ಧಾರವಾಡ ಕಟ್ಟಡ ಕುಸಿತ: ಮತ್ತೆರಡು ಶವ ಪತ್ತೆ, ಸಾವಿನ ಸಂಖ್ಯೆ 9ಕ್ಕೇರಿಕೆ
ಇಲ್ಲಿನ ಕುಮಾರೇಶ್ವರನಗರದಲ್ಲಿ ನಿರ್ಮಾಣ ಹಂತದ ಬಹುಮಹಡಿ ವಾಣಿಜ್ಯ ಕಟ್ಟಡ ಕುಸಿದು ಅವಶೇಷಗಳಡಿ ಸಿಲುಕಿದ್ದ ಜನರ ರಕ್ಷಣೆ ಕಾರ್ಯ ಮುಂದುವರಿದಿದೆ.
Vijaya Karnataka Web 21 Mar 2019, 1:51 pm
ಧಾರವಾಡ: ಇಲ್ಲಿನ ಕುಮಾರೇಶ್ವರನಗರದಲ್ಲಿ ನಿರ್ಮಾಣ ಹಂತದ ಬಹುಮಹಡಿ ವಾಣಿಜ್ಯ ಕಟ್ಟಡ ಕುಸಿದು ಅವಶೇಷಗಳಡಿ ಸಿಲುಕಿದ್ದ ಜನರ ರಕ್ಷಣೆ ಕಾರ್ಯ ಮುಂದುವರಿದಿದೆ. ಗುರುವಾರ ಮತ್ತಿಬ್ಬರ ಮೃತದೇಪ ಪತ್ತೆಯಾಗಿದ್ದು, ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿದೆ.
ಅದರಂತೆ, ಕಾರ್ಯ ಪಡೆಗಳು ನಿರಂತರ ಕಾರ್ಯಾಚರಣೆ ನಡೆಸುವ ಮೂಲಕ ಮತ್ತೆರಡು ಜೀವಗಳನ್ನು ರಕ್ಷಣೆ ಮಾಡಿದ್ದಾರೆ. ಬುಧವಾರ ಮಧ್ಯರಾತ್ರಿ ಕಲಘಟಕಿಯ ನಭಿಸಾಬ್ ಟಕ್ಕದ (42) ಹಾಗೂ ಗುರುವಾರ ಮಧ್ಯಾಹ್ನದ ವೇಳೆಗೆ ಧಾರವಾಡದ ನಿವಾನಂದ ನಗರದ ನಿವಾಸಿ ಪ್ರೇಮಾ ಉಣಕಲ್ (40) ಎಂಬ ಮಹಿಳೆಯನ್ನು ರಕ್ಷಿಸಲಾಗಿದೆ.
ಇಬ್ಬರು ಸಂತ್ರಸ್ತರಿಗೂ ಸಣ್ಣ-ಪುಟ್ಟ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇಂದು ಮಧ್ಯಾಹ್ನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ಅದರಂತೆ, ಕಾರ್ಯ ಪಡೆಗಳು ನಿರಂತರ ಕಾರ್ಯಾಚರಣೆ ನಡೆಸುವ ಮೂಲಕ ಮತ್ತೆರಡು ಜೀವಗಳನ್ನು ರಕ್ಷಣೆ ಮಾಡಿದ್ದಾರೆ. ಬುಧವಾರ ಮಧ್ಯರಾತ್ರಿ ಕಲಘಟಕಿಯ ನಭಿಸಾಬ್ ಟಕ್ಕದ (42) ಹಾಗೂ ಗುರುವಾರ ಮಧ್ಯಾಹ್ನದ ವೇಳೆಗೆ ಧಾರವಾಡದ ನಿವಾನಂದ ನಗರದ ನಿವಾಸಿ ಪ್ರೇಮಾ ಉಣಕಲ್ (40) ಎಂಬ ಮಹಿಳೆಯನ್ನು ರಕ್ಷಿಸಲಾಗಿದೆ.
ಇಬ್ಬರು ಸಂತ್ರಸ್ತರಿಗೂ ಸಣ್ಣ-ಪುಟ್ಟ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇಂದು ಮಧ್ಯಾಹ್ನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.