹಾನಗರ ಪಾಲಿಕೆ ಜೂನಲ್ ನಂ. 3ರ ಸಹಾಯಕ ಆಯುಕ್ತ ಸಂತೋಷ ಅನಿಶೆಟ್ಟರ್, ನಗರ ಯೋಜನಾ ಸಹಾಯಕ ನಿರ್ದೇಶಕ ಅಶೋಕ ಗದಗ, ನಗರ ಯೋಜಕ ಮುಕುಂದ ಜೋಶಿ, ಕಾರ್ಯನಿರ್ವಾಹಕ ಇಂಜಿನಿಯರ್ ವಿ. ಶ್ರೀಧರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರಪ್ಪ,ನಗರ ಯೋಜನಾ ಇಲಾಖೆ ಉಪನಿರ್ದೇಶಕ ಬಿ.ವಿ. ಹಿರೇಮಠ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಇಲಾಖೆ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಕಟ್ಟಡ ದುರಂತ ಪ್ರಕರಣಕ್ಕೆ ಮಹಾನಗರ ಪಾಲಿಕೆ ಅಧಿಕಾರಿಗಳೇ ಹೊಣೆಯಾಗಿದ್ದು, ಅವರ ಕರ್ತವ್ಯ ನಿರ್ಲಕ್ಷ್ಯಿದಿಂದಾಗಿಯೇ 16 ಜನ ಸಾವನ್ನಪ್ಪಿದ್ದು, 60 ಜನರು ಸಿಲುಕಿದ್ದರು, ಇನ್ನೂ ಹಲವರು ಸಾವಿನ ಹೋರಾಟ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ