ಆ್ಯಪ್ನಗರ

92 ಸಂತ್ರಸ್ತರಿಗೆ ಪರಿಹಾರ ಧನದ ಚೆಕ್‌ ವಿತರಣೆ

ಹುಬ್ಬಳ್ಳಿ : ಪ್ರವಾಹದಿಂದ ಉತ್ತರ ಕರ್ನಾಟಕ ಭಾಗದಲ್ಲಿನ ಜನ- ಜಾನುವಾರು ಸಾಕಷ್ಟು ಸಂಕಷ್ಟಕ್ಕೀಡಾಗಿದ್ದು, ಕೂಡಲೇ ಕೇಂದ್ರ ಸರಕಾರ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ಹೆಚ್ಚಿನ ಪರಿಹಾರ ಧನ ಮಂಜೂರು ಮಾಡಬೇಕು ಎಂದು ಶಾಸಕ ಪ್ರಸಾದ ಅಬ್ಬಯ್ಯ ಆಗ್ರಹಿಸಿದರು.

Vijaya Karnataka 15 Aug 2019, 5:00 am
ಹುಬ್ಬಳ್ಳಿ : ಪ್ರವಾಹದಿಂದ ಉತ್ತರ ಕರ್ನಾಟಕ ಭಾಗದಲ್ಲಿನ ಜನ- ಜಾನುವಾರು ಸಾಕಷ್ಟು ಸಂಕಷ್ಟಕ್ಕೀಡಾಗಿದ್ದು, ಕೂಡಲೇ ಕೇಂದ್ರ ಸರಕಾರ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ಹೆಚ್ಚಿನ ಪರಿಹಾರ ಧನ ಮಂಜೂರು ಮಾಡಬೇಕು ಎಂದು ಶಾಸಕ ಪ್ರಸಾದ ಅಬ್ಬಯ್ಯ ಆಗ್ರಹಿಸಿದರು.
Vijaya Karnataka Web distribution of compensation check to 92 victims
92 ಸಂತ್ರಸ್ತರಿಗೆ ಪರಿಹಾರ ಧನದ ಚೆಕ್‌ ವಿತರಣೆ


ನಗರದಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಯಿಂದ ಮನೆ ಕಳೆದುಕೊಂಡು ಸಂತ್ರಸ್ತರಾದ 92 ಜನರಿಗೆ ಬುಧವಾರ ಒಟ್ಟು 32.55 ಲಕ್ಷ ರೂ. ಮೊತ್ತದ ಪರಿಹಾರ ಧನದ ಚೆಕ್‌ ವಿತರಿಸಿ ಅವರು ಮಾತನಾಡಿದರು.

ಈ ಹಿಂದೆ 2009ರಲ್ಲಿ ರಾಜ್ಯದಲ್ಲಿ ಪ್ರವಾಹ ಸಂಭವಿಸಿದಾಗ ಅಂದಿನ ಪ್ರಧಾನಿ ಮನಮೋಹನ ಸಿಂಗ್‌ ಅವರು 2 ದಿನಗಳ ಕಾಲ ವೈಮಾನಿಕ ಸಮೀಕ್ಷೆ ಮಾಡಿ 2 ಸಾವಿರ ಕೋ.ರೂ. ಪರಿಹಾರ ಧನ ಮಂಜೂರು ಮಾಡಿದ್ದರು. ಆದರೆ, ಇಂದಿನ ಪ್ರಧಾನಿ ಮೋದಿ ಅವರು ರಾಜ್ಯದಲ್ಲಿನ ಪ್ರವಾಹ ಹಾನಿ ಕುರಿತು ಕಿಂಚಿತ್ತು ಕಾಳಜಿ ವಹಿಸಿದಂತಿಲ್ಲ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ಕೂಡಲೇ ರಾಜ್ಯದಲ್ಲಿನ ಪ್ರವಾಹ ಹಾನಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಹೆಚ್ಚಿನ ಪರಿಹಾರ ಧನ ಮಂಜೂರು ಮಾಡಿ ಸಂತ್ರಸ್ತರಿಗೆ ನೆರವಾಗಬೇಕು ಎಂದು ಒತ್ತಾಯಿಸಿದರು.

ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಲ್ತಾಫ್‌ ಹಳ್ಳೂರು, ಪಾಲಿಕೆ ಮಾಜಿ ಸದಸ್ಯರಾದ ಗಣೇಶ ಟಗರಗುಂಟಿ, ಬಶೀರ್‌ ಗುಡಮಾಲ್‌, ಮುಖಂಡರಾದ ಶ್ರೀನಿವಾಸ ಬೆಳದಡಿ, ವಾದಿರಾಜ ಕುಲಕರ್ಣಿ, ತುಷಾರ್‌ ಕವಳೇಕರ್‌, ಅಜೀಜುಲ್ಲಾ ಪಟ್ಟಣಕಾರಿ, ಸೈಯದ್‌ ಮದನ್‌, ಅಸ್ಲಂ ಮುಲ್ಲಾ, ಭಾಸ್ಕರ್‌ ಡೋಂಗ್ರೆ, ತಲಾಟಿಗಳಾದ ಪರಮಾನಂದ ಶಿವಳ್ಳಿಮಠ, ಗುರುನಾಥ ಸುಣಗಾರ, ಗಿರೀಶ ಬಾರದ್ವಾಡ, ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ