ಆ್ಯಪ್ನಗರ

ವಿನಯ ಕುಲಕರ್ಣಿ ಜಾಮೀನು ಅರ್ಜಿ ವಜಾ ಮಾಡಿದ ಧಾರವಾಡ ಹೈಕೋರ್ಟ್..!

ಯೋಗೀಶ ಗೌಡ ಹತ್ಯೆ ಪ್ರಕರಣ ಇನ್ನೂ ತನಿಖಾ ಹಂತದಲ್ಲಿಇದೆ. ಅಲ್ಲದೇ ವಿಚಾರಣಾ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ದೋಷಾರೋಪಣೆ ಪಟ್ಟಿ ಸಲ್ಲಿಸಿಲ್ಲ. ಇಂಥ ಸಂದರ್ಭದಲ್ಲಿ ಅರ್ಜಿದಾರರಿಗೆ ಜಾಮೀನು ನೀಡುವುದು ಸೂಕ್ತವಲ್ಲ ಎಂದು ಧಾರವಾಡ ಹೈಕೋರ್ಟ್ ಅಭಿಪ್ರಾಯಪಟ್ಟು ಜಾಮೀನು ಅರ್ಜಿ ತಿರಸ್ಕರಿಸಿದೆ.

Vijaya Karnataka Web 22 Jan 2021, 2:03 pm
ಧಾರವಾಡ: ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್‌ ಗುರುವಾರ ವಜಾಗೊಳಿಸಿದೆ.
Vijaya Karnataka Web Vinay Kulkarni


ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ವಿನಯ ಕುಲಕರ್ಣಿ ಅವರನ್ನು ಕಳೆದ ನವೆಂಬರ್ 5ರಂದು ಬಂಧಿಸಿದ್ದರು. ನಂತರ ಮೂರು ದಿನಗಳವರೆಗೆ ಅವರನ್ನು ವಿಚಾರಣೆಗೆ ವಶಕ್ಕೆ ಪಡೆದುಕೊಂಡಿದ್ದ ಸಿಬಿಐ ತಂಡ ನಂತರ ನ್ಯಾಯಾಂಗ ವಶಕ್ಕೆ ಒಪ್ಪಿಸಿತ್ತು. ಬಳಿಕ ವಿನಯ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಧಾರವಾಡ ವಿಶೇಷ ಸಿಬಿಐ ನ್ಯಾಯಾಲಯ ವಜಾಗೊಳಿಸಿತ್ತು.
ಮಾವು, ಪೇರಲ, ಲಿಂಬೆ, ತರಕಾರಿ ಸೇರಿದಂತೆ ಇನ್ನಿತರ ಬೆಳೆಗಳ ಕೀಟ ಬಾಧೆ ನಿಯಂತ್ರಣಕ್ಕೆ ಇಲ್ಲಿದೆ ಪರಿಹಾರ
ಇದನ್ನು ಪ್ರಶ್ನಿಸಿ ವಿನಯ ಪರ ವಕೀಲರು ಜಾಮೀನು ಕೋರಿ ಧಾರವಾಡ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಗುರುವಾರ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಎನ್‌. ನಟರಾಜ ಅವರಿದ್ದ ಏಕಸದಸ್ಯ ಪೀಠ, ಯೋಗೀಶ ಗೌಡ ಹತ್ಯೆ ಪ್ರಕರಣ ಇನ್ನೂ ತನಿಖಾ ಹಂತದಲ್ಲಿಇದೆ. ಅಲ್ಲದೇ ವಿಚಾರಣಾ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ದೋಷಾರೋಪಣೆ ಪಟ್ಟಿ ಸಲ್ಲಿಸಿಲ್ಲ. ಇಂಥ ಸಂದರ್ಭದಲ್ಲಿ ಅರ್ಜಿದಾರರಿಗೆ ಜಾಮೀನು ನೀಡುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟು ಜಾಮೀನು ಅರ್ಜಿ ತಿರಸ್ಕರಿಸಿ ಆದೇಶ ಮಾಡಿದರು.
ಯೋಗೀಶ್ ಗೌಡ ಹತ್ಯೆ ಪ್ರಕರಣ, ವಿನಯ ಕುಲಕರ್ಣಿ ಜಾಮೀನು ಅರ್ಜಿ ಜ.21ರಂದು ವಿಚಾರಣೆ
ಹಿರಿಯ ಕಾನೂನು ತಜ್ಞರೊಂದಿಗೆ ಚರ್ಚಿಸಿ ಹೈಕೋರ್ಟ್‌ನ ಈ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ವಿನಯ ಕುಲಕರ್ಣಿ ಪರ ವಕೀಲರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ