ಆ್ಯಪ್ನಗರ

Accident in Hubli - ಭೀಕರ ಅಪಘಾತ: ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್​ ಬಾರದೇ ವ್ಯಕ್ತಿ ಸಾವು!

ಟಿಪ್ಪರ್ ಲಾರಿ ಕೆಳಗೆ ಸಿಲುಕಿದ ಬೈಕ್ ಸವಾರ ಆಂಬುಲೆನ್ಸ್ ಬಾರದೆ ಅಪಘಾತ ಸ್ಥಳದಲ್ಲೇ ಒಂದು ಗಂಟೆಗೂ ಅಧಿಕ ಕಾಲ ನರಳಾಟ ನಡೆಸಿ ಸ್ಥಳೀಯರ ಸಹಾಯದಿಂದ ಕೊನೆಗೆ ಗೂಡ್ಸ್ ವಾಹನದ ಮೂಲಕ ಕುಂದಗೋಳ ತಾಲೂಕ ಆಸ್ಪತ್ರೆಗೆ ಸಾಗಿಸುವ ವೇಳೆಗೆ ಆತನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಪತ್ನಿ ಹಾಗೂ ಮಗು ಸಮೇತ ಕುಂದಗೋಳ ತಾಲೂಕು ಆಸ್ಪತ್ರೆಗೆ ಬಂದು ತನ್ನೂರು ಶರೇವಾಡಕ್ಕೆ ಮರಳುವ ವೇಳೆ ರಸ್ತೆ ಮದ್ಯೆ ಪೆಟ್ರೋಲ್ ಖಾಲಿಯಾಗಿ ನಿಂತಿದ್ದ ಬೈಕ್ ಸವಾರ ಓರ್ವನಿಗೆ ಸಹಾಯ ಮಾಡಲು ತೆರಳುವ ವೇಳೆ ಈ ಅಪಘಾತ ನಡೆದಿದೆ.

Edited byಚೇತನ್ ಓ.ಆರ್. | Vijaya Karnataka Web 20 Sep 2022, 6:10 pm
ಧಾರವಾಡ: ಟಿಪ್ಪರ್ ಲಾರಿ ಹಾಗೂ ಬೈಕ್ ಮದ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ, ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು ಸಾಗಿಸಲು ಸಕಾಲಕ್ಕೆ ಆಂಬ್ಯುಲೆನ್ಸ್ ಸೇವೆ ಸಿಗದೆ ಅಸುನೀಗಿದ ಘಟನೆ ಹುಬ್ಬಳ್ಳಿ-ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯ ಕುಂದಗೋಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪತ್ನಿ ಹಾಗೂ ಮಗು ಸಮೇತ ಕುಂದಗೋಳ ತಾಲೂಕು ಆಸ್ಪತ್ರೆಗೆ ಬಂದು ತನ್ನೂರು ಶರೇವಾಡಕ್ಕೆ ಮರಳುವ ವೇಳೆ ರಸ್ತೆ ಮದ್ಯೆ ಪೆಟ್ರೋಲ್ ಖಾಲಿಯಾಗಿ ನಿಂತಿದ್ದ ಬೈಕ್ ಸವಾರ ಓರ್ವನಿಗೆ ಸಹಾಯ ಮಾಡಲು ತೆರಳುವ ವೇಳೆ ಈ ಅಪಘಾತ ನಡೆದಿದೆ.
Vijaya Karnataka Web accident at hubli
ಅಪಘಾತ ನಡೆದ ಸ್ಥಳ.


ಹೌದು, ಲಕ್ಷ್ಮೇಶ್ವರದಿಂದ ಉಸುಕು ತುಂಬಿಕೊಂಡು ವೇಗವಾಗಿ ಬರುತ್ತಿದ್ದ ಲಾರಿ ಎದುರಿಗಿದ್ದ ಸಾರಿಗೆ ಬಸ್ ಓವರಟೆಕ್ ಮಾಡುವ ಭರದಲ್ಲಿ ರಸ್ತೆ ಪಕ್ಕ ನಿಂತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಬೈಕ್ ಸವಾರ ರಕ್ತದ ಮಡುವಿನಲ್ಲಿದ್ದ, ಈ ವೇಳೆ ಸಕಾಲಕ್ಕೆ ಆಂಬ್ಯುಲೆನ್ಸ್ ಸೇವೆ ಸಿಗದೆ ಜೀವ ಬಿಟ್ಟರೇ, ತೀವ್ರ ಗಾಯವಾಗಿದ್ದ ಮಗು ಹಾಗೂ ಪತ್ನಿಯನ್ನು ಸ್ಥಳೀಯರೇ ಆಂಬುಲೆನ್ಸ್ ಬಾರದ ಕಾರಣ ಒತ್ತಾಯ ಮಾಡಿ ಪೊಲೀಸ್ 112 ವಾಹನದಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ.

Hubli News: ಪಡೆಯದ ಸಾಲಕ್ಕೆ ಫೈನಾನ್ಸ್ ಕಂಪನಿಯಿಂದ ಕೋರ್ಟ್ ನೋಟಿಸ್; ಕಂಪನಿ ಕಚೇರಿಯ ಮುಂದೆ ಧರಣಿ!
ಟಿಪ್ಪರ್ ಲಾರಿ ಕೆಳಗೆ ಸಿಲುಕಿದ ಬೈಕ್ ಸವಾರ ಆಂಬುಲೆನ್ಸ್ ಬಾರದೆ ಅಪಘಾತ ಸ್ಥಳದಲ್ಲೇ ಒಂದು ಗಂಟೆಗೂ ಅಧಿಕ ಕಾಲ ನರಳಾಟ ನಡೆಸಿ ಸ್ಥಳೀಯರ ಸಹಾಯದಿಂದ ಕೊನೆಗೆ ಗೂಡ್ಸ್ ವಾಹನದ ಮೂಲಕ ಕುಂದಗೋಳ ತಾಲೂಕ ಆಸ್ಪತ್ರೆಗೆ ಸಾಗಿಸುವ ವೇಳೆಗೆ ಆತನ ಪ್ರಾಣ ಪಕ್ಷಿ ಹಾರಿ ಹೋಗಿದೆ.

ಮೃತ ವ್ಯಕ್ತಿ ಮಹಮ್ಮದಶಪಿಕ್ ನೂಲ್ವಿ (38) ಹುಬ್ಬಳ್ಳಿ ತಾಲೂಕಿನ ಶರೇವಾಡ ಗ್ರಾಮದವರೇಂದು ತಿಳಿದು ಬಂದಿದ್ದು, ಪತ್ನಿ ಹಾಗೂ ಮಗು ಸಮೇತ ಕುಂದಗೋಳ ತಾಲೂಕು ಆಸ್ಪತ್ರೆಗೆ ಬಂದು ತನ್ನೂರು ಶರೇವಾಡಕ್ಕೆ ಮರಳುವ ವೇಳೆ ರಸ್ತೆ ಮದ್ಯೆ ಪೆಟ್ರೋಲ್ ಖಾಲಿಯಾಗಿ ನಿಂತಿದ್ದ ಬೈಕ್ ಸವಾರ ಓರ್ವನಿಗೆ ಸಹಾಯ ಮಾಡಲು ತೆರಳುವ ವೇಳೆ ಈ ಅಪಘಾತ ನಡೆದಿದೆ.

ತ್ರಿಪುರಾದಲ್ಲಿ ಜಿಲ್ಲಾಧಿಕಾರಿಯಾದ ರೈತ ಬಂಡಾಯ ನೆಲದ ಕುವರಿ ಮೇಘಾ ಜೈನ್: ಇವರ ಸಾಧನೆ ಎಲ್ಲರಿಗೂ ಸ್ಫೂರ್ತಿ
ಸದ್ಯ ಅಪಘಾತದಲ್ಲಿ ತೀವ್ರ ಗಾಯಗೊಂಡ ಪತ್ನಿ ರಿಯಾನಭಾನು ಮಗುವನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದ್ದು, ಇನ್ನು ಕುಂದಗೋಳ ತಾಲೂಕು ಆಸ್ಪತ್ರೆ ಬಳಿ ಕುಟುಂಬಸ್ಥರ ರೋಧನೆ ಮುಗಿಲು ಮುಟ್ಟಿದ್ದು, ಸಮಯಕ್ಕೆ ಬಾರದ ಆಂಬುಲೆನ್ಸ್ ವಿರುದ್ಧ ತಮ್ಮ ಅಸಮಾಧಾನ ಹೊರಹಾಕುತ್ತಿದ್ದಾರೆ. ಇನ್ನು ಸ್ಥಳಕ್ಕೆ ಕುಂದಗೋಳ ಗ್ರಾಮೀಣ ಪೊಲೀಸರು ಭೇಟಿ ನೀಡಿ ಓರ್ವನನ್ನು ವಶಕ್ಕೆ ಪಡೆದಿದ್ದು, ಇನ್ನೋರ್ವ ಪರಾರಿಯಾಗಿದ್ದಾನೆ ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಲೇಖಕರ ಬಗ್ಗೆ
ಚೇತನ್ ಓ.ಆರ್.
ಪ್ರಸ್ತುತ, ವಿಜಯ ಕರ್ನಾಟಕ ವೆಬ್ ನಲ್ಲಿ ಪತ್ರಕರ್ತನಾಗಿ 2022ರಿಂದ ಪತ್ರಕರ್ತನಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2007ರಲ್ಲಿ ತುಮಕೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ 5ನೇ ರ‍್ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಮೈಸೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ ಪಿಎಚ್ ಡಿ ಪದವಿ ಪಡೆದಿದ್ದಾರೆ. ಜಿಲ್ಲಾ ಸುದ್ದಿಗಳಿಂದ ಹಿಡಿದು ಕ್ರೀಡೆ, ದೇಶ- ವಿದೇಶ, ಸಿನಿಮಾ, ವಿಜ್ಞಾನ- ತಂತ್ರಜ್ಞಾನ ಇತ್ಯಾದಿ ವೈವಿಧ್ಯಯಮ ವಿಷಯಗಳ ಬಗ್ಗೆ ಬರೆಯುವ ಇವರಿಗೆ, ನಾನಾ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಈವರೆಗೆ 16 ವರ್ಷ ಕೆಲಸ ಮಾಡಿದ ಅನುಭವವಿದೆ. ಫೋಟೋಗ್ರಫಿ ಇವರ ಅಚ್ಚುಮೆಚ್ಚಿನ ಹವ್ಯಾಸ. ಸಿನಿಮಾ, ಸಾಕ್ಷ್ಯಚಿತ್ರ, ಸಾಹಿತ್ಯ, ವಿಡಿಯೋ ಸಂಕಲನ, ಪತ್ರಿಕೆ ಪುಟ ವಿನ್ಯಾಸ, ಹಾಡುಗಾರಿಕೆ, ಚಿತ್ರಕಲೆ, ಅನಿಮೇಶನ್, ಸಂಗೀತದಲ್ಲಿಯೂ ಆಸಕ್ತಿಯಿದೆ.... ಇನ್ನಷ್ಟು ಓದಿ

ಮುಂದಿನ ಲೇಖನ