ಆ್ಯಪ್ನಗರ

ಧಾರವಾಡ ಐಐಟಿಗೆ ಹುಬ್ಬಳ್ಳಿಯಲ್ಲಿ ಶಂಕುಸ್ಥಾಪನೆ: ಆಕ್ಷೇಪ

ಹುಬ್ಬಳ್ಳಿ: ಧಾರವಾಡದಲ್ಲಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಕಟ್ಟಡ ನಿರ್ಮಾಣಕ್ಕೆ ಹುಬ್ಬಳ್ಳಿ ಗಬ್ಬೂರದಲ್ಲಿ ಶಂಕುಸ್ಥಾಪನೆ ನೆರವೇರಿಸುವುದು ಎಷ್ಟು ಸರಿ ಎಂದು ಹು-ಧಾ ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕ ಗಣೇಶ ಟಗರಗುಂಟಿ ಆಕ್ಷೇಪಿಸಿದ್ದಾರೆ.

Vijaya Karnataka 9 Feb 2019, 5:00 am
ಹುಬ್ಬಳ್ಳಿ: ಧಾರವಾಡದಲ್ಲಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಕಟ್ಟಡ ನಿರ್ಮಾಣಕ್ಕೆ ಹುಬ್ಬಳ್ಳಿ ಗಬ್ಬೂರದಲ್ಲಿ ಶಂಕುಸ್ಥಾಪನೆ ನೆರವೇರಿಸುವುದು ಎಷ್ಟು ಸರಿ ಎಂದು ಹು-ಧಾ ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕ ಗಣೇಶ ಟಗರಗುಂಟಿ ಆಕ್ಷೇಪಿಸಿದ್ದಾರೆ.
Vijaya Karnataka Web dharwad to build iit in hubli objection
ಧಾರವಾಡ ಐಐಟಿಗೆ ಹುಬ್ಬಳ್ಳಿಯಲ್ಲಿ ಶಂಕುಸ್ಥಾಪನೆ: ಆಕ್ಷೇಪ


ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಐಐಟಿ ಸ್ಥಾಪಿಸುವ ಸಲುವಾಗಿ ಹಿಂದಿನ ಕಾಂಗ್ರೆಸ್‌ ಸರಕಾರ ಧಾರವಾಡದಲ್ಲಿ 450 ಎಕರೆ ಜಮೀನನ್ನು ಉಚಿತವಾಗಿ ನೀಡಿದೆ. ಹುಬ್ಬಳ್ಳಿಯಲ್ಲಿ ನಡೆಯುವ ಬಿಜೆಪಿ ಚುನಾವಣೆ ರಾರ‍ಯಲಿ ಸಂದರ್ಭದಲ್ಲಿಯೇ ಅದು ಸಹ ರಾರ‍ಯಲಿ ಪಕ್ಕದಲ್ಲಿಯೇ ಸರಕಾರಿ ಕಾರ್ಯಕ್ರಮ ಆಯೋಜಿಸಿ ಪ್ರಧಾನಿ ಮೋದಿಯವರಿಂದ ಶಂಕುಸ್ಥಾಪನೆ, ಉದ್ಘಾಟನೆ ನಡೆಸುವುದು ಖಂಡನೀಯ ಎಂದಿದ್ದಾರೆ. ಈ ಎರಡೂ ಕಾರ್ಯಕ್ರಮಗಳನ್ನು ಬೇರೆ ಬೇರೆ ಕಡೆಗಳಲ್ಲಿ ಆಯೋಜಿಸಬೇಕೆಂದು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ