ಆ್ಯಪ್ನಗರ

ಪಕ್ಷ ಸಂಘಟನೆ: ರಣದೀಪ್ ಸಿಂಗ್ ಸುರ್ಜೇವಾಲ ಜೊತೆಗೆ ಡಿಕೆಶಿ, ಸಿದ್ದರಾಮಯ್ಯ ಸಂವಾದ

ಪಕ್ಷ ಸಂಘಟನೆ ಮತ್ತು ಬಲವರ್ಧನೆ ಮಾಡುವ ನಿಟ್ಟಿನಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಂವಾದ ನಡೆಸಿದರು.

Vijaya Karnataka Web 11 Jan 2021, 12:52 pm
ಹುಬ್ಬಳ್ಳಿ: ಪಕ್ಷ ಸಂಘಟನೆ, ಬಲವರ್ಧನೆ, ಹೋರಾಟದ ರೂಪುರೇಷೆಗಳ ಕುರಿತಾಗಿ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಹೊತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿಡಿಯೋ ಸಂವಾದ ನಡೆಸಿದರು.
Vijaya Karnataka Web meeting


ದೆಹಲಿಯಿಂದ ಕರ್ನಾಟಕದ ಪಕ್ಷದ ಮುಖಂಡರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಹುಬ್ಬಳ್ಳಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಅವರು ಪಾಲ್ಗೊಂಡರು.

ಹಿಂದೂ-ಮುಸ್ಲಿಮ್ ಮತೀಯವಾದಿ ಸಂಘಟನೆ, ಪಕ್ಷಗಳ ಜತೆ ‘ಸಮಾನ ಅಂತರ’ ಕಾಯ್ದುಕೊಳ್ಳಲು ಕಾಂಗ್ರೆಸ್ ನಿರ್ಧಾರ!

ಕಾಂಗ್ರೆಸ್ ಪಕ್ಷ ಸಂಘಟನೆಯ ನಿಟ್ಟಿನಲ್ಲಿ ವಿಭಾಗವಾರು ಸಂಕಲ್ಪ ಸಮಾವೇಶಗಳನ್ನು ಹಮ್ಮಿಕೊಂಡಿದೆ. ಇದರ ಭಾಗವಾಗಿ ಬೆಳಗಾವಿ ವಿಭಾಗ ಮಟ್ಟದ ಸಂಕಲ್ಪ ಸಮಾವೇಶ ಕೂಡಾ ಸೋಮವಾರ ನಡೆದಿದೆ. ಒಟ್ಟು ನಾಲ್ಕು ವಿಭಾಗವಾರು ಸಮಾವೇಶ ನಡೆಸುವ ಮೂಲಕ ಪಕ್ಷದದ ಮುಂದಿನ ಸಂಘಟನಾ ಸ್ವರೂಪದ ಬಗ್ಗೆ ಅಭಿಪ್ರಾಯ ಸಂಘಟಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರಮುಖರ ನಾಯಕರ ಜೊತೆಗೆ ರಣದೀಪ್ ಸುರ್ಜೆವಾಲ ವಿಡಿಯೋ ಸಂವಾದ ನಡೆಸಿದರು.

ಸಂವಾದದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅದ್, ಶಾಸಕರಾದ ಶಿವಾನಂದ ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಮಹಂತೇಶ್ ಕೌಜಲಗಿ, ಪ್ರಸಾದ್ ಅಬ್ಬಯ್ಯ ಕುಸುಮಾ ಶಿವಳ್ಳಿ, ಎಂಎಲ್ಸಿಗಳಾದ ಬಿ.ಕೆ. ಹರಿಪ್ರಸಾದ್, ಶ್ರೀನಿವಾಸ್ ಮಾನೆ, ಪ್ರಕಾಶ್ ರಾಥೋಡ್, ಮಾಜಿ ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ, ಮಾಜಿ ಸಂಸದ ಚಂದ್ರಪ್ಪ, ಕೆಪಿಸಿಸಿ ಮಾಧ್ಯಮ ವಿಭಾಗದ ಉಪ ಮುಖ್ಯಸ್ಥ ವಿ.ಆರ್. ಸುದರ್ಶನ್ ಮತ್ತಿತರ ಮುಖಂಡರು ಉಪಸ್ಥಿತದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ